ಫೆ.6, 7ರಂದು ರಾಷ್ಟ್ರೀಯ ಬಂಟ ಮಹಾಸಮ್ಮೇಳನ
ಬೆಂಗಳೂರು, ಫೆಬ್ರವರಿ 02 : ಇಂಟರ್ ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ (ರಿ) ಫೆ.6 ಮತ್ತು 7ರಂದು 'ರಾಷ್ಟ್ರೀಯ ಬಂಟ ಮಹಾಸಮ್ಮೇಳನ -2016'ಅನ್ನು ಆಯೋಜಿಸಿದೆ. ದೇಶದ ವಿವಿಧ ಭಾಗಗಳಲ್ಲಿ ನೆಲೆಸಿರುವ ಬಂಟ ಸಮುದಾಯದ ಬಂಧು-ಭಾಂದವರನ್ನು ಒಂದೇ ಚಪ್ಪರದಡಿ ತಂದು ವಿಚಾರವಿನಿಮಯಕ್ಕೆ ಅವಕಾಶ ಮಾಡಿಕೊಡುವುದು ಸಮ್ಮೇಳನದ ಉದ್ದೇಶವಾಗಿದೆ.
ಮಂಗಳೂರಿನ ಪುರಭವನದಲ್ಲಿ 'ರಾಷ್ಟ್ರೀಯ ಬಂಟ ಮಹಾಸಮ್ಮೇಳನ -2016' ನಡೆಯಲಿದ್ದು, ಫೆ.6ರ ಶನಿವಾರ ಮಧ್ಯಾಹ್ನ ಸಮ್ಮೇಳನಾಧ್ಯಕ್ಷ ಸಾಹಿತಿ ಡಾ.ಡಿ. ಕೆ. ಚೌಟ ಅವರನ್ನು ಸಾಂಪ್ರದಾಯಿಕ ಸ್ವಾಗತದ ಮೂಲಕ ಮಂಗಳೂರು ವಿವಿ ಕಾಲೇಜು ಆವರಣದಿಂದ ಪುರಭವನಕ್ಕೆ ಕರೆದುಕೊಂಡು ಬರಲಾಗುತ್ತದೆ. [ಮಂಗಳೂರು : ಬಂಟ್ಸ್ ಹಾಸ್ಟೆಲ್ ವೃತ್ತ ಲೋಕಾರ್ಪಣೆ]

ಶನಿವಾರ ಸಂಜೆ ಘಂಟೆ 4 ಗಂಟೆಗೆ ಪುರಭವನದ ಆವರಣದಲ್ಲಿ ನಿರ್ಮಿಸಲಾದ ಸಭಾಂಗಣದಲ್ಲಿ ನಾಡೋಜ ಕೈಯಾರ ಕಿಂಜ್ಞಣ್ಣ ರೈ ವೇದಿಕೆಯಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಡೆ ಅವರು ಸಮ್ಮೇಳನ ಉದ್ಘಾಟನೆ ಮಾಡಲಿದ್ದಾರೆ. ಶ್ರೀ ಕ್ಷೇತ್ರ ಕೇಮಾರು ಶ್ರೀ ಈಶ ವಿಠಲದಾಸ ಸ್ವಾಮೀಜಿ, ಬಾರ್ಕೂರು ಬಂಟ ಮಹಾಸಂಸ್ಥಾನದ ಶ್ರೀ ಡಾ.ವಿಶ್ವ ಸಂತೋಷ ಭಾರತಿ ಶ್ರೀಗಳು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. [ಜಾತಿ ಆಧಾರಿತ ಜನಗಣತಿ: ಬಂಟರು ಏನ್ನಂತಾರೆ?]
ಇಂಟರ್ ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ (ರಿ) ನಡೆಸುತ್ತಿರುವ ಜನಯೋಪಯೋಗಿ ಕಾರ್ಯಕ್ರಮಗಳ ಕುರಿತ 'ಸದಾಶಯ' ಎಂಬ ತ್ರೈಮಾಸಿಕ ಪತ್ರಿಕೆಯನ್ನು ಟ್ರಸ್ಟ್ ಹೊರತರುತ್ತಿದ್ದು, ಅದರ ಚೊಚ್ಚಲ ಸಂಚಿಕೆಯನ್ನು ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಎನ್. ವಿನಯ ಹೆಗ್ಡೆ ಬಿಡುಗಡೆಗೊಳಿಸಲಿದ್ದಾರೆ. ಸಂಜೆ 7 ಗಂಟೆಯಿಂದ ತುಳುನಾಡ ವೈಭವವನ್ನು ಪ್ರತಿಬಿಂಬಿಸುವ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಫೆಬ್ರವರಿ 7ರಂದು ಬೆಳಗ್ಗೆ 9.30ರಿಂದ ಮಹಿಳಾ ಸಮಾವೇಶ, ಬೆಳಗ್ಗೆ 11 ಗಂಟೆಗೆ 'ಸಾಮಾಜಿಕ ಸ್ಥಿತ್ಯಂತರದಲ್ಲಿ ಬಂಟರು' ಎಂಬ ವಿಚಾರಗೋಷ್ಠಿ ನಡೆಯಲಿದೆ. ಮಧ್ಯಾಹ್ನ 12 ರಿಂದ 1 ಗಂಟೆಯ ತನಕ ಮುಂಬೈ ಬಂಟರಿಂದ "ತೆಲಿಕೆದ ಕುಸಲ್" ಕಾರ್ಯಕ್ರಮ ನಡೆಯಲಿದೆ.
ಫೆ.7ರಂದು ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಮಾಹೆ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಪ್ರೊ. ಡಾ.ಬಿ.ಎಂ. ಹೆಗ್ಡೆ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ. ಟ್ರಸ್ಟ್ನ ಗೌರವ ಅಧ್ಯಕ್ಷರಾದ ಬಿ. ರಮಾನಾಥ ರೈ, ಗೌರವ ಸಲಹೆಗಾರರಾದ ನಳೀನ್ ಕುಮಾರ್ ಕಟೀಲ್ ಅವರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಂಜೆ 6.30ರಿಂದ 8.30ರವರೆಗೆ 'ಯಂಗ್ ಬಂಟ್ಸ್ ಕಪ್ಲ್ - 2016' ಯುವ ಬಂಟ ಜೋಡಿ ಕಾರ್ಯಕ್ರಮ ನಡೆಯಲಿದ್ದು, ರಾತ್ರಿ ಗಂಟೆಗೆ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರಿಂದ ಸಂಗೀತ ರಸಸಂಜೆ ಕಾರ್ಯಕ್ರಮ ನಡೆಯಲಿದೆ. ಭಾಗವಹಿಸುವ ಎಲ್ಲರಿಗೂ ಫೆಬ್ರವರಿ 6 ಮತ್ತು 7ರಂದು ಬಂಟ ಸಂಪ್ರದಾಯಿಕ ಊಟೋಪಚಾರದ ವ್ಯವಸ್ಥೆ ಕಲ್ಪಿಸಲಾಗಿದೆ.
ಇಂಟರ್ ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ನ ಛೇರ್ಮೆನ್ ಎ. ಸದಾನಂದ ಶೆಟ್ಟಿ, ಗೌರವ ಅಧ್ಯಕ್ಷರಾದ ಬಿ. ರಮಾನಾಥ ರೈ, ಗೌರವ ಸಲಹೆಗಾರರಾದ ನಳೀನ್ ಕುಮಾರ್ ಕಟೀಲ್ ಹಾಗೂ ಕಾರ್ಯಾಧ್ಯಕ್ಷರಾದ ಕೆ. ಅಮರನಾಥ ಶೆಟ್ಟಿ ಅವರು ಎರಡೂ ದಿನದ ಕಾರ್ಯಕ್ರಮಗಳ ಮೇಲುಸ್ತುವಾರಿ ವಹಿಸಿಕೊಂಡಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications