ಕರಾವಳಿಯ ಮೀನುಗಾರರಿಗೆ ಇನ್ನು ಮುಂದೆ ಸಾಗರ ಮಿತ್ರರ ನೆರವು
ಮಂಗಳೂರು, ಮಾರ್ಚ್ 12: ಕರಾವಳಿಯ ಕಡಲ ಮಕ್ಕಳ ಜೀವನಾಧಾರ ಮೀನುಗಾರಿಕೆ. ಕಡಲ ಮಕ್ಕಳಿಗೆ ಮೀನುಗಾರಿಕೆ ಇಲ್ಲದೇ ಜೀವನ ಇಲ್ಲ, ಬದುಕಿಗೆ ಆಧಾರ ಇಲ್ಲ. ಸಮುದ್ರರಾಜನ ಜೊತೆ ಸೆಣಸಾಡಿ ಮತ್ಸ್ಯ ಬೇಟೆಯಾಡಿ, ದಡಕ್ಕೆ ಬಂದು ಮೀನು ಮಾರಾಟ ಮಾಡಿದರಷ್ಟೇ ಅವರ ಬದುಕಿನ ನಾವೆ ಸಾಗುತ್ತದೆ. ಆದರೆ ಮೀನುಗಾರರ ಬದುಕು ಮಾತ್ರ ಮುನ್ನೆಲೆಗೆ ಬಂದಿಲ್ಲ. ಹೀಗಾಗಿ ಸರ್ಕಾರದ ಯೋಜನೆಗಳನ್ನು ಅವರಿಗೆ ತಲುಪಿಸಲು ಸಾಗರ ಮಿತ್ರರನ್ನು ನೇಮಕ ಮಾಡಲಾಗಿದೆ.
ಕರಾವಳಿಯಲ್ಲಿ ಅತೀ ಹೆಚ್ಚಿನ ಆದಾಯದ ಮೂಲಗಳಲ್ಲಿ ಮೀನುಗಾರಿಕೆಯು ಒಂದು. ವರ್ಷದ ಹೆಚ್ಚಿನ ದಿನ ಸಮುದ್ರದಲ್ಲೇ ಇರುವ ಈ ಮೀನುಗಾರರಿಗೆ ಸರಕಾರದ ಸೌಲಭ್ಯ, ಯೋಜನೆಗಳ ಬಗ್ಗೆ ಮಾಹಿತಿ ಸಿಗುವುದು ಕಡಿಮೆ. ಇದಕ್ಕಾಗಿಯೇ ಇದೀಗ ಮೀನುಗಾರರು ಮತ್ತು ಮೀನುಗಾರಿಕೆ ಇಲಾಖೆಯ ನಡುವೆ ಸಂಪರ್ಕ ಸೇತುವಾಗಿ ಸಾಗರ ಮಿತ್ರರು ಬರುತ್ತಿದ್ದಾರೆ.
ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸಾಗರ ಮಿತ್ರ ಪರಿಕಲ್ಪನೆ ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಅನುಷ್ಠಾನಗೊಳ್ಳುತ್ತಿದೆ. ಮೀನುಗಾರರು ಮತ್ತು ಮೀನುಗಾರಿಕೆ ಇಲಾಖೆಯ ನಡುವೆ ಸಂಪರ್ಕ ಸೇತುವಾಗಿ ಸಾಗರ ಮಿತ್ರರು ಬರುತ್ತಿದ್ದಾರೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದ 320 ಕಿ.ಮೀ. ವ್ಯಾಪ್ತಿಯ 162 ಮೀನುಗಾರಿಕೆ ಗ್ರಾಮಗಳಿಗೆ ಸಂಬಂಧಿಸಿ 120 ಸಾಗರ ಮಿತ್ರರನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದೆ.

ದಕ್ಷಿಣ ಕನ್ನಡಕ್ಕೆ 14, ಉಡುಪಿಗೆ 50 ಮತ್ತು ಉತ್ತರ ಕನ್ನಡದ 54 ಸಾಗರಮಿತ್ರರು ಬರಲಿದ್ದಾರೆ. ಮೀನುಗಾರಿಕೆ ಮಹಾವಿದ್ಯಾಲಯದ ಸಹಯೋಗದಲ್ಲಿ ಮೀನುಗಾರಿಕೆ ಇಲಾಖೆ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ ಎಂದು ಇಲಾಖೆಯ ಸಂಯೋಜನಾಧಿಕಾರಿ ಪ್ರೊ. ಡಾ. ವರದರಾಜ್ ಮಾಹಿತಿ ನೀಡಿದ್ದಾರೆ.
ಸಾಗರ ಮಿತ್ರರು ಮೀನುಗಾರರಿಗೆ ಸುಸ್ಥಿರ ಮೀನುಗಾರಿಕೆ, ಸರಕಾರದ ಸೌಲಭ್ಯ, ಯೋಜನೆಗಳ ಬಗ್ಗೆ ಮಾಹಿತಿ ನೀಡುತ್ತಾರೆ. ಹವಾಮಾನ ಮುನ್ಸೂಚನೆ, ನೈಸರ್ಗಿಕ ವಿಪತ್ತುಗಳ ಬಗ್ಗೆ ಮಾಹಿತಿ, ತಾಜಾ ಮೀನುಗಳ ಸ್ವಚ್ಛತೆ, ವೈಯಕ್ತಿಕ ಸ್ವಚ್ಛತೆ, ಆರೋಗ್ಯಕರ ವಾತಾವರಣ ನಿರ್ವಹಣೆ ಬಗ್ಗೆ ತಿಳಿವಳಿಕೆ, ಮತ್ಸ್ಯ ಸಂಪನ್ಮೂಲವನ್ನು ವ್ಯವಸ್ಥಿತವಾಗಿ ಸಂರಕ್ಷಿಸುವುದು.
ಪೇಟೆ ಧಾರಣೆ: ಮೀನು, ತರಕಾರಿ, ರಬ್ಬರ್ ಹಾಗೂ ರಸಗೊಬ್ಬರ ಮಾರುಕಟ್ಟೆ ಬೆಲೆ
ಕರಾವಳಿಯ ಪರಿಸರ ಸಂರಕ್ಷಣೆ, ಮೀನುಗಾರಿಕೆಯಲ್ಲಿ ನೀತಿ ಸಂಹಿತೆ, ಅಕ್ರಮ ಮೀನುಗಾರಿಕೆ ತಡೆಗೆ ಜಾಗೃತಿ, ಮೀನುಗಾರ ಮಹಿಳೆಯರ ಆರ್ಥಿಕತೆಯನ್ನು ಅಭಿವೃದ್ಧಿಪಡಿಸುವ ಬಗ್ಗೆ ಮಾಹಿತಿ, ತರಬೇತಿ, ಮೀನುಗಾರಿಕೆಗೆ ತೆರಳುವ ದೋಣಿಗಳು, ಮೀನಿನ ಉತ್ಪಾದನೆ, ಮೌಲ್ಯ, ಮಾರಾಟದ ವಿವರ ಸಂಗ್ರಹಿಸಿ ಪ್ರತೀ ದಿನ ಸರಕಾರಕ್ಕೆ ವರದಿ ನೀಡುವುದು ಮುಂತಾದ ಕರ್ತವ್ಯಗಳನ್ನು ಸಾಗರ ಮಿತ್ರರು ನಿರ್ವಹಿಸಲಿದ್ದಾರೆ.
ಒಂದು ಮೀನುಗಾರಿಕೆ ಗ್ರಾಮಕ್ಕೆ ಒಬ್ಬರಂತೆ ಸಾಗರ ಮಿತ್ರರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಈ ಮೂಲಕ ಇನ್ಮುಂದೆ ಮೀನುಗಾರರು ಮತ್ತು ಮೀನುಗಾರಿಕೆ ಇಲಾಖೆಯ ನಡುವೆ ಸಂಪರ್ಕ ಸೇತುವಾಗಿ ಸಾಗರ ಮಿತ್ರರು ಇರಲಿದ್ದಾರೆ.
ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜನರ ಬಳಿಗೆ ತಲುಪಿಸಲು ಈ ಸಾಗರ ಮಿತ್ರರು ನೆರವಾಗಲಿದ್ದಾರೆ. ದಿನವಿಡೀ ಕಡಲಿನಲ್ಲಿ ಜೀವನಕ್ಕಾಗಿ ಸೆಣಸಾಡುವ ಮೀನುಗಾರರಿಗೆ ಸರ್ಕಾರದ ಯೋಜನೆಗಳು ನೆರವಾಗುವ ವಿಶ್ವಾಸ ಅಧಿಕಾರಿಗಳದ್ದಾಗಿದೆ. ಹೀಗಾಗಿ ರಾಜ್ಯದ ಮೂರು ಕರಾವಳಿ ಜಿಲ್ಲೆಗಳಲ್ಲಿ ಈ ಯೋಜನೆ ಮೀನುಗಾರರ ಜೀವನದಲ್ಲಿ ಮತ್ತಷ್ಟು ಸುಧಾರಣೆ ತರುವ ಆಶಾವಾದ ವ್ಯಕ್ತವಾಗಿದೆ.
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ












Click it and Unblock the Notifications