ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಂಡೆ ತೆರವು ಕಾರ್ಯಾಚರಣೆ; ಇಂದು ಕೂಡ ಮಂಗಳೂರು -ಬೆಂಗಳೂರು ರೈಲು ಸಂಚಾರ ಸ್ಥಗಿತ

|
Google Oneindia Kannada News

ಮಂಗಳೂರು, ಜುಲೈ 23: ಕರಾವಳಿಯಲ್ಲಿ ಇಂದು ಕೂಡ ಮಳೆ ಮುಂದುವರೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಮಂಗಳೂರಿನಲ್ಲಿ ಉತ್ತಮ ಮಳೆಯಾಗುತ್ತಿದೆ. ಪಶ್ಚಿಮ ಘಟ್ಟ ಪ್ರದೇಶದಲ್ಲೂ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ನದಿಗಳು ತುಂಬಿ ಹರಿಯುತ್ತಿವೆ.

 ಸಿರಿವಾಗಿಲು ಬಳಿ ಭೂಕುಸಿತ; 2 ದಿನ ಮಂಗಳೂರು-ಬೆಂಗಳೂರು ರೈಲು ಸಂಚಾರ ಸ್ಥಗಿತ ಸಿರಿವಾಗಿಲು ಬಳಿ ಭೂಕುಸಿತ; 2 ದಿನ ಮಂಗಳೂರು-ಬೆಂಗಳೂರು ರೈಲು ಸಂಚಾರ ಸ್ಥಗಿತ

ಈ ನಡುವೆ ಸುಬ್ರಹ್ಮಣ್ಯ ರಸ್ತೆ ಮತ್ತು ಸಿರಿವಾಗಿಲು ರೈಲ್ವೆ ಮಾರ್ಗದ ನಡುವೆ ಘಾಟಿ ಪ್ರದೇಶದ ಇಕ್ಕೆಲಗಳಲ್ಲಿ ಪದೇ ಪದೇ ರೈಲು ಓಡಾಟಕ್ಕೆ ತೊಂದರೆ ನೀಡುತ್ತಿರುವ ಹೆಬ್ಬಂಡೆಗಳ ತೆರವು ಕಾರ್ಯಾಚರಣೆಯು ಇಂದು ಕೂಡ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಇಂದೂ ಮಂಗಳೂರು- ಬೆಂಗಳೂರು ನಡುವೆ ರೈಲು ಸಂಚಾರ ಸ್ಥಗಿತಗೊಂಡಿದೆ.

Rock clearance operation in sirivagilu Mangaluru Bengaluru railway stopped

ನಿರಂತರವಾಗಿ ಸುರಿಯುತ್ತಿರುವ ಮಳೆ, ಬಂಡೆಗಳನ್ನು ಒಡೆದು ತೆರವುಗೊಳಿಸುವ ಕಾಮಗಾರಿಗೆ ಅಡ್ಡಿಯಾಗಿದ್ದು, ಕಾಮಗಾರಿ ಒಂದು ಹಂತಕ್ಕೆ ತಲುಪಲು ಇನ್ನೂ ಎರಡು ದಿನಗಳು ಬೇಕಾಗಬಹುದು ಎಂದು ರೈಲ್ವೆ ಮೂಲಗಳು ತಿಳಿಸಿವೆ.

English summary
All the rivers in Dakshina Kannada district are overflowing due to rains in the Western Ghats. In the meantime, the rock clearing operation is continued near sirivagilu. so the train service between Mangaluru and Bengaluru has been stopeed today also.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X