ಮಂಗಳೂರು: ಕಟ್ಟಡದ ತಳ ಭಾಗದಲ್ಲಿದ್ದ 10ಸಾವಿರಕ್ಕೂ ಅಧಿಕ ಮೀನುಗಳ ಸ್ಥಳಾಂತರ
ಮಂಗಳೂರು, ನವೆಂಬರ್27: ಬೃಹತ್ ಮರಗಳನ್ನು ಸ್ಥಳಾಂತರ ಮಾಡುವ ಕಾರ್ಯವನ್ನು ಮಂಗಳೂರಿನ ಪರಿಸರ ಪ್ರೇಮಿ ಮಾಡಿದ್ದರು. ಇದೀಗ ಅದೇ ಮಾದರಿಯಲ್ಲಿ ಮೀನುಗಳನ್ನು ರಕ್ಷಿಸಲು ಅವುಗಳನ್ನು ಸ್ಥಳಾಂತರ ಮಾಡುವ ಕಾರ್ಯ ಭರದಿಂದ ಸಾಗಿದೆ.
ಕೊಡಿಯಾಲಬೈಲ್ನ ಟಿಎಂಎಪೈ ಕನ್ವೆನ್ಷನ್ ಸೆಂಟರ್ನ ಮುಂಭಾಗದ ನಿರ್ಮಾಣ ಹಂತದಲ್ಲಿರುವ ಕಟ್ಟಡದ ತಳಭಾಗದ ಮೂರು ಎಕರೆ ಜಾಗದಲ್ಲಿ ತುಂಬಿಕೊಂಡಿರುವ ನೀರಿನಲ್ಲಿದ್ದ ಸಾವಿರಾರು ಮೀನುಗಳನ್ನು ಸಂರಕ್ಷಿಸಲಾಗಿದೆ. ಇಲ್ಲಿನ ಮೀನುಗಳನ್ನು ಬಲೆ ಹಾಕಿ ನಾಜೂಕಾಗಿ ಹಿಡಿದು ನಗರದ ಕಾವೂರು ಕೆರೆ ಹಾಗೂ ಮಂಗಳಾದೇವಿ ಸಮೀಪದ ಗುಜ್ಜರಕೆರೆಗೆ ಬಿಡಲಾಗಿದೆ.
ಮಂಗಳೂರಿನ ಪರಿಸರ ಪ್ರೇಮಿಗಳಾದ ಜೀತ್ ಮಿಲನ್ ರೋಚ್, ಭುವನ್ ದೇವಾಡಿಗ, ಸೆಲ್ಮಾ, ನಿಧಿ ಹಾಗೂ ಅತೀಕ್ ಎನ್ನುವವರ ತಂಡ ಮೀನುಗಳನ್ನು ಸಂರಕ್ಷಣೆ ಮಾಡಿದ್ದಾರೆ. ಈ ತಂಡ ಬರೋಬ್ಬರಿ 10ಸಾವಿರಕ್ಕೂ ಅಧಿಕ ಮೀನುಗಳನ್ನು ರಕ್ಷಿಸಿದ್ದಾರೆ.

ನಾರ್ತನ್ ಸ್ಕೈ ಮಾಲೀಕರ ನಿರ್ಮಾಣ ಹಂತದ ಕಟ್ಟಡ ಸಾಕಷ್ಟು ಕಾಲದಿಂದ ಕಾಮಗಾರಿ ನಡೆಯದೆ ಹಾಗೆಯೇ ಉಳಿದಿತ್ತು. ಈ ಕಟ್ಟಡದ ತಳಭಾಗದ ಮೂರು ಎಕರೆ ಪ್ರದೇಶದಲ್ಲಿ ನೀರು ತುಂಬಿಕೊಂಡಿತ್ತು. ಈ ನೀರಿನಲ್ಲಿ ಸೊಳ್ಳೆ ಉತ್ಪತ್ತಿಯಾಗದಂತೆ ಮನಪಾ ಆರೋಗ್ಯ ಇಲಾಖೆ, ತಿಲಿಪಿಯಾ(ಸರ್ಕಾರ್) ಮೀನುಮರಿಗಳನ್ನು ಹಾಕಿತ್ತು. ಸಾಕಷ್ಟು ಕಾಲಗಳಿಂದ ನೀರಿನಲ್ಲಿದ್ದ ಈ ಮೀನುಗಳು 10 ಸಾವಿರಕ್ಕಿಂತಲೂ ಅಧಿಕ ಸಂಖ್ಯೆಯಷ್ಟಾಗಿದೆ ಮತ್ತೆ ಕಾಮಗಾರಿ ನಡೆಸುವ ವೇಳೆ ಈ ಮೀನುಗಳ ರಕ್ಷಣಾ ಕಾರ್ಯಾಚರಣೆಯ ಹೊಣೆಯನ್ನು ಜೀತ್ ಮಿಲನ್ ರೋಚ್ ಅವರಿಗೆ ವಹಿಸಿದ್ದರು.

15 -20 ಫೀಟ್ ಆಳದ ಕಟ್ಟಡದ ತಳಭಾಗದಲ್ಲಿ ತುಂಬಿದ್ದ ಅಗಾಧ ಪ್ರಮಾಣದ ನೀರನ್ನು ಖಾಲಿ ಮಾಡುವುದೇ ದುಸ್ತರವಾಗಿತ್ತು. ಅದಕ್ಕಾಗಿ 11 ದಿನಗಳ ಕಾಲ 6 ಪಂಪ್ಗಳನ್ನು ಬಳಸಿ ಪ್ರತಿನಿತ್ಯ ಬೆಳಗ್ಗೆ 6ರಿಂದ ರಾತ್ರಿ 8ರವರೆಗೆ ಖಾಲಿ ಮಾಡಲಾಗಿತ್ತು. ಆ ಬಳಿಕ ಮೀನಿನ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ. ಬಲೆಯನ್ನು ಬಳಸಿ ಮೀನುಗಳನ್ನು ಹಿಡಿಯಲಾಗಿತ್ತು. ಹೀಗೆ ಹಿಡಿದ ಮೀನುಗಳನ್ನು ಕ್ರೇಟ್ ಗಳ ಮೂಲಕ ಸಾಗಿಸಿ ಸುರಕ್ಷಿತವಾಗಿ ಕೆರೆಗಳಿಗೆ ಬಿಡಲಾಗಿದೆ. ಮುಗುಡು ಮೀನುಗಳನ್ನು ಕೂಳೂರು ಫಲ್ಗುಣಿ ನದಿಗೆ ಬಿಡಲಾಗಿದೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications