ಕಣ್ಣೂರು ಜಿಲ್ಲೆಯ ಎರಡು ಕಡೆ ಅಯ್ಯಪ್ಪ ಭಕ್ತರಿಗಾಗಿ ವಿಶ್ರಾಂತಿ ಕೇಂದ್ರ ವ್ಯವಸ್ಥೆ
ಕಣ್ಣೂರು, ನವೆಂಬರ್.22:ಶಬರಿಮಲೆ ಯಾತ್ರೆ ಕೈಗೊಳ್ಳುವ ಅಯ್ಯಪ್ಪ ಭಕ್ತರಿಗಾಗಿ ಐಆರ್ ಪಿಸಿ (ಇನಿಷಿಯೇಟಿವ್ ಫಾರ್ ರಿಹಾಬಿಲಿಟೇಷನ್ ಆಂಡ್ ಪಾಲಿಯೇಟಿವ್ ಕೇರ್) ನೇತೃತ್ವದಲ್ಲಿ ಕಣ್ಣೂರು ಜಿಲ್ಲೆಯಲ್ಲಿ ಎರಡು ಕಡೆಗಳಲ್ಲಿ ವಿಶ್ರಾಂತಿ ಕೇಂದ್ರವನ್ನು ತೆರೆಯಲಾಗಿದೆ.
ಕಣ್ಣೂರು ಜಿಲ್ಲೆಯ ಬಕ್ಕಳಂ ನೆಲ್ಲಿಯೋಡ್ ಮತ್ತು ಮುಯುಪಿಲಂಗಾಡು ಎಂಬಲ್ಲಿ ವಿಶ್ರಾಂತಿ ಕೇಂದ್ರ ಕಾರ್ಯಾಚರಿಸುತ್ತಿದೆ. ಮಂಡಲ ವಿಳಕ್ಕು ಮತ್ತು ಮಕರ ಜ್ಯೋತಿಗೆ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಮತ್ತಿತರ ಅಂತಾರಾಜ್ಯಗಳಿಂದ ಶಬರಿಮಲೆ ಯಾತ್ರೆ ಕೈಗೊಳ್ಳುವವರೂ ಸೇರಿದಂತೆ ಭಕ್ತರೂ ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು.
ಮುಯುಪಿಲಂಗಾಡ್ ಶ್ರೀ ಕುರುಂಭ ಭಗವತಿ ಕ್ಷೇತ್ರ ಸಮೀಪದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಸಹಕಾರದೊಂದಿಗೆ ವಿಶ್ರಾಂತಿ ಕೇಂದ್ರ ಕಾರ್ಯಾಚರಿಸಲಿದೆ. ಐದು ಹೊತ್ತು ಆಹಾರ, ವಿಶ್ರಾಂತಿ ಪಡೆಯಲು ವ್ಯವಸ್ಥೆ ಮಾಡಲಾಗಿದೆ.

ಅಷ್ಟೇ ಅಲ್ಲ, ಅಲೋಪತಿ, ಆಯುರ್ವೇದ, ಹೋಮಿಯೋ ಚಿಕಿತ್ಸಾ ಕ್ಲಿನಿಕ್ ಗಳನ್ನೂ ತೆರೆಯಲಾಗಿದೆ. ವೈದ್ಯರು, ಪ್ಯಾರಾ ಮೆಡಿಕಲ್ ಸಿಬ್ಬಂದಿಗಳು ಮತ್ತು ಸ್ವಯಂ ಸೇವಕರು ಇಲ್ಲಿಗೆ ಆಗಮಿಸುವ ಅಯ್ಯಪ್ಪ ಭಕ್ತರಿಗೆ ಸಹಾಯಕ್ಕೆ ಸದಾ ಸಿದ್ಧರಾಗಿರುತ್ತಾರೆ.
ಬಕ್ಕಳಂನಲ್ಲಿ ಕಳೆದ ಮೂರು ವರ್ಷಗಳಿಂದ ಐಆರ್ ಪಿಸಿ ನೇತೃತ್ವದಲ್ಲಿ ವಿಶ್ರಾಂತಿ ಕೇಂದ್ರ ಕಾರ್ಯಾಚರಿಸುತ್ತಿದೆ. ಮುಯುಪ್ಪಿಲಂಗಾಡ್ ನಲ್ಲಿ ಈ ಬಾರಿ ಹೊಸತಾಗಿ ವಿಶ್ರಾಂತಿ ಕೇಂದ್ರ ಆರಂಭಿಸಲಾಗಿದೆ. ಪಾಪಿನಿಶ್ಸೇರಿ ಎಂಬಲ್ಲಿ ಹೊಸ ಮೇಲ್ಸೇತುವೆ ಉದ್ಘಾಟನೆಗೊಂಡ ಬಳಿಕ ಈ ಮಾರ್ಗದಲ್ಲಿ ಬರುವ ಭಕ್ತರ ಸಂಖ್ಯೆ ಹೆಚ್ಚಾಗಿರುವ ಕಾರಣ ಮುಯುಪ್ಪಿಲಂಗಾಡ್ ನಲ್ಲಿ ಹೊಸ ವಿಶ್ರಾಂತಿ ಕೇಂದ್ರ ತೆರೆಯಲಾಗಿದೆ.
ಬಕ್ಕಳಂನಲ್ಲಿನ ಕೇಂದ್ರಕ್ಕೆ ಕಳೆದ ವರ್ಷ ಒಂದೂವರೆ ಲಕ್ಷಕ್ಕೂ ಮಿಕ್ಕಿ ಭಕ್ತರು ಆಗಮಿಸಿ ವಿಶ್ರಾಂತಿ ಪಡೆದಿದ್ದರು ಎಂದು ಐಆರ್ ಪಿಸಿ ಮಾರ್ಗದರ್ಶಕ ಸಮಿತಿ ಅಧ್ಯಕ್ಷ ಪಿ.ಜಯರಾಜನ್ ತಿಳಿಸಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications