ಮಂಗಳೂರು ದಸರಾಕ್ಕೆ ಚಾಲನೆ ನೀಡಲಿದ್ದಾರೆ ಎಸ್.ಮುರುಗನ್
ಮಂಗಳೂರು, ಅಕ್ಟೋಬರ್ 12 : ಕುದ್ರೋಳಿಯ ಗೋಕರ್ಣನಾಥ ಕ್ಷೇತ್ರದ ವತಿಯಿಂದ ನಡೆಯುವ ಮಂಗಳೂರು ದಸರಾಕ್ಕೆ ಅ.13ರ ಮಂಗಳವಾರದಂದು ಮಂಗಳೂರು ಪೊಲೀಸ್ ಆಯುಕ್ತ ಎಸ್.ಮುರುಗನ್ ಅವರು ಚಾಲನೆ ನೀಡಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ
ಮಾತನಾಡಿದ
ಕ್ಷೇತ್ರಾಡಳಿತ
ಮಂಡಳಿಯ
ಅಧ್ಯಕ್ಷ
ಎಚ್.ಎಸ್.ಸಾಯಿರಾಮ್
ಅವರು,
'ಮಂಗಳವಾರ
ಬೆಳಗ್ಗೆ
11
ಗಂಟೆಗೆ
ಗೋಕರ್ಣನಾಥ
ಕಲಾಮಂಟಪದಲ್ಲಿ
ನವದುರ್ಗೆಯರು
ಹಾಗೂ
ಶಾರದಾ
ಮಾತೆಯ
ಪ್ರತಿಷ್ಠಾಪನೆಯೊಂದಿಗೆ
ದಸರಾ
ಮಹೋತ್ಸವಕ್ಕೆ
ಚಾಲನೆ
ದೊರೆಯಲಿದೆ'
ಎಂದು
ಹೇಳಿದರು.
[ಮೈಸೂರು
ದಸರಾ
ಉದ್ಘಾಟಿಸುವ
ರೈತ
ಪುಟ್ಟಯ್ಯ
ಪರಿಚಯ]
'ರಾಜ್ಯದಲ್ಲಿ ಮಳೆಯ ಅಭಾವ ಉಂಟಾಗಿರುವ ಹಿನ್ನೆಲೆಯಲ್ಲಿ ಜನರ ಸುಭಿಕ್ಷೆಗಾಗಿ ಕ್ಷೇತ್ರದಲ್ಲಿ ಅ.16ರಂದು ನಡೆಯುವ ಬ್ರಹ್ಮಕಲಶೋತ್ಸವದ ಅಂಗವಾಗಿ ಅ.14ರಂದು ಸಂಜೆ 4 ಗಂಟೆಗೆ ನೆಹರೂ ಮೈದಾನದಿಂದ ಗೋಕರ್ಣ ಕ್ಷೇತ್ರದವರೆಗೆ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ' ಎಂದು ಮಾಹಿತಿ ನೀಡಿದರು. [ಮಂಗಳೂರು:ವಿಜೃಂಭಣೆಯ ಶಾರದಾ ಮಹೋತ್ಸವ]
ಪಟಾಕಿ ನಿಷೇಧ : ದಸರಾ ಮೆರವಣಿಗೆಯ ಸಂದರ್ಭ ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಬಗ್ಗೆ ಸಂಬಂಧಪಟ್ಟವರು ಗಮನ ಹರಿಸಬೇಕು. ಪಟಾಕಿ ಹೊಡೆದು ಅಡಚಣೆ ಉಂಟಾದರೆ, ಪೊಲೀಸರು ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಾರೆ ಎಂದು ಹರಿಕೃಷ್ಣ ಬಂಟ್ವಾಳ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಶ್ರೀ ಕ್ಷೇತ್ರದ ಉಪಾಧ್ಯಕ್ಷ ರಾಘವೇಂದ್ರ ಕೂಳೂರು, ಕೋಶಾಧಿಕಾರಿ ಪದ್ಮರಾಜ್ ಆರ್, ಕ್ಷೇತ್ರ ಅಭಿವೃದ್ಧಿ ಮಂಡಳಿಯ ಸದಸ್ಯರಾದ ದೇವೇಂದ್ರ ಪೂಜಾರಿ, ಡಾ.ಬಿ.ಜಿ. ಸುವರ್ಣ, ಎಸ್. ಹರಿಶ್ಚಂದ್ರ, ಡಿ.ಡಿ.ಕಟ್ಟೆಮಾರ್, ಲೀಲಾಕ್ಷ ಕರ್ಕೇರಾ, ಶೇಖರ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.