ನಳಿನ್ ವೈಫಲ್ಯವೇ ದ.ಕ.ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರಣವಾಗಲಿದೆ:ರಮಾನಾಥ್ ರೈ
ಮಂಗಳೂರು, ಮಾರ್ಚ್ 28: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಖಾಡ ರಂಗೇರತೊಡಗಿದೆ. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ. ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ಆರಂಭಿಸಿದೆ. ನಳಿನ್ ಕುಮಾರ್ ಕಟೀಲ್ ಅವರ ವೈಫಲ್ಯಗಳನ್ನೇ ಮುಂದಿಟ್ಟುಕೊಂಡು ಟಾರ್ಗೆಟ್ ಮಾಡುತ್ತಿದೆ.
ಈ ಕುರಿತು ಮಾತನಾಡಿರುವ ಮಾಜಿ ಸಚಿವ ರಮಾನಾಥ್ ರೈ, ಕಳೆದ ಹತ್ತು ವರ್ಷಗಳಿಂದ ಸಂಸದರಾಗಿದ್ದ ನಳಿನ್ ಕುಮಾರ್ ಕಟೀಲ್ ಜಿಲ್ಲೆಯ ಅಭಿವೃದ್ದಿಗೆ ನೀಡಿದ ಕೊಡುಗೆ ಏನೇನೂ ಇಲ್ಲ. ಇವರ ವೈಫಲ್ಯವೇ ಈ ಬಾರಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರಣವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕಡಬದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ರಮಾನಾಥ್ ರೈ, ಬಿಜೆಪಿ ಜಿಲ್ಲೆಯಲ್ಲಿ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಜನರನ್ನು ಮರಳು ಮಾಡುತ್ತಿದೆ. ಜನರನ್ನು ಮೋಸ ಮಾಡಿ ಕೋಮು ಭಾವನೆಗಳನ್ನು ಕೆರಳಿಸಿ ಅದನ್ನೇ ಮತಗಳಾಗಿ ಪರಿವರ್ತಿಸಿ ಕ್ಷೇತ್ರದಲ್ಲಿ ಗೆಲ್ಲುತ್ತಾ ಬಂದಿದೆ ಎಂದು ಕಿಡಿಕಾರಿದರು.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಳೆದ 30 ವರ್ಷಗಳಿಂದ ಬಿಜೆಪಿ ಜನರನ್ನು ಭಾವನಾತ್ಮಕವಾಗಿ ಕೆರಳಿಸಿ ಗೆಲ್ಲುತ್ತಾ ಬಂದಿರುವುದು ನಮ್ಮ ಜಿಲ್ಲೆಯ ದುರಂತ ಎಂದು ರಮಾನಾಥ್ ರೈ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಸದರು ಇರುವಾಗ ಮಂಗಳೂರಿನ ಬಂದರು, ವಿವಿಧ ಕೈಗಾರಿಕೆಗಳು, ರೈಲ್ವೆ ನಿಲ್ದಾಣ, ಪಾಸ್ ಪೋರ್ಟ್, ಪ್ರಾದೇಶಿಕ ಕಚೇರಿಗಳು, ವಿಮಾನ ನಿಲ್ದಾಣ, ಮುಂತಾದ ಮಹತ್ತರವಾದ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಜನ ಮಾನಸದಲ್ಲಿ ಉಳಿದುಕೊಂಡಿದ್ದಾರೆ. ಆದರೆ ಬಿಜೆಪಿ ಸಂಸದರ ಕೊಡುಗೆ ಈ ಜಿಲ್ಲೆಗೇನು ? ಎಂದು ರಮಾನಾಥ್ ರೈ ಪ್ರಶ್ನಿಸಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications