ಅಡಿಕೆ, ಪಾನ್ ಮಸಾಲ ನಿಷೇಧ ಹಿಂಪಡೆಯಲು ಮನವಿ
ಮಂಗಳೂರು, ಅಕ್ಟೋಬರ್, 31 : ರಾಜ್ಯ ಸರ್ಕಾರ ಗುಟ್ಕಾ ನಿಷೇಧದ ಜತೆಗೆ ಅಡಿಕೆ ಮತ್ತು ಪಾನ್ ಮಸಾಲ ಪೊಟ್ಟಣ ಮಾರಾಟ ಮಾಡುವುದನ್ನು ನಿಷೇಧಿಸಬೇಕೆಂದು ಕಾನೂನು ಹೊರಡಿಸಿದೆ. ಈ ಹಿನ್ನಲೆಯಲ್ಲಿ ಅಡಕೆ ದರ ಕುಸಿದು ಬೆಳೆಗಾರರು ಕಂಗಾಲಾಗಿದ್ದಾರೆ.
ಈ ಬಗ್ಗೆ ರಾಜ್ಯ ಅಡಕೆ ಸಹಕಾರ ಸಂಘಗಳ ಮಹಾಮಂಡಳದ ಅಧ್ಯಕ್ಷರ ನೇತೃತ್ವದ ನಿಯೋಗವು ಕಾನೂನು ಸಚಿವ ಟಿ. ಬಿ. ಜಯಚಂದ್ರ ಅವರನ್ನು ಭೇಟಿಯಾಗಿ ಆದೇಶ ಹಿಂದಕ್ಕೆ ಪಡೆಯಲು ವಿನಂತಿಸಿದೆ.

ರಾಜ್ಯ ಸರಕಾರದ ಈ ಆದೇಶದಿಂದಾಗಿ ಅಡಕೆ ಬೆಲೆ ತೀರಾ ಕುಸಿಯತೊಡಗಿದೆ. ಆಹಾರ ಸುರಕ್ಷೆ ಇಲಾಖೆಗೆ ಅಡಕೆ ಹಾಗೂ ಪಾನ್ ಮಸಾಲಾ ನಿಷೇಧ ಮಾಡಲು ಅಧಿಕಾರವಿರುವುದಿಲ್ಲ.
ಆದರೂ ಈ ಆದೇಶ ತರಲಾಗಿದೆ. ಈ ಆದೇಶದಿಂದಾಗಿ ಅನೇಕ ದುಷ್ಪರಿಣಾಮ ಹಾಗೂ ರೈತರಿಗಾಗುವ ತೊಂದರೆ , ನಷ್ಟಗಳ ಬಗ್ಗೆ ಆಹಾರ ಸುರಕ್ಷತಾ ಆಯುಕ್ತರಿಗೆ ನಿಯೋಗ ಮನವರಿಕೆ ಮಾಡಿತು.
ಕಾನೂನು ಸಚಿವರಾದ ಟಿ. ಬಿ. ಜಯಚಂದ್ರ ಅವರನ್ನು ಭೇಟಿ ಮಾಡಿ ನಿಷೇಧ ಹಿಂದಕ್ಕೆ ಪಡೆಯುವಂತೆ ಮನವಿ ಮಾಡಲಾಗಿದೆ. ನಿಷೇಧ ಹಿಂದಕ್ಕೆ ಪಡೆದಲ್ಲಿ ರೈತರಿಗೆ ಆಗುವ ತೊಂದರೆಗಳನ್ನು ನೀಗಿಸಬಹುದಾಗಿದೆ.
ಹಾಗೆಯೇ ಅಡಕೆ ಬೆಳೆಗಾರಗೆ ಉತ್ತಮ ದರ ಸಿಗುವಂತೆ ಮಾಡಬೇಕಾಗಿ ಅಡಿಕೆ ಸಹಕಾರ ಸಂಘಗಳ ಮಹಾಮಂಡಳದ ಅಧ್ಯಕ್ಷ ಪಧ್ಮನಾಭ ಮನವಿ ಮಾಡಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications