ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರಾವಳಿಯಲ್ಲಿ ನಿಲ್ಲದ ಹಿಂಸಾಚಾರ, ಆರೆಸ್ಸೆಸ್ ಕಾರ್ಯಕರ್ತನಿಗೆ ಚೂರಿ ಇರಿತ

|
Google Oneindia Kannada News

ಬಂಟ್ವಾಳ, ಜುಲೈ 4: ಆರೆಸ್ಸೆಸ್ ಕಾರ್ಯಕರ್ತನೋರ್ವನ ಮೇಲೆ ತಂಡವೊಂದು ದಾಳಿನಡೆಸಿ ಚೂರಿಯಿಂದ ಇರಿದು ಪರಾರಿಯಾದ ಘಟನೆ ಬಿ.ಸಿ.ರೋಡಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಸಜಿಪಮುನ್ನೂರು ಗ್ರಾಮದ ಕಂದೂರು ನಿವಾಸಿ ತನಿಯಪ್ಪ ಎಂಬವರ ಮಗ ಶರತ್(28) ಗಾಯಗೊಂಡ ಯುವಕರಾಗಿದ್ದಾರೆ.

ಬಿ.ಸಿ.ರೋಡಿನಲ್ಲಿ ಉದಯಲಾಂಡ್ರಿಯನ್ನು ನಡೆಸುತ್ತಿರುವ ಇವರು ಮಂಗಳವಾರ ರಾತ್ರಿ ಕೆಲಸ ಮುಗಿಸಿ, ಅಂಗಡಿಯಿಂದ ಹೊರಬರುತ್ತಿದ್ದ ವೇಳೆ ಅಪರಿಚಿತ ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಚೂರಿ ಇರಿತಕ್ಕೆ ಒಳಗಾದ ಶರತ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

RSS worker stabbed by group at Bantwal, Mangaluru

ತಾಲೂಕಿನಾದ್ಯಂತ 144ಸೆಕ್ಷನ್ ಜಾರಿಯಲ್ಲಿದ್ದರೂ ಈ ಘಟನೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ. ಅದರಲ್ಲೂ ಇನ್ನೇನು ಪರಿಸ್ಥಿತಿ ತಣ್ಣಗಾಯಿತು ಎನ್ನುತ್ತಿರುವಾಗ ಮೇಲಿಂದ ಮೇಲೆ ಈ ರೀತಿಯ ಘಟನೆಗಳು ನಡೆಯುತ್ತಿರುವುದು ಜನರ ಚಿಂತೆ ಹೆಚ್ಚಿಸಿದೆ.

ಘಟನೆ ನಡೆದ ಬೆನ್ನಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಸ್ಥಳಕ್ಕೆ ದೌಡಾಯಿಸಿದ್ದು, ಬಿ.ಸಿ.ರೋಡ್ ನಗರ ಸೇರಿದಂತೆ ಬಂಟ್ವಾಳದಾದ್ಯಂತ ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಿದ್ದಾರೆ. ಚೂರಿ ಇರಿದು ಪರಾರಿಯಾಗಿರುವ ಆರೋಪಿಗಳಿಗಾಗಿ ಶೋಧಕಾರ್ಯ ಮುಂದುವರಿದಿದೆ.

English summary
An RSS worker was attacked by a group and stabbed at BC Road, Bantwal here on the night of Tuesday July 4. This incident happened even as CRPC Sec 144 continues to be in place in Bantwal and other parts of the Dakshina Kannada district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X