ಬಾಳಿಗಾ ಕೊಲೆ ಪ್ರಕರಣ: ಸರ್ಕಾರಿ ವಿಶೇಷ ಅಭಿಯೋಜಕರಾಗಿ ರವೀಂದ್ರನಾಥ್
ಮಂಗಳೂರು, ಡಿಸೆಂಬರ್. 24 : ಮಾರ್ಚ್ 21 ರಂದು ನಡೆದ ಆರ್ಟಿಐ ಕಾರ್ಯಕರ್ತ ವಿನಾಯಕ ಬಾಳಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ವಿಶೇಷ ಅಭಿಯೋಜಕರನ್ನಾಗಿ ನ್ಯಾಯವಾದಿ ರವೀಂದ್ರನಾಥ್ ಕಾಮತ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ವಿನಾಯಕ ಬಾಳಿಗ ಕೊಲೆ ನಡೆದು 8 ತಿಂಗಳಾದರೂ ಸಮಗ್ರ ತನಿಖೆಯಾಗದ ಕಾರಣ ರವೀಂದ್ರನಾಥ್ ಕಾಮತ್ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿದೆ ಎಂದು ತಿಳಿದು ಬಂದಿದೆ. [ವಿನಾಯಕ್ ಬಾಳಿಗ ಕೊಲೆ ಆರೋಪಿ ನರೇಶ್ ಶೆಣೈ ಶರಣು]

51 ವರ್ಷದ ವಿನಾಯಕ ಪಿ. ಬಾಳಿಗಾ ಅವರನ್ನು 2016 ಮಾರ್ಚ್ 21ರ ಬೆಳಗ್ಗೆ ನಗರದ ಕೊಡಿಯಾಲ್ ಬೈಲ್ ನ ಬೆಸೆಂಟ್ ಸ್ಕೂಲ್ 2 ನೇ ಲೇನ್ ಸ್ಟರ್ಲಿಂಗ್ ಚೇಂಬರ್ ಹಿಂಬದಿ ರಸ್ತೆಯಲ್ಲಿ ಅವರ ಮನೆ ಸಮೀಪ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. [RTI ಬಾಳಿಗಾ ಕೊಲೆ ಪ್ರಕರಣ: ಜಿ ಎಸ್ ಬಿ ಸಮಾಜದ ಸ್ಪಷ್ಟನೆ]
ಮಾರಬರ್ಕೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು.












Click it and Unblock the Notifications