ಕೋವಿಡ್ ವಾರಿಯರ್ಸ್ಗೆ 5 ಲಕ್ಷ ರೂ. ಜೀವ ವಿಮೆ ಮಾಡಿಸಿದ ಮಂಗಳೂರಿನ ಟ್ರಸ್ಟ್
ಮಂಗಳೂರು, ಜೂನ್ 7: ಕೊರೊನಾ ಸೋಂಕಿನ ಈ ಸಂಕಷ್ಟದ ಸಂದರ್ಭದಲ್ಲಿ ಹಲವು ಮಂದಿ ತೊಂದರೆಗೆ ಒಳಗಾಗಿದ್ದಾರೆ. ಈ ರೀತಿ ತೊಂದರೆಗೆ ಒಳಗಾದವರಿಗಾಗಿ ಮಂಗಳೂರಿನಲ್ಲಿ ಟ್ರಸ್ಟ್ ಒಂದು ಹಗಲಿರುಳು ಕೆಲಸ ಮಾಡುತ್ತಿದೆ. ನಿರ್ಗತಿಕರಿಗೆ ಮೂರು ಹೊತ್ತು ಅನ್ನ, ಆಹಾರ ನೀಡುವುದರ ಜೊತೆಗೆ ಸಶ್ಮಾನದಲ್ಲಿ ಹೆಣ ಸುಡುವ ಕೋವಿಡ್ ವಾರಿಯರ್ಸ್ಗೆ ಜೀವವಿಮೆಯನ್ನು ಮಾಡಿಸಿದೆ.
ಕೊರೊನಾ ಅಂದ್ರೇನೆ ಒಂದಲ್ಲ ಒಂದು ಸಮಸ್ಯೆ. ಈ ಕೊರೊನಾ ಸೋಂಕಿನಿಂದ ಪ್ರಾಣ ಕಳೆದುಕೊಂಡವರ ಶವ ಸುಡುವುದು ಸಹ ಅತ್ಯಂತ ಸವಾಲಿನ ಕೆಲಸ. ಹೀಗಾಗಿ ಶವ ಸುಡುವವರ ಪ್ರಾಣ ಕೂಡ ಅಮೂಲ್ಯವೆಂದು ಅರಿತ ಮಂಗಳೂರಿನ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಮಾದರಿ ಕಾರ್ಯಕ್ಕೆ ಮುಂದಾಗಿದೆ.
ಮಂಗಳೂರು ನಗರದ ಸ್ಮಶಾನದಲ್ಲಿ ಕೆಲಸ ಮಾಡುವವರ ಕುಟುಂಬಕ್ಕೆ ಐದು ಲಕ್ಷಗಳ ಜೀವವಿಮೆಯನ್ನು ಮಾಡಿಸಿದೆ. ಇದರ ಜೊತೆ ಕೊರೊನಾ ಸೋಂಕಿತರ ಅಂತ್ಯಸಂಸ್ಕಾರ ಮಾಡುತ್ತಿರುವ ವಿಶ್ವ ಹಿಂದೂ ಪರಿಷತ್, ಭಜರಂಗದಳದ ವಾರಿಯರ್ಸ್ಗೂ ಈ ವಿಮೆ ಮಾಡಿಸಲಾಗಿದೆ. ತಲಾ ಐದು-ಐದು ಲಕ್ಷದ ವಿಮೆಯನ್ನು ಒಟ್ಟು 42 ಜನರಿಗೆ ಮಾಡಲಾಗಿದೆ.

ಇದರ ಜೊತೆ ನಿರ್ಗತಿಕರಾಗಿ ಬಸ್ ಸ್ಟ್ಯಾಂಡ್, ರಸ್ತೆ ಬದಿಯಲ್ಲಿರುವುವರಿಗೆ ಮಧ್ಯಾಹ್ನ ಮತ್ತು ರಾತ್ರಿ ಊಟ, ಸಂಜೆ ಚಹಾ-ತಿಂಡಿಯನ್ನು ನೀಡುತ್ತಿದ್ದಾರೆ. ನಿತ್ಯ 5000 ಮಂದಿಗೆ ಊಟ, 600 ಮಂದಿಗೆ ಫಲಹಾರವನ್ನು ನೀಡಲಾಗುತ್ತಿದೆ. ಇವರಿಗೆ ಮಳೆಯಿಂದ ರಕ್ಷಣೆಗಾಗಿ ಕ್ಯಾಪ್, ಟೀ ಶರ್ಟ್, ಟವೆಲ್ನ್ನು ನೀಡಲಾಗಿದೆ.
ಇನ್ನು ಕೊರೊನಾ ಸೋಂಕಿಗೆ ಒಳಗಾಗಿ ಮನೆಯಲ್ಲಿ ಆಹಾರ ತಯಾರಿಸಿಕೊಳ್ಳಲು ಸಾಧ್ಯವಾಗದವರಿಗೂ ಮೂರು ಹೊತ್ತಿನ ಆಹಾರವನ್ನು ಅವರ ಮನೆಗೆ ತಲುಪಿಸುವ ಕೆಲಸವನ್ನು ಈ ಟ್ರಸ್ಟ್ ಮಾಡುತ್ತಿದೆ. ನಗರದ ಎಂಟು ಪೊಲೀಸ್ ಠಾಣೆಗೆ, ಚೆಕ್ ಪೋಸ್ಟ್ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗಳಿಗೆ, ಕೋವಿಡ್ ಆಸ್ಪತ್ರೆಗೂ ಆಹಾರವನ್ನು ನೀಡಲಾಗುತ್ತಿದೆ.

ಟ್ರಸ್ಟ್ನಲ್ಲಿ ಒಟ್ಟು 44 ಮಂದಿ ಸದಸ್ಯರಿದ್ದು ಎಲ್ಲರೂ ನಿಸ್ವಾರ್ಥರಹಿತವಾಗಿ ಕೊರೊನಾದಿಂದ ಸಂಕಷ್ಟಕ್ಕೆ ಒಳಗಾದವರಿಗಾಗಿ ಹಗಲಿರುಳು ದುಡಿಯುತ್ತಿದ್ದಾರೆ. ಇದರ ಜೊತೆ ಆಂಬ್ಯುಲೆನ್ಸ್ ಸೇವೆಯನ್ನು ನೀಡಲಾಗುತ್ತಿದೆ.
ತೊಂದರೆಗೆ ಒಳಗಾದವರೂ ಈ ಟ್ರಸ್ಟ್ನ ಸಹಾಯವಾಣಿ ನಂಬರ್ಗೆ ಕಾಲ್ ಮಾಡಿದರೆ ಸಾಕು ಇವರಿಂದಾದ ಸೇವೆಯನ್ನು ಟ್ರಸ್ಟ್ನ ಸದಸ್ಯರು ಮಾಡುತ್ತಾರೆ. ಒಟ್ಟಿನಲ್ಲಿ ಮಂಗಳೂರಿನ ಈ ಸೇವಾಂಜಲಿ ಟ್ರಸ್ಟ್ನ ಕಾರ್ಯ ನಿಜಕ್ಕೂ ಮೆಚ್ಚುವಂತಹದ್ದಾಗಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications