ಎಂಡೋಸಲ್ಫಾನ್ ಗೆ ಮಗನನ್ನು ಕಳೆದುಕೊಂಡವರಿಗೆ ಈಗ ಬ್ಯಾಂಕ್ ನೋಟಿಸ್
ಮಂಗಳೂರು, ಸೆಪ್ಟೆಂಬರ್ 2: ಎಂಡೋಸಲ್ಫಾನ್ ಗೆ ಮಗನನ್ನು ಕಳೆದುಕೊಂಡ ವ್ಯಕ್ತಿಯೊಬ್ಬರಿಗೆ ಬ್ಯಾಂಕ್ ನ ಪರವಾಗಿ ಕೋರ್ಟ್ ನಿಂದ ನೋಟಿಸ್ ಬಂದಿದೆ. ಇದೇನು ನೋಟಿಸ್, ಏಕೆ ಬಂದಿದೆ ಎಂಬುದರ ವಿವರ ಮನ ಕಲುಕುವಂತಿದೆ.
ಎಂಡೋಸಲ್ಫಾನ್ ಪೀಡಿತ ಮಗನನ್ನು ಉಳಿಸಿಕೊಳ್ಳುವ ಸಲುವಾಗಿ ವಾಸುದೇವ ನಾಯಕ್ ಅವರು ಸರಕಾರಿ ಬ್ಯಾಂಕ್ ನಿಂದ ಸಾಲ ಪಡೆದಿದ್ದರು. ಅದನ್ನು ತೀರಿಸಲು ಸಾಧ್ಯವಾಗಿಲ್ಲ ಎಂದು ಕೋರ್ಟ್ ನಿಂದ ನೋಟಿಸ್ ಬಂದಿದೆ. ಸಾಲ ತೀರಿಸಬೇಕು ಎಂಬುದು ಒಂದು ಕಡೆಯಾದರೆ, ಮಗ ಶ್ರೇಯಸ್ ನನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂಬ ದುಃಖ ಮತ್ತೊಂದು ಕಡೆ.

ವಾಸುದೇವ ನಾಯಕ್ ಅವರು ತಮ್ಮ ಮಗ ಶ್ರೇಯಸ್ ಚಿಕಿತ್ಸೆಗಾಗಿ ಸರಕಾರಿ ಬ್ಯಾಂಕಿನಿಂದ ವರ್ಷಗಳ ಹಿಂದೆ 28,000 ರುಪಾಯಿ ಸಾಲ ಪಡೆದಿದ್ದರು. ಇದನ್ನು ಮರುಪಾವತಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಅಸಲಿಗೆ ಬಡ್ಡಿ ಸೇರಿ 58,000 ರುಪಾಯಿ ತಲುಪಿದೆ. ಈ ಮಧ್ಯೆ ಕೆಲವು ದಿನಗಳ ಹಿಂದೆ ಪುತ್ರ ಶ್ರೇಯಸ್ ಮೃತಪಟ್ಟಿದ್ದರು. ಸಾಲ ಮರುಪಾವತಿಸದ ಹಿನ್ನೆಲೆಯಲ್ಲಿ ಬ್ಯಾಂಕಿನಿಂದ ವಕೀಲರ ಮೂಲಕ ನೋಟಿಸ್ ಬಂದಿದೆ.
ಮಗನ ಚಿಕಿತ್ಸೆಗಾಗಿ ವಾಸುದೇವ ನಾಯಕ್ ಹಲವರಿಂದ ಭಾರೀ ಮೊತ್ತ ಸಾಲವಾಗಿ ಪಡೆದಿದ್ದಾರೆ. ಈ ಮೊತ್ತವನ್ನು ಮರು ಪಾವತಿಸಲಾಗದೆ ಸಂಕಷ್ಟದಲ್ಲಿ ಸಿಲುಕಿರುವಾಗ ಕೋರ್ಟ್ ಗೆ ಹಾಜರಾಗುವಂತೆ ನೋಟಿಸ್ ಬಂದಿದೆ. ಇದೇ ವೇಳೆ ವಾಸುದೇವ ನಾಯಕ್ ಅವರ ಸಂಕಷ್ಟದ ಬಗ್ಗೆ ತಿಳಿದು ಸಾಲ ಮರು ಪಾವತಿಸಲು ಸಹಾಯ ಒದಗಿಸುವುದಾಗಿ ನಟ ಹಾಗೂ ಸಂಸದ ಸುರೇಶ್ ಗೋಪಿ ಭರವಸೆ ನೀಡಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications