Stories Of Strength: ಕೊರೊನಾ ಗೆದ್ದ ದಕ್ಷಿಣ ಕನ್ನಡದ ಸಿಯೋನ್ ಆಶ್ರಮ ವಾಸಿಗಳು
ಮಂಗಳೂರು, ಜೂನ್ 28: ದಕ್ಷಿಣ ಕನ್ನಡ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ್ದ ಬೆಳ್ತಂಗಡಿಯ ಸಿಯೋನ್ ಆಶ್ರಮದ ಕೊರೊನಾ ಸ್ಫೋಟದಲ್ಲಿ, ಆಶ್ರಮ ವಾಸಿಗಳು ಕೊರೊನಾ ಗೆದ್ದು, ಸಾಹಸ ಮೆರೆದಿದ್ದಾರೆ.
ಆಶ್ರಮದಲ್ಲಿ ಒಟ್ಟು 270 ಜನರಿದ್ದು, ಕೊರೊನಾ ಟೆಸ್ಟ್ ನಡೆಸಿದಾಗ 225ಕ್ಕೂ ಹೆಚ್ಚು ಜನರಿಗೆ ಕೊರೊನಾ ಕಾಣಿಸಿಕೊಂಡು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು. ಈಗ ಎಲ್ಲರಿಗೂ ಕೊರೊನಾ ನೆಗೆಟಿವ್ ಆಗಿದ್ದು, ಕೊವೀಡ್ ಕೇರ್ ಸೆಂಟರ್ನಲ್ಲಿದ್ದ ಸುಮಾರು 150ಕ್ಕೂ ಹೆಚ್ಚು ಮಂದಿ ಸಂಪೂರ್ಣ ಗುಣಮುಖರಾಗಿ ಈಗ ಮತ್ತೆ ಆಶ್ರಮ ಸೇರಿದ್ದಾರೆ.
ಧರ್ಮಸ್ಥಳದ ರಜತಾದ್ರಿ ವಸತಿಗೃಹದಲ್ಲಿ 150 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಒಂದು ತಿಂಗಳ ಚಿಕಿತ್ಸೆಯ ಬಳಿಕ ಈಗ ಎಲ್ಲರೂ ಗುಣಮುಖರಾಗಿದ್ದಾರೆ. ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜಾ, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಮುತುವರ್ಜಿಯಲ್ಲಿ ಆಶ್ರಮವಾಸಿಗಳ ಆರೈಕೆಯನ್ನು ಮಾಡಲಾಗಿತ್ತು.

ಸಂಪೂರ್ಣ ಗುಣಮುಖರಾದವರೆಲ್ಲರನ್ನೂ ಸಿಯೋನ್ ಆಶ್ರಮಕ್ಕೆ ಮತ್ತೆ ಕರೆದುಕೊಂಡು ಬರಲಾಗಿದ್ದು, ಆಶ್ರಮದ ಸಿಬ್ಬಂದಿ ಮತ್ತು ನೆರಿಯಾ ಗ್ರಾಮಸ್ಥರು ಕೊರೊನಾ ಗೆದ್ದ ಆಶ್ರಮ ವಾಸಿಗಳಿಗೆ ಸ್ವಾಗತ ಕೋರಿದ್ದಾರೆ. ಆಶ್ರಮವೇ ಕೊರೊನಾ ಗೆದ್ದ ಖುಷಿಯಲ್ಲಿ ಇಡೀ ಆಶ್ರಮಕ್ಕೆ ಸುಣ್ಣ- ಬಣ್ಣ ಬಳಿದು ಸಿಂಗರಿಸಲಾಗಿತ್ತು.

ಈ ಸಂದರ್ಭದಲ್ಲಿ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ, ಆಶ್ರಮದ ಅಭಿವೃದ್ಧಿಗೆ 50 ಲಕ್ಷ ರೂಪಾಯಿ ಘೋಷಣೆ ಮಾಡಿದ್ದಾರೆ. ಸಿಯೋನ್ ಆಶ್ರಮದ 126 ಮಂದಿ ಪುರುಷರು, 100 ಮಂದಿ ಮಹಿಳೆಯರು ಸೇರಿದಂತೆ ಒಟ್ಟು 126 ಮಂದಿ ಸೋಂಕಿತರಾಗಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications