ಮಂಗಳೂರು ಹಳೆ ಬಂದರು ಅಭಿವೃದ್ಧಿಗೆ 65 ಕೋಟಿ ಮಂಜೂರು
ಮಂಗಳೂರು, ಅಕ್ಟೋಬರ್ 3: ಮಂಗಳೂರು ಹಳೆ ಬಂದರು ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿ ಸಹಭಾಗಿತ್ವದಲ್ಲಿ 65 ಕೋಟಿ ಮಂಜೂರು ಮಾಡಿವೆ ಎಂದು ಶಾಸಕ ಜೆ.ಆರ್.ಲೋಬೊ ತಿಳಿಸಿದರು.
ಸೋಮವಾರ ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು ಕೇಂದ್ರ ಸರ್ಕಾರ 25 ಕೋಟಿ ನೀಡಿದ್ದು ಉಳಿಕೆ ಹಣವನ್ನು ರಾಜ್ಯ ಸರ್ಕಾರ ಪಾವತಿಸಲಿದೆ ಎಂದು ಮಾಹಿತಿ ನೀಡಿದರು.

ಲಕ್ಷದ್ವೀಪಕ್ಕೆ ಉನ್ನತ ಮಟ್ಟದ ನಿಯೋಗವನ್ನು ಕೊಂಡೊಯ್ದು ಅಲ್ಲಿನ ಸರ್ಕಾರದೊಂದಿಗೆ ಮಾತುಕತೆ ನಡೆಸುವುದಾಗಿ ನುಡಿದ ಅವರು, ಲಕ್ಷದ್ವೀಪದ ವ್ಯವಹಾರ ಸಂಪೂರ್ಣವಾಗಿ ಇಲ್ಲಿಗೆ ಬರುವಂತೆ ಮಾಡಲು ಸಾಧ್ಯವಾದ ಎಲ್ಲಾ ಪ್ರಯತ್ನಗಳನ್ನೂ ಮಾಡುವುದಾಗಿ ತಿಳಿಸಿದರು.
ಇನ್ನು ಹಳೆ ಬಂದರು ಹೂಳೆತ್ತುವ ಕಾಮಗಾರಿಗೆ 29 ಕೋಟಿ ಮಂಜೂರಾಗಿದ್ದು ಈ ಪೈಕಿ ಕೇಂದ್ರ ಸರ್ಕಾರ 15 ಕೋಟಿ ನೀಡಲಿದ್ದು ಉಳಿಕೆ ಮೊತ್ತವನ್ನು ರಾಜ್ಯ ಸರ್ಕಾರ ಪಾವತಿಸಲಿದೆ. ಈಗ ಬಂದರಿನ ಆಳ ಕೇವಲ 4 ಮೀಟರ್ ಮಾತ್ರ ಇದ್ದು ಇದನ್ನು 7 ಮೀಟರ್ ಗೆ ಹೆಚ್ಚಿಸಬೇಕಾಗಿದೆ. ಹೀಗೆ ಮಾಡುವುದರಿಂದ ಬೃಹತ್ ಹಡಗುಗಳು ಹಳೆ ಬಂದರಿಗೆ ಬರಲು ಸಾಧ್ಯವಾಗುತ್ತದೆ ಎಂದು ಜೆ.ಆರ್ ಲೋಬೋ ವಿವರಿಸಿದರು.
ಇದೇ ವೇಳೆ ಮೀನುಗಾರಿಕೆ ಬಂದರು ಅಭಿವೃದ್ಧಿಯ 3ನೇ ಹಂತದ ಕಾಮಗಾರಿಗೆ 57.60 ಕೋಟಿ ಮಂಜೂರು ಮಾಡಿದ್ದು ಈ ಪೈಕಿ ಕೇಂದ್ರ ಸರ್ಕಾರ 37.60 ಕೋಟಿ ರೂಪಾಯಿಯನ್ನು ಒದಗಿಸಲಿದೆ. ಉಳಿಕೆ ಮೊತ್ತವನ್ನು ರಾಜ್ಯ ಸರ್ಕಾರ ಭರಿಸಬೇಕಾಗಿದೆ. ಈ ಮೊದಲು ಕೇಂದ್ರ ಸರ್ಕಾರ 60% ಮತ್ತು ರಾಜ್ಯ ಸರ್ಕಾರ 40% ಹಣ ನೀಡುತ್ತಿತ್ತು. ಈ ಮೊತ್ತವನ್ನೇ ಮುಂದುವರಿಸಬೇಕು ಎಂದು ಶಾಸಕ ಜೆ.ಆರ್.ಲೋಬೊ ಅವರು ಈ ಸಂದರ್ಭದಲ್ಲಿ ಒತ್ತಾಯಿಸಿದರು.
ನಾಡದೋಣಿಗಳಿಗೆ ಸರಿಯಾದ ತಂಗುದಾಣ ಇಲ್ಲದಿರುವುದನ್ನು ಮನಗಂಡು ರಾಜ್ಯ ಸರ್ಕಾರ 2.82 ಕೋಟಿ ಮಂಜೂರು ಮಾಡಿದೆ. ಅಲ್ಲದೆ ಸುಲ್ತಾನ್ ಬತ್ತೇರಿ ಅಭಿವೃದ್ಧಿಗೆ 4.5 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂದು ಲೋಬೋ ಹೇಳಿದರು.
ಮಂಗಳೂರು ಹಳೇ ಬಂದರಿನಲ್ಲಿ ಮೀನುಗಾರ ಮಹಿಳೆಯರಿಗೆ ಶೆಡ್ ನಿರ್ಮಿಸಲು ರಾಜ್ಯ ಸರ್ಕಾರ 47 ಲಕ್ಷ ರೂಪಾಯಿಯನ್ನು ಮಂಜೂರು ಮಾಡಿದ್ದು ಆದಷ್ಟು ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ಶಾಸಕ ಜೆ.ಆರ್.ಲೋಬೊ ಭರವಸೆ ನೀಡಿದರು.
ಪತ್ರಿಕಾಗೋಷ್ಟಿಯಲ್ಲಿ ಬೆಂಗ್ರೆ ಮಹಾಜನ ಸಭಾದ ಅಧ್ಯಕ್ಷ ಮೋಹನ್ ಬೆಂಗ್ರೆ, ಮಾಜಿ ಅಧ್ಯಕ್ಷ ಚೇತನ್ ಬೆಂಗ್ರೆ, ಅಸ್ಲಾಂ ಮತ್ತು ಶೇಖರ ಸುವರ್ಣ ಉಪಸ್ಥಿತರಿದ್ದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications