ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರೋಹಿಂಗ್ಯಾ ಮುಸ್ಲಿಮರ ಗಡಿಪಾರಿಗೆ 'ವಿಹಿಂಪ' ಒತ್ತಾಯ

|
Google Oneindia Kannada News

ಮಂಗಳೂರು, ಸೆಪ್ಟೆಂಬರ್ 27: ಮಯಾನ್ಮಾರ್ ನಿಂದ ಭಾರತದೊಳಗೆ ನುಸುಳಿರುವ ರೋಹಿಂಗ್ಯಾ ಮುಸ್ಲಿಮರನ್ನು ಈ ಕೂಡಲೇ ಗಡಿಪಾರು ಮಾಡಬೇಕೆಂದು ವಿಶ್ವ ಹಿಂದು ಪರಿಷತ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ರೋಹಿಂಗ್ಯಾಗಳು ನಿರಾಶ್ರಿತರಲ್ಲ, ಅಕ್ರಮ ವಲಸಿಗರು : ರಾಜನಾಥ್ ಸಿಂಗ್ರೋಹಿಂಗ್ಯಾಗಳು ನಿರಾಶ್ರಿತರಲ್ಲ, ಅಕ್ರಮ ವಲಸಿಗರು : ರಾಜನಾಥ್ ಸಿಂಗ್

ಮಂಗಳೂರಿನಲ್ಲಿ ಈ ಕುರಿತು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಜಗದೀಶ್ ಶೇಣವ, "ಮಯಾನ್ಮಾರ್ ನಿಂದ ಭಾರತಕ್ಕೆ ನುಸುಳಿರುವ ರೋಹಿಂಗ್ಯಾ ಮುಸ್ಲಿಮರು ಭಾರತದ ಆಂತರಿಕ ಭದ್ರತೆಗೆ ಭಂಗ ತರುವ ಸಾಧ್ಯತೆ ಇದೆ," ಎಂದು ಆತಂಕ ವ್ಯಕ್ತಪಡಿಸಿದರು .

Rohingya muslims of Myanmar should be excluded from India - VHP

"ಮಯಾನ್ಮಾರ್ ನ ಹಿಂಸಾ ಪೀಡಿತ ರಖಿನೆ ಪ್ರಾಂತ್ಯದಲ್ಲಿ ರೋಹಿಂಗ್ಯಾ ಮುಸ್ಲಿಮರು ಹಿಂದೂಗಳ ಸಾಮೂಹಿಕ ಹತ್ಯೆ ಮಾಡಿರುವುದು ಈಗಾಗಲೇ ಬಯಲಾಗಿದೆ. ಈ ಮೂಲಕ ಮುಗ್ಧರೆಂದು ಹೇಳಲಾಗುವ ರೋಹಿಂಗ್ಯಾ ಮುಸ್ಲಿಮರ ಬರ್ಬರತೆ ಬೆಳಕಿಗೆ ಬಂದಿದೆ," ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಹಿಂದೂಗಳು ಮತ್ತು ಬೌದ್ಧರನ್ನು ಗುರಿಯಾಗಿಸಿಕೊಂಡು ನಡೆದ ಹಿಂಸಾಚಾರಕ್ಕೆ ಪ್ರತಿಯಾಗಿ ನಡೆಸಿದ ದಾಳಿಗೆ ಸಾವಿರಾರು ರೋಹಿಂಗ್ಯಾ ಭಯೋತ್ಪಾದಕರು ಭಾರತಕ್ಕೆ ನುಸುಳಿದ್ದಾರೆ . ಇಂತಹ ತೀವ್ರವಾದಿ ಮಾನಸಿಕತೆ ಇರುವ ರೋಹಿಂಗ್ಯಾ ಮುಸ್ಲಿಮರಿಗೆ ಭಾರತ ಆಶ್ರಯ ನೀಡಿದೆ. ಇವರನ್ನು ಈ ಕೂಡಲೇ ಗಡಿಪಾರು ಮಾಡಬೇಕೆಂದು ಅವರು ಒತ್ತಾಯಿಸಿದರು.

English summary
Rohingya muslims of Myanmar should be excluded from India said Vishwa Hindu Parishath district president Jagadish Shenava here in Mangaluru on September 27.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X