ಕಾಂಗ್ರೆಸ್ ಸಮಾವೇಶಕ್ಕಾಗಿ ಶರತ್ ಮಡಿವಾಳ ಸಾವನ್ನು ಮುಚ್ಚಿಟ್ಟ ಆಸ್ಪತ್ರೆ?
ಮಂಗಳೂರು, ಜುಲೈ 13: ದುಷ್ಕರ್ಮಿಗಳಿಂದ ಹತ್ಯೆಯಾದ ಆರ್ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ನಗರದ ಖಾಸಗಿ ಆಸ್ಪತ್ರೆಯಲ್ಲಿ ಜುಲೈ 6ರಂದು ಮೃತಪಟ್ಟಿದ್ದಾರೆ. ಆದರೆ ಒಂದು ದಿನದ ನಂತರ ಶರತ್ ಸಾವನ್ನಪ್ಪಿದ್ದಾರೆ ಎಂದು ಘೋಷಣೆಯಾಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಅಧಿಕೃತ ದಾಖಲೆಗಳು ಮಾಧ್ಯಮಗಳಿಗೆ ಲಭ್ಯವಾಗಿವೆ.
ಈ ಮಧ್ಯೆ ಡಿ.ವಿ ಸದಾನಂದ ಗೌಡ, ರಮಾನಾಥ್ ರೈ, ಬಿಜೆಪಿ ಯುವ ನಾಯಕ ತೇಜಸ್ವಿ ಸೂರ್ಯ ಮತ್ತಿತರರು ಶರತ್ ಮನೆಗೆ ಭೇಟಿ ನೀಡಿದ್ದಾರೆ. ಜತೆಗೆ ಮಂಗಳೂರಿನಲ್ಲಿ ನಿರಂತರವಾಗಿ ಪ್ರತಿಭಟನೆಗಳು ನಡೆಯುತ್ತಿವೆ.

ಸಿ.ಎಂಗಾಗಿ ಸಾವು ಘೋಷಣೆ ವಿಳಂಬ ಮಾಡಿದ್ರಾ ?
ಜುಲೈ 4 ರಂದು ರಾತ್ರಿ 9.30ರ ವೇಳೆ ದುಷ್ಕರ್ಮಿಗಳು ಶರತ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದರು. ತಕ್ಷಣ ನಗರದ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ತೀವ್ರವಾಗಿ ಗಾಯಗೊಂಡ ಶರತ್ ಚಿಕಿತ್ಸೆ ಫಲಕಾರಿಯಾಗದೇ ಜುಲೈ 6ರಂದು ರಾತ್ರಿ 12.30ಕ್ಕೆ ಸಾವನ್ನಪ್ಪಿದ್ದರು ಎನ್ನುತ್ತದೆ ಆಸ್ಪತ್ರೆಯ ಅಧಿಕೃತ ದಾಖಲೆಗಳು.
ಮರುದಿನ ಅಂದರೆ ಜುಲೈ 7ರಂದು ನಗರದ ಹೊರವಲಯದ ಅಡ್ಯಾರ್ ಗಾರ್ಡನ್ನಲ್ಲಿ ಕಾಂಗ್ರೆಸ್ ಜನಪ್ರತಿನಿಧಿಗಳ ಸಮಾವೇಶ ಇತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ ಹಾಗೂ ಆಹಾರ ಖಾತೆ ಸಚಿವ ಯು.ಟಿ ಖಾದರ್, "ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿಗೆ ಬಂದು ಹೋಗುವವರೆಗೂ ಶರತ್ ಸಾವನ್ನು ಘೋಷಿಸಬಾರದೆಂದು ಆಸ್ಪತ್ರೆ ವೈದ್ಯರ ಮೇಲೆ ಒತ್ತಡ ತಂದಿದ್ದಾರೆ ಎನ್ನಲಾಗಿದೆ. ಈ ಒತ್ತಡಕ್ಕೆ ಮಣಿದು ಆಸ್ಪತ್ರೆ ಮೂಲಗಳು ಜುಲೈ 7ರಂದು ರಾತ್ರಿ ಸಿ.ಎಂ ಮಂಗಳೂರಿನಿಂದ ನಿರ್ಗಮಿಸಿದ ಬಳಿಕ ಅಧಿಕೃತವಾಗಿ ಸತ್ತಿರುವುದನ್ನು ಘೋಷಣೆ ಮಾಡಿದೆ.

ವೈದ್ಯರ ಮೇಲೆ ಖಾದರ್ ಒತ್ತಡ
ಶರತ್ ಮನೆಗೆ ಭೇಟಿ ನೀಡಿದ ಬಿಜೆಪಿ ಯುವ ನಾಯಕ ತೇಜಸ್ವಿ ಸೂರ್ಯ ಮಾತನಾಡಿದ ವೀಡಿಯೋ ಚರ್ಚೆಗೆ ಗ್ರಾಸವಾಗಿದೆ. "ನೀವು ನಿಮ್ಮ ಮಗನನ್ನು ಕಳೆದುಕೊಂಡಾಗ ಇಡೀ ರಾಜ್ಯ ನಿಮ್ಮ ಜೊತೆಗಿತ್ತು. ಆದರೆ ಶರತ್ ಸಾವಿನಲ್ಲಿ ಚೆಲ್ಲಾಟವಾಡುದಕ್ಕೆ ನಿಮ್ಮ ಮನಸ್ಸು ಹೇಗೆ ಒಪ್ಪಿತು," ಎಂದು ಮುಖ್ಯಮಂತ್ರಿಯನ್ನು ಪ್ರಶ್ನಿಸಿದ್ದಾರೆ.
"ಶರತ್ ತನ್ನ ಸುತ್ತಮುತ್ತ ನಡೆಯುತ್ತಿದ್ದ ಮರಳು ಮಾಫಿಯಾದ ಬಗ್ಗೆ ಹೋರಾಟ ನಡೆಸಿದ್ದ. ಇದೇ ಮರಳು ಮಾಫಿಯಾದಿಂದ ರಮಾನಾಥ್ ರೈಗೆ ಪ್ರತಿ ತಿಂಗಳು ಮಾಮೂಲು ಹೋಗುತ್ತಿತ್ತು," ಸೂರ್ಯ ಆರೋಪಿಸಿದ್ದಾರೆ.
"ಮಂಗಳೂರು ಮುಸ್ಲಿಂ ಎಂಬ ಫೇಸ್ಬುಕ್ ಪೇಜನ್ನು ಇಳಿಸಲಾಗದ ಷಂಡ ಸರಕಾರದಿಂದ ಏನು ಬಯಸಲು ಸಾಧ್ಯ. ಶರತ್ ಸಾವನ್ನು ವಿಳಂಬವಾಗಿ ಘೋಷಣೆ ಮಾಡುವುದಕ್ಕೆ ಯು.ಟಿ ಖಾದರ್ ಆಸ್ಪತ್ರೆಗೆ ಭೇಟಿ ನೀಡಿ ಒತ್ತಡ ತಂದಿದ್ದಾರೆ," ಎಂಬ ಗಂಭೀರ ಆರೋಪ ಮಾಡಿದ್ದಾರೆ.

ಕೊಲೆ ಮುಚ್ಚಿಟ್ಟಿದ್ದು ಅಕ್ಷಮ್ಯ ತಪ್ಪು: ಬಿಎಸ್ವೈ
ಶರತ್ ಕೊಲೆ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಛೇರಿ ಮುಂದೆ ಇಂದು ಪ್ರತಿಭಟನೆ ನಡೆಸಲಾಗುತ್ತಿದೆ. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸರ್ಕಾರ ಯಾರ ಶಾಂತಿ ಸಭೆಗೆ ಕರೆದಿದೆ? ಕಾಂಗ್ರೆಸ್ನ ಶಾಂತಿ ಸಭೆಯ. ಕೋಮು ಗಲಭೆ ಹುಟ್ಟಿಸಿದವರೇ ಶಾಂತಿ ಸಭೆಗೆ ಆಹ್ವಾನಿಸುತ್ತಿದ್ದಾರೆ. ಇದಕ್ಕೆ ಹಿಂದೂ ಸಂಘಟನೆಗಳಿಗೆ ಯಾಕೆ ಆಹ್ವಾನ ನೀಡಿಲ್ಲ ಎಂದು ಪ್ರಶ್ನಿಸಿದರು.
ಮಾತ್ರವಲ್ಲ ಸಿ.ಎಂ ಕಾರ್ಯಕ್ರಮಕ್ಕಾಗಿ ಕೊಲೆಯನ್ನು ಮುಚ್ಚಿಟ್ಟಿದ್ದು ದೊಡ್ಡ ತಪ್ಪು ಎಂದಿದ್ದಾರೆ.
-
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ











Click it and Unblock the Notifications