ಸಿ. ಟಿ. ರವಿ ಕುಲ, ಗೋತ್ರ ಇಲ್ಲದ ಮನುಷ್ಯ; ರಮಾನಾಥ್ ರೈ
ಮಂಗಳೂರು, ಏಪ್ರಿಲ್ 19; " ಸಿ. ಟಿ. ರವಿ ಒಬ್ಬ ಕುಲ, ಗೋತ್ರ ಇಲ್ಲದ ಮನುಷ್ಯ. ತನ್ನ ಕುಲ ಗೋತ್ರ ಯಾವುದು ಅಂತಾ ಅವನಿಗೆ ಗೊತ್ತಿಲ್ಲ. ಸಿ. ಟಿ. ರವಿ ಮಾತಿಗೆ ಅಷ್ಟು ಮಹತ್ವ ಇಲ್ಲ" ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ರಮಾನಾಥ್ ರೈ.
ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಸಿ. ಟಿ. ರವಿ ವಿರುದ್ಧ ಏಕ ವಚನದಲ್ಲೇ ವಾಗ್ದಾಳಿ ನಡೆಸಿದರು.
ಸಿ. ಟಿ. ರವಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ವಿರುದ್ಧ ಟೀಕೆಯನ್ನು ನಡೆಸಿದ್ದರು. " ಸಿ. ಟಿ. ರವಿ ಯಾವುದೋ ಪ್ರಚೋದನೆ ಮಾಡಿ, ರಾಜಕಾರಣ ಮಾಡಿಕೊಂಡು ಯಾವುದೋ ಸ್ಥಾನ ಮಾನಕ್ಕೆ ಬಂದಿರಬಹುದು. ಜನಸೇವೆ ಮಾಡಿ ಅವರು ಸ್ಥಾನ ಮಾನಕ್ಕೆ ಬಂದವರಲ್ಲ" ಎಂದು ಆರೋಪಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೆಸರು ಪ್ರಸ್ತಾಪಿಸದೇ ವಾಗ್ದಾಳಿ ನಡೆಸಿದ ರಮಾನಾಥ್ ರೈ, "ಒಬ್ಬರು ಕಾಂಗ್ರೆಸ್ ಮುಳುಗುವ ಹಡಗು ಅಂತಾ ಹೇಳುತ್ತಾರೆ. ಆದರೆ ಹಾಗೆ ಹೇಳಿರುವವರ ಅಜ್ಜ-ಪಿಜ್ಜನು ಕೂಡಾ ಕಾಂಗ್ರೆಸ್ ನಲ್ಲಿ ಇದ್ದಿರಬಹುದು. ಇವರ ಅಜ್ಜ-ಪಿಜ್ಜ ಕೂಡಾ ಕಾಂಗ್ರೆಸ್ ಹಡಗಿನಲ್ಲಿಯೇ ಕೂತು ಬಂದಿರಬಹುದು" ಎಂದರು.
"ನಮ್ಮ ಪಕ್ಷದ ಬಗ್ಗೆ ಚಿಂತೆ ಮಾಡೋದು ಬೇಡ. ನಮ್ಮ ಹಡಗಿನಲ್ಲಿ ನೀರು ತುಂಬಿದೆ. ನಮ್ಮ ಮನೆ ಹೇಗಿರಬೇಕೆಂದು ಎನ್ನೋದು ನಮಗೆ ಬಿಟ್ಟಿರೋದು. ಉಳಿದವರು ಚಿಂತೆ ಮಾಡುವ ಅವಶ್ಯಕತೆ ಇಲ್ಲ" ಅಂತಾ ರಮಾನಾಥ್ ರೈ ವಾಗ್ದಾಳಿ ನಡೆಸಿದರು.
"ಸರ್ಕಾರ ಕೊರೊನಾ ನಿಯಂತ್ರಣ ಮಾಡುವಲ್ಲಿ ಸಂಪೂರ್ಣ ವಿಫಲಗೊಂಡಿದೆ. ಕೇವಲ ಬಾಯಿ ಮಾತಿನ ಉಪಚಾರದಿಂದ ಕೊರೊನಾ ನಿಯಂತ್ರಣ ಆಗಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಕೋವಿಡ್ ನಿಯಂತ್ರಣ ಮಾಡುವಲ್ಲಿ ಸಂಪೂರ್ಣ ಎಡವಿದ್ದಾರೆ" ಎಂದು ಆರೋಪಿಸಿದರು.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications