ಕಾರ್ತಿಕ್ ರಾಜ್ ಕೊಲೆ, ಜಿಹಾದಿ ಕೃತ್ಯ; ಯಡಿಯೂರಪ್ಪ
ಬೆಂಗಳೂರು/ಮಂಗಳೂರು, ಅಕ್ಟೋಬರ್ 25: ಮಂಗಳೂರಿನ ಕೋಣಾಜೆ ಬಳಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಆರೆಸ್ಸೆಸ್ ಕಾರ್ಯಕರ್ತ ಕಾರ್ತಿಕ್ ರಾಜ್ ಅವರ ಹತ್ಯೆಯನ್ನು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತೀವ್ರವಾಗಿ ಖಂಡಿಸಿದ್ದಾರೆ.
ರಾಜಕೀಯ ದ್ವೇಷಪೂರಿತ ಕೊಲೆಗಳು ಜಿಹಾದಿಗಳ ಕೃತ್ಯ, ಎಷ್ಟು ಮಂದಿ ಹಿಂದೂ ಕಾರ್ಯಕರ್ತರನ್ನು ಕೊಲ್ಲಲು ಬಯಸಿದ್ದೀರಿ? ಗೃಹ ಸಚಿವರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
ಕೋಣಾಜೆಯ ಅಸೈಗೊಳಿ ಬಳಿ ರಸ್ತೆಯಲ್ಲಿ ವಾಕಿಂಗ್ ಹೋಗುತ್ತಿದ್ದ ವೇಳೆ ದುಷ್ಕರ್ಮಿಗಳಿಂದ ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾಗಿದ್ದರು. ಆಸ್ಪತ್ರೆಗೆ ದಾಖಲಾಗಿದ್ದ ಕಾರ್ತಿಕ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.
ಕೊಣಾಜೆ ಪೊಲೀಸ್ ಠಾಣೆಯ ಕೂಗಳತೆಯ ದೂರದಲ್ಲೇ ಘಟನೆಯನ್ನು ಮೊದಲಿಗೆ ಹಿಟ್ ಆಂಡ್ ರನ್ ಎಂದು ಪೊಲೀಸರು ಹೇಳಿದ್ದರು. ಆದರೆ, ನಂತರ ತನಿಖೆ ನಡೆಸಿ ಇದು ದ್ವೇಷಪೂರಿತ ಕೊಲೆ ಇರಬಹುದು ಎಂದು ಶಂಕಿಸಿದ್ದಾರೆ.
ಕೊಣಾಜೆ ಪಜೀರಿನ ಸುದರ್ಶನ ನಗರ ನಿವಾಸಿ ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷ ಉಮೇಶ್ ಪೂಜಾರಿ ಅವರ ಸುಪುತ್ರರಾದ ಕಾರ್ತಿಕ್ ರಾಜ್ (27) ಅವರ ಹತ್ಯೆ ಖಂಡಿಸಿ ಆರೆಸ್ಸೆಸ್ ಹಾಗೂ ಬಿಜೆಪಿ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸ್ ಠಾಣಾ ಕೂಗಳತೆಯ ದೂರದಲ್ಲೇ ಕೃತ್ಯ
ಕಳೆದ ಶನಿವಾರ ಮುಂಜಾನೆ ಕೊಣಾಜೆ ಪೊಲೀಸ್ ಠಾಣಾ ಕೂಗಳತೆಯ ದೂರದಲ್ಲೇ ರಸ್ತೆ ಅಂಚಿನಲ್ಲಿ ಜಾಗಿಂಗ್ ಮಾಡುತ್ತಿದ್ದ ಬಿಜೆಪಿ ಮುಖಂಡನೋರ್ವನ ಪುತ್ರನನ್ನು ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ತಲವಾರಿನಿಂದ ನಡುರಸ್ತೆಯಲ್ಲೇ ಮಾರಣಾಂತಿಕವಾಗಿ ಕಡಿದು ಪರಾರಿಯಾಗಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಗಾಯಾಳುವನ್ನು ಹಿಟ್ ಆಂಡ್ ರನ್ ಕೇಸೆಂದು ಆಸ್ಪತ್ರೆಗೆ ಸೇರಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.

ಹಿಟ್ ಆಂಡ್ ರನ್ ಕೇಸನ್ನಾಗಿ ಪರಿವರ್ತಿಸುವ ಹುನ್ನಾರ
ಬೈಕಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಾರ್ತಿಕ್ ಅವರನ್ನು ತಲವಾರಿಂದ ನಡು ರಸ್ತೆಯಲ್ಲೇ ಕಡಿದು ಪರಾರಿಯಾಗಿರುವುದನ್ನು ಪ್ರತ್ಯಕ್ಷದರ್ಶಿಗಳೇ ಕಂಡಿದ್ದಾರೆ. ಕಾರ್ತಿಕ್ ಅವರ ತಲೆಯ ಹಿಂಭಾಗಕ್ಕೆ ತಲವಾರಿಂದ ಬಲವಾಗಿ ಕಡಿದ ಪರಿಣಾಮ ವಿಪರೀತ ರಕ್ತವು ಚೆಲ್ಲಿದ್ದು ಸ್ಥಳಕ್ಕೆ ಬಂದ ಕೊಣಾಜೆ ಪೊಲೀಸರು ಗಾಯಾಳುವನ್ನು ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಗೆ ಸೇರಿಸಿ ತದನಂತರ ಪೊಲೀಸ್ ಠಾಣೆಯ ಕೂಗಳತೆಯ ಪ್ರದೇಶದಲ್ಲೇ ನಡೆದ ಪ್ರಕರಣವನ್ನು ಹಿಟ್ ಆಂಡ್ ರನ್ ಕೇಸನ್ನಾಗಿ ಪರಿವರ್ತಿಸುವ ಹುನ್ನಾರ ನಡೆಸಿದ ಆರೋಪ ಕೇಳಿ ಬಂದಿತ್ತು.

ಕೊಲೆಯತ್ನ ಪ್ರಕರಣವನ್ನೇ ದಾಖಲಿಸಬೇಕಾಯಿತು
ಅಪರಿಚಿತ ವಾಹನ ಹೊಡೆದು ಕಾರ್ತಿಕ್ ಗಾಯಗೊಂಡಿದ್ದಾರೆಂದು ಕೇಸನ್ನು ಉಲ್ಟಾ ಹೊಡೆಸುವ ಕೊಣಾಜೆ ಪೊಲೀಸರ ತಂತ್ರವನ್ನು ಅರಿತ ಬಿಜೆಪಿ ಕಾರ್ಯಕರ್ತರು ಅತ್ಯಧಿಕ ಸಂಖ್ಯೆಯಲ್ಲಿ ಆಸ್ಪತ್ರೆಯಲ್ಲಿ ಜಮಾವಣೆಗೊಂಡಿದ್ದು ಸ್ಥಳಕ್ಕೆ ಬಂದ ವಿಧಿ,ವಿಜ್ಞಾನ ತಂಡವು ಕೂಡಲೇ ಇದು ತಲವಾರು ದಾಳಿಯೆಂದು ಹೇಳಿದಾಗ ಬೇರೆ ವಿಧಿಯಿಲ್ಲದೆ ಪೊಲೀಸರು ಕೊಲೆಯತ್ನ ಪ್ರಕರಣವನ್ನೇ ದಾಖಲಿಸಿದ್ದಾರೆ.

ಸತ್ಯಾಸತ್ಯತೆ ಹೊರಬರಬೇಕಾಗಿದೆ.
ಘಟನಾ ಸ್ಥಳಕ್ಕೆ ಡಿಸಿಪಿ ಶಾಂತರಾಜು,ಎಸಿಪಿ ಶೃತಿ ಭೇಟಿ ನೀಡಿ ತನಿಖೆ ನಡೆಸಿದ್ದರು.ಅಸೈಗೋಳಿ ರಸ್ತೆಯಲ್ಲಿ ನಿತ್ಯವೂ ಜಾಗಿಂಗ್ ಮಾಡುವ ಸ್ಥಳೀಯ ಮುಖಂಡರೋರ್ವರನ್ನು ಕೊಲೆ ಮಾಡಲು ಟಾರ್ಗೆಟ್ ಮಾಡಿದ ದುಷ್ಕರ್ಮಿಗಳು ಗುರಿ ತಪ್ಪಿ ಕಾರ್ತಿಕ್ ಅವರ ಮೇಲೆ ತಲವಾರು ದಾಳಿಯನ್ನು ನಡೆಸಿರುವುದಾಗಿ ಹೇಳಲಾಗುತ್ತಿದ್ದು ಪೊಲೀಸರ ನಿಷ್ಪಕ್ಷಪಾತ ತನಿಖೆಯಿಂದಷ್ಟಲೆ ಸತ್ಯಾಸತ್ಯತೆ ಹೊರಬರಬೇಕಾಗಿದೆ.
ಆಸ್ಪತ್ರೆಗೆ ಭೇಟಿ ನೀಡಿದ ಬಿಜೆಪಿ ಕ್ಷೇತ್ರಾಧ್ಯಕ್ಷ ಸಂತೋಷ್ ಕುಮಾರ್ ಬೋಳಿಯಾರ್ ಅವರು ಕಾರ್ತಿಕ್ ಅವರು ಅಮಾಯಕನಾಗಿದ್ದು ಆತನ ಚಿಂತಾಜನಕ ಸ್ಥಿತಿಗೆ ಕಾರಣರಾದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಲು ಪೊಲೀಸ್ ಇಲಾಖೆಗೆ ಒತ್ತಾಯಿಸಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications