ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನೀತಿ ಸಂಹಿತೆ ಉಲ್ಲಂಘನೆ:ದ.ಕ.ದಲ್ಲಿ 1.07 ಕೋಟಿ ರೂ.ಮೌಲ್ಯದ ನಗದು, ಸ್ವತ್ತು ವಶ

|
Google Oneindia Kannada News

ಮಂಗಳೂರು, ಏಪ್ರಿಲ್ 09:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ನಗದು ಸೇರಿಂತೆ ಇತರ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಒಟ್ಟು ಮೌಲ್ಯ 1.7 ಕೋಟಿ ರೂಪಾಯಿ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದರು.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನೀತಿ ಸಂಹಿತೆಯ ಉಲ್ಲಂಘನೆಯಡಿ 28,10,590 ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದ್ದು, ದಾಖಲೆ ಪರಿಶೀಲಿಸಿದ ಬಳಿಕ ಪೂರ್ಣ ಹಣ ಹಿಂತಿರುಗಿಸಲಾಗಿದೆ.

 ಈ ಬಾರಿ ದಕ್ಷಿಣ ಕನ್ನಡದಲ್ಲಿ ಹೆಚ್ಚು ಮತದಾರರು ಸೇರ್ಪಡೆ:ಜಿಲ್ಲಾಧಿಕಾರಿ ಈ ಬಾರಿ ದಕ್ಷಿಣ ಕನ್ನಡದಲ್ಲಿ ಹೆಚ್ಚು ಮತದಾರರು ಸೇರ್ಪಡೆ:ಜಿಲ್ಲಾಧಿಕಾರಿ

3 ದ್ವಿಚಕ್ರ ವಾಹನ, 3 ಲಾರಿ,1907 ಭಿತ್ತಿಪತ್ರ, 3 ಕಾರು, 1ಟ್ರಕ್, 1 ಟ್ಯಾಂಕರ್ ಸೇರಿದಂತೆ ಒಟ್ಟು 1,07,ಕೋಟಿ ರೂಪಾಯಿ ಮೌಲ್ಯದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. 461 ಅಬಕಾರಿ ಕಾಯ್ದೆ ಉಲ್ಲಂಘನೆಯ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

Rs 1.07 cr worth properties, cash seized in Dakshina Kannada

ಮತದಾನ ಕೇಂದ್ರದಲ್ಲಿ ವಿವಿಪ್ಯಾಟ್ ಬಳಕೆಯಿಂದ ಮತ್ತು ಆಯ್ದ ವಿವಿಪ್ಯಾಟ್ ನಲ್ಲಿ ದಾಖಲಾದ ಮತಗಳನ್ನು ಎಣಿಸಿ ಮತ್ತು ಮತಯಂತ್ರದ ಮತಗಳನ್ನು ತಾಳೆ ನೋಡುವ ವ್ಯವಸ್ಥೆ ಈ ಬಾರಿ ಇರುವುದರಿಂದ ಮತದಾನ ಹಾಗೂ ಎಣಿಕೆ ಕಾರ್ಯ ಹೆಚ್ಚು ಸಮರ್ಪಕವಾಗಿ ನಡೆಯುತ್ತದೆ ಎಂದು ಜಿಲ್ಲಾಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದರು.

 ಕರಾವಳಿಯಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ನೀತಿ ಸಂಹಿತೆ ಅಡ್ಡಿ ಕರಾವಳಿಯಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ನೀತಿ ಸಂಹಿತೆ ಅಡ್ಡಿ

ಜಿಲ್ಲೆಯಲ್ಲಿ ಈ ಬಾರಿ 1861 ಮತಗಟ್ಟೆಗಳಲ್ಲಿ 2495 ವಿವಿಪ್ಯಾಟ್ ಬಳಸುತ್ತಿದ್ದು, ಏಪ್ರಿಲ್ 10ರಿಂದ ಮತಯಂತ್ರಗಳ ಸಿದ್ಧಪಡಿಸುವ ಕಾರ್ಯ ಆರಂಭವಾಗಲಿದೆ ಎಂದು ಹೇಳಿದ ಜಿಲ್ಲಾಧಿಕಾರಿಗಳು ಜಿಲ್ಲೆಯ 8 ಕೇಂದ್ರಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳನ್ನು ಸಿದ್ಧಪಡಿಸಲಾಗುವುದು ಎಂದರು.

English summary
In Mangaluru DC Sasikanth Senthil said that properties and cash worth of Rupees 1.07 crore seized in Dakshina Kannada district for the violation of election code of conduct
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X