ಖ್ಯಾತ ಹಿರಿಯ ಯಕ್ಷಗಾನ ಭಾಗವತ ಕುಬಣೂರು ಶ್ರೀಧರ ರಾವ್ ಇನ್ನಿಲ್ಲ
ಮಂಗಳೂರು, ಸೆಪ್ಟೆಂಬರ್ 18 : ಕಟೀಲು ಮೇಳದ ಪ್ರಧಾನ ಬಾಗವತರಾಗಿದ್ದ ಕುಬಣೂರು ಶ್ರೀಧರ ರಾವ್ (66) ಸೋಮವಾರ ಬೆಳಿಗ್ಗೆ ಬೆಂಗಳೂರಿನ ಖಾಸಗಿ ಅಸ್ಪತ್ರೆಯಲ್ಲಿ ನಿದಾನರಾಗಿದ್ದಾರೆ.
ಕೆಲವು ದಿನಗಳ ಹಿಂದೆ ಶ್ರೀಧರ್ ರಾವ್ ಅವರು ಸಿಂಗಾಪುರದಲ್ಲಿರುವ ತಮ್ಮ ಮಗಳ ಮನೆಗೆ ಹೋಗಿದ್ದರು. ಅಲ್ಲಿ ಅವರು ಅನಾರೋಗ್ಯ ಪೀಡಿತರಾದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿಗೆ ಕರೆತಂದು ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಅಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಕಟೀಲು ಮೇಳದ ಪ್ರಧಾನ ಬಾಗವತರಾಗಿದ್ದ ಶ್ರೀಧರ್ ರಾವ್ ಕದ್ರಿಮೇಳ, ನಂದಾವರ, ಅರುವ, ಬಪ್ಪನಾಡು, ಕದ್ರಿ, ಕಾಂತಾವರ ಹೀಗೆ ವಿವಿಧ ಮೇಳಗಳಲ್ಲಿ ಸೇವೆ ಸಲ್ಲಿಸಿ ಕಳೆದ 25 ವರ್ಷಗಳಿಂದ ಕಟೀಲು ಮೇಳದಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಮೇಳದಲ್ಲಿ ಇದ್ದುಕೊಂಡೇ ಕಳೆದ 25 ವರ್ಷಗಳಿಂದ ಯಕ್ಷ ಪ್ರಭಾ ಎಂಬ ಯಕ್ಷಗಾನ ಮಾಸ ಪತ್ರಿಕೆಯನ್ನು ಅವರು ನಡೆಸುತ್ತಿದ್ದರು. ಕುಬಣೂರು ಶ್ರೀಧರ್ ರಾವ್ ಓದಿದ್ದು, ಮೆಕಾನಿಕಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ , ಆದರೆ ಅವರು ಜೀವನ ಕಂಡುಕೊಂಡದ್ದು ಯಕ್ಷಗಾನದಲ್ಲಿ.
ಶ್ರೀಧರ ರಾಯರು ಐ.ರಘುಮಾಸ್ತರರಿಂದ ಕರ್ನಾಟಕ ಸಂಗೀತ, ಅಡ್ಕಸ್ಥಳ ರಾಮಚಂದ್ರ ಭಟ್ಟರಿಂದ ಮದ್ದಳೆವಾದನ, ಉಪ್ಪಳ ಕೃಷ್ಣ ಮಾಸ್ತರ್ ಹಾಗೂ ಬೇಕೂರು ಕೇಶವರಿಂದ ನಾಟ್ಯಾಭ್ಯಾಸ, ಟಿ.ಗೋಪಾಲಕೃಷ್ಣ ಮಯ್ಯ ಹಾಗೂ ಮಾಂಬಾಡಿ ನಾರಾಯಣ ಭಟ್ಟರಿಂದ ಯಕ್ಷಗಾನ ಭಾಗವತಿಕೆಯನ್ನು ಕಲಿತು ಬದುಕಿನಲ್ಲಿ ಏಳುಬೀಳುಗಳನ್ನು ಎದುರಿಸುತ್ತಾ ಮುನ್ನಡೆದಿದ್ದರು.
ದಾಶರಥಿ ದರ್ಶನ, ಸಾರ್ವಭೌಮ ಸಂಕರ್ಷಣ, ಮನುವಂಶವಾಹಿನಿ, ಮಹಾಸತಿ ಮಂದಾಕಿನಿ, ಕಾಂತಾವರ ಕ್ಷೇತ್ರ ಮಹಾತ್ಮೆ, ಪಟ್ಟಣ ಮಣೆ.. ಪ್ರಸಂಗಗಳ ರಚಿಸಿದ ಶ್ರೀಧರ್ ರಾವ್ ಯಕ್ಷರಂಗದ ಕೀರ್ತಿಶೇಷ ಕಲ್ಲಾಡಿ ವಿಠಲ ಶೆಟ್ಟರ ಜೀವನ ಗಾಥೆ ಯಕ್ಷವಿಜಯ ವಿಠಲ ಕೃತಿನ್ನು ರಚಿಸಿದ್ದರು.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ












Click it and Unblock the Notifications