15ನೇ ಆಳ್ವಾಸ್ ನುಡಿಸಿರಿ ಸಮ್ಮೇಳನದಲ್ಲೂ ಸದ್ದು ಮಾಡಿದ ಶಬರಿಮಲೆ ವಿವಾದ
ಮಂಗಳೂರು, ನವೆಂಬರ್.17:ಶಿಕ್ಷಣ ಕಾಶಿ ಎಂದೇ ಗುರುತಿಸಲಾಗುವ ಮೂಡಬಿದ್ರೆಯಲ್ಲಿ ಆರಂಭಗೊಂಡಿರುವ ಕನ್ನಡ ನಾಡು-ನುಡಿ-ಸಂಸ್ಕೃತಿ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿ 2018ರ ಸಮ್ಮೇಳನದಲ್ಲಿ ಶಬರಿಮಲೆ ವಿಚಾರ ಸದ್ದು ಮಾಡಿದೆ.
ಆಳ್ವಾಸ್ ನುಡಿಸಿರಿ ಸಮ್ಮೇಳನದ ಸರ್ವಾಧ್ಯಕ್ಷರಾದ ಹಿರಿಯ ಸಾಹಿತಿ ಡಾ.ಮಲ್ಲಿಕಾ ಎಸ್ .ಘಂಟಿ ತಮ್ಮ ಭಾಷಣದಲ್ಲಿ ಶಮರಿಮಲೆ ವಿವಾದವನ್ನು ಪ್ರಸ್ತಾಪಿಸಿದ್ದಾರೆ.
ಶಬರಿಮಲೆಗೆ ಮಹಿಳೆಯರು ಪ್ರವೇಶಿಸಲು ಧಾರ್ಮಿಕ ರಾಜಕಾರಣ ಅಡ್ಡಿಯಾಗುತ್ತಿದೆ. ಎಲ್ಲಾ ವಯೋಮಿತಿಯ ಮಹಿಳೆಯರು ದೇವಾಲಯ ಪ್ರವೇಶಿಸಲು ವಿರೋಧವಿರುವುದರ ಹಿಂದೆ ಬಹುದೊಡ್ಡ ರಾಜಕಾರಣವಿದೆ ಎಂದು ಅವರು ಆಭಿಪ್ರಾಯ ವ್ಯಕ್ತಪಡಿಸಿದರು.
ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯ ಪ್ರವೇಶಕ್ಕೆ ಎಲ್ಲಾ ವಯೋಮಾನದ ಮಹಿಳೆಯರಿಗೆ ಅವಕಾಶ ಕಲ್ಪಿಸುವ ಮೂಲಕ ಸುಪ್ರೀಂ ಕೋರ್ಟ್ ಸಂವಿಧಾನದ ಲಿಂಗ ಸಮಾನತೆಯ ಆಶಯವನ್ನು ಎತ್ತಿಹಿಡಿದಿದೆ. ಆದರೆ ಇದಕ್ಕೆ ಧಾರ್ಮಿಕ ಸಂವಿಧಾನ, ಧಾರ್ಮಿಕ ರಾಜಕಾರಣ ಅಡ್ಡಿಪಡಿಸುತ್ತಿದೆ ಎಂದು ಟೀಕಿಸಿದರು.
ಈ ದೇಶವನ್ನು, ದೇಶವಾಸಿಗಳನ್ನು, ಅವರ ರಕ್ಷಣೆಯನ್ನು, ಅವರನ್ನು ಮುನ್ನಡೆಸುವ ಶಕ್ತಿ ಇರುವುದು ಸಂವಿಧಾನಕ್ಕೋ ಅಥವಾ ನಂಬಿಕೆ- ಭಾವನೆಗಳಿಗೋ? ಎಂದು ಮಲ್ಲಿಕಾ ಪ್ರಶ್ನಿಸಿದರು.
ಮಕ್ಕಳು ಮತ್ತು ಋತುಚಕ್ರ ನಿಂತ ಮಹಿಳೆಯರಿಗೆ ಮಾತ್ರ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಪ್ರವೇಶ ಎಂಬ ವಾದ ಕುತರ್ಕ. ಋತುಚಕ್ರದೊಳಗಿನ ಮಹಿಳೆಯರು ದೇವಾಲಯ ಪ್ರವೇಶ ಮಾಡುವುದರಿಂದ ದೇವಾಲಯದ ಪಾವಿತ್ರ್ಯತೆ ನಾಶವಾಗುತ್ತದೆ ಎನ್ನುವವರ ವಾದಕ್ಕೆ ಯಾವುದೇ ತಾತ್ವಿಕ, ತಾರ್ಕಿಕತೆಯಿಲ್ಲ.
ಆವಿಷ್ಕಾರದಲ್ಲಿ ತೊಡಗಿರುವ ದೇಶದಲ್ಲಿ ಋತುಚಕ್ರದ ವಿಚಾರದಲ್ಲಿ ಉದ್ಭವಿಸಿರುವ ಬಿಕ್ಕಟ್ಟು ನೋಡಿದರೆ ನಾವು ನಿಂತ ನೆಲದಲ್ಲಿ ಚಲಿಸಿಯೇ ಇಲ್ಲವೆಂದೆನಿಸುತ್ತದೆ ಎಂದು ವಿಷಾದ ವ್ಯಕ್ತಪಡಿಸಿದರು.

ಮುಸ್ಲಿಮರೇ ಇಲ್ಲದ ಹಳ್ಳಿಗಳಲ್ಲಿ ದರ್ಗಾಗಳಿವೆ
ತಮ್ಮ ಭಾಷಣದಲ್ಲಿ ಸಾಮರಸ್ಯದ ಬಗ್ಗೆಯೂ ಪ್ರಸ್ತಾಪಿಸಿದ ಮಲ್ಲಿಕಾ ಘಂಟಿ ಉತ್ತರ ಕರ್ನಾಟಕದಲ್ಲಿ ಮುಸ್ಲಿಮರೇ ಇಲ್ಲದ ಎಷ್ಟೋ ಹಳ್ಳಿಗಳಲ್ಲಿ ದರ್ಗಾಗಳಿವೆ. ಮೊಹರಂನಂತಹ ಆಚರಣೆಗಳನ್ನು ಹಿಂದೂಗಳೇ ಮಾಡುತ್ತಾರೆ. ದರ್ಗಾದ ದೇವರುಗಳಿಗೆ ಬ್ರಾಹ್ಮಣರ ಮನೆಯಿಂದಲೇ ಸಕ್ಕರೆ ಹೋದ ಮೇಲೆ ಮೊಹರಂ ಆಚರಿಸಲಾಗುತ್ತದೆ ಮಲ್ಲಿಕಾ ಘಂಟಿ ತಿಳಿಸಿದರು.

ಹಿಂಸೆ ಏಕೆ ವಿಜೃಂಭಿಸುತ್ತಿದೆ ?
ಕರಾವಳಿಯ ದೇವರುಗಳು ಮಾತ್ರ ಕೂಡಿ ಬದುಕುತ್ತಿಲ್ಲ ಎಂದ ಮಲ್ಲಿಕಾ ಘಂಟಿ ಜೈನ ಮುನಿಗಳು ನಡೆದಾಡಿದ, ಇಂದಿಗೂ ಬಸದಿಗಳು ಇರುವ ಈ ಸಂಪದ್ಭರಿತ ನೆಲದಲ್ಲಿ ಹಿಂಸೆ ಏಕೆ ವಿಜೃಂಭಿಸುತ್ತಿದೆ ? ಎಂದು ಅವರು ವಿಷಾದ ವ್ಯಕ್ತಪಡಿಸಿದರು.

ಸಂಪ್ರದಾಯನಿಷ್ಠರ ನಿದ್ದೆಗೆಡಿಸಿದೆ
ವಿವಾಹೇತರ ಸಂಬಂಧ ಮತ್ತು ತ್ರಿವಳಿ ತಲಾಕ್ ಕುರಿತು ನ್ಯಾಯಾಲಯ ನೀಡಿದ ತೀರ್ಪುಗಳನ್ನು ಸಮಾಜ ಸಹಾನುಭೂತಿಯಿಂದ ನೋಡಿದ್ದರೆ ಆತಂಕವಿರಲಿಲ್ಲ. ಆದರೆ ಮಹಿಳಾ ಸ್ವಾತಂತ್ರ್ಯವನ್ನು ಊಳಿಗಮಾನ್ಯ ವ್ಯವಸ್ಥೆಯ ಸಾಂಸ್ಕೃತಿಕ ಮತ್ತು ಧಾರ್ಮಿಕ ನೆಲೆಯಿಂದ ನೋಡಿದ ಕಾರಣದಿಂದಲೇ ಈ ತೀರ್ಪು ಸಂಪ್ರದಾಯನಿಷ್ಠರನ್ನು ನಿದ್ದೆಗೆಡಿಸಿದೆ ಎಂದು ಮಲ್ಲಿಕಾ ಆತಂಕ ವ್ಯಕ್ತಪಡಿಸಿದರು.

ಬೆಲೆ ನಿಗದಿಗೊಳಿಸುವ ಹಕ್ಕು ನೀಡಬೇಕು
ತಮ್ಮ ಭಾಷಣದಲ್ಲಿ ರೈತರ ಆತ್ಮಹತ್ಯೆ ಬಗ್ಗೆ ಪ್ರಸ್ತಾಪಿಸಿದ ಡಾ. ಮಲ್ಲಿಕಾ ಘಂಟಿ, ರಾಜ್ಯದಲ್ಲಿ ರೈತರ ಆತ್ಮಹತ್ಯೆ ನಡೆಯುತ್ತಿದೆ. ಆತ ಆರ್ಥಿಕವಾಗಿ ಮುಂದೆ ಬರಬೇಕಾದರೆ ರೈತ ಬೆಳೆದ, ಉತ್ಪಾದಿಸಿದ ವಸ್ತುಗಳಿಗೆ ಅವನೇ ಬೆಲೆ ನಿಗದಿಗೊಳಿಸುವ ಹಕ್ಕು ನೀಡಬೇಕು.
ಬೆಳೆಗೆ ಬೆಲೆಯಿಲ್ಲದೆ ಬೀದಿಗೆ ಚೆಲ್ಲಿ ಹೋಗುವ ರೈತನ ಅಸಹಾಯಕತೆ ಆಕ್ರೋಶವಾಗುವ ಮೊದಲು ಆಡಳಿತ, ಸಮಾಜ ಈ ಕುರಿತು ಗಂಭೀರ ಚಿಂತನೆ ನಡೆಸಬೇಕು ಎಂದು ಅವರು ಸರಕಾರಕ್ಕೆ ಕಿವಿಮಾತು ಹೇಳಿದರು.
-
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ











Click it and Unblock the Notifications