ಸಿ. ಟಿ. ರವಿ ಕುಲ, ಗೋತ್ರ ಇಲ್ಲದ ಮನುಷ್ಯ; ರಮಾನಾಥ್ ರೈ
ಮಂಗಳೂರು, ಏಪ್ರಿಲ್ 19; " ಸಿ. ಟಿ. ರವಿ ಒಬ್ಬ ಕುಲ, ಗೋತ್ರ ಇಲ್ಲದ ಮನುಷ್ಯ. ತನ್ನ ಕುಲ ಗೋತ್ರ ಯಾವುದು ಅಂತಾ ಅವನಿಗೆ ಗೊತ್ತಿಲ್ಲ. ಸಿ. ಟಿ. ರವಿ ಮಾತಿಗೆ ಅಷ್ಟು ಮಹತ್ವ ಇಲ್ಲ" ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ರಮಾನಾಥ್ ರೈ.
ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಸಿ. ಟಿ. ರವಿ ವಿರುದ್ಧ ಏಕ ವಚನದಲ್ಲೇ ವಾಗ್ದಾಳಿ ನಡೆಸಿದರು.
ಸಿ. ಟಿ. ರವಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ವಿರುದ್ಧ ಟೀಕೆಯನ್ನು ನಡೆಸಿದ್ದರು. " ಸಿ. ಟಿ. ರವಿ ಯಾವುದೋ ಪ್ರಚೋದನೆ ಮಾಡಿ, ರಾಜಕಾರಣ ಮಾಡಿಕೊಂಡು ಯಾವುದೋ ಸ್ಥಾನ ಮಾನಕ್ಕೆ ಬಂದಿರಬಹುದು. ಜನಸೇವೆ ಮಾಡಿ ಅವರು ಸ್ಥಾನ ಮಾನಕ್ಕೆ ಬಂದವರಲ್ಲ" ಎಂದು ಆರೋಪಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೆಸರು ಪ್ರಸ್ತಾಪಿಸದೇ ವಾಗ್ದಾಳಿ ನಡೆಸಿದ ರಮಾನಾಥ್ ರೈ, "ಒಬ್ಬರು ಕಾಂಗ್ರೆಸ್ ಮುಳುಗುವ ಹಡಗು ಅಂತಾ ಹೇಳುತ್ತಾರೆ. ಆದರೆ ಹಾಗೆ ಹೇಳಿರುವವರ ಅಜ್ಜ-ಪಿಜ್ಜನು ಕೂಡಾ ಕಾಂಗ್ರೆಸ್ ನಲ್ಲಿ ಇದ್ದಿರಬಹುದು. ಇವರ ಅಜ್ಜ-ಪಿಜ್ಜ ಕೂಡಾ ಕಾಂಗ್ರೆಸ್ ಹಡಗಿನಲ್ಲಿಯೇ ಕೂತು ಬಂದಿರಬಹುದು" ಎಂದರು.
"ನಮ್ಮ ಪಕ್ಷದ ಬಗ್ಗೆ ಚಿಂತೆ ಮಾಡೋದು ಬೇಡ. ನಮ್ಮ ಹಡಗಿನಲ್ಲಿ ನೀರು ತುಂಬಿದೆ. ನಮ್ಮ ಮನೆ ಹೇಗಿರಬೇಕೆಂದು ಎನ್ನೋದು ನಮಗೆ ಬಿಟ್ಟಿರೋದು. ಉಳಿದವರು ಚಿಂತೆ ಮಾಡುವ ಅವಶ್ಯಕತೆ ಇಲ್ಲ" ಅಂತಾ ರಮಾನಾಥ್ ರೈ ವಾಗ್ದಾಳಿ ನಡೆಸಿದರು.
"ಸರ್ಕಾರ ಕೊರೊನಾ ನಿಯಂತ್ರಣ ಮಾಡುವಲ್ಲಿ ಸಂಪೂರ್ಣ ವಿಫಲಗೊಂಡಿದೆ. ಕೇವಲ ಬಾಯಿ ಮಾತಿನ ಉಪಚಾರದಿಂದ ಕೊರೊನಾ ನಿಯಂತ್ರಣ ಆಗಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಕೋವಿಡ್ ನಿಯಂತ್ರಣ ಮಾಡುವಲ್ಲಿ ಸಂಪೂರ್ಣ ಎಡವಿದ್ದಾರೆ" ಎಂದು ಆರೋಪಿಸಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications