ಮಂಗಳೂರಿನಲ್ಲಿ 6 ರಿಂದ 2 ಬಾಟಲ್ ಗಿಳಿದ ಮದ್ಯದ ಮಾರಾಟ!
ಮಂಗಳೂರು, ಏಪ್ರಿಲ್ 12 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದ್ಯ ವಹಿವಾಟಿಗೆ ಭಾರಿ ಹೊಡೆತ ಬಿದ್ದಿದ್ದು, ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ನಡೆಯುವ ದುಪ್ಪಟ್ಟು ವ್ಯವಹಾರ ಈಗ ಅರ್ಧದಷ್ಟು ಕುಸಿತಗೊಂಡಿರುವುದು ಕಂಡು ಬಂದಿದೆ.
ಸಾಮಾನ್ಯವಾಗಿ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಅತೀ ಹೆಚ್ಚು ಕಾರ್ಯಕ್ರಮಗಳು, ಮದುವೆಗಳು ನಡೆಯುತ್ತವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಎರಡು ತಿಂಗಳಲ್ಲಿ ಅತ್ಯಧಿಕ ಮದ್ಯ ಮಾರಾಟ ನಡೆಯುತ್ತದೆ. ಆದರೆ ಈಗಿನ ಪರಿಸ್ಥಿತಿ ಹಾಗಿಲ್ಲ. ಪ್ರಸ್ತುತ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲೆಯಲ್ಲಿ ಮದ್ಯ ಮಾರಾಟ ಕುಸಿದಿದೆ.
ಮದ್ಯದಂಗಡಿಗಳ ಮೇಲೆ ಹದ್ದಿನ ಕಣ್ಣು...
ರಾಜ್ಯ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಚುನಾವಣಾ ಆಯೋಗ ನೀತಿ ಸಂಹಿತೆಯನ್ನು ಕಟ್ಟು ನಿಟ್ಟಾಗಿ ಜಾರಿಗೆ ತಂದಿದೆ. ಈ ಹಿನ್ನೆಲೆಯಲ್ಲಿ ಅಕ್ರಮ ಮದ್ಯ ಮಾರಾಟ ಹಾಗೂ ಮತದಾರರಿಗೆ ಮದ್ಯವನ್ನು ಆಮಿಷವಾಗಿ ಬಳಸದಂತೆ ಮದ್ಯದಂಗಡಿಗಳ ಮೇಲೆ ಚುನಾವಣಾ ಆಯೋಗ ಹದ್ದಿನ ಕಣ್ಣಿರಿಸಿದೆ. ಇದು ಮದ್ಯ ಮಾರಾಟಗಾರರ ವ್ಯವಹಾರ ಕುಸಿಯುವಂತೆ ಮಾಡಿದೆ.

ಕೇವಲ 2 ಬಾಟಲ್ ಮಾತ್ರ!
ಕಾನೂನಿನ ಪ್ರಕಾರ ಸಾಮಾನ್ಯ ದಿನಗಳಲ್ಲಿ ಒಬ್ಬರಿಗೆ ಗರಿಷ್ಠ 6 ಬಾಟಲ್ ಮದ್ಯ ನೀಡಬಹುದಾಗಿದೆ. ಆದರೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಈ ಸಮಯದಲ್ಲಿ ಒಬ್ಬರಿಗೆ ಕೇವಲ 2 ಬಾಟಲ್ ಮದ್ಯ ಮಾತ್ರ ಮಾರಬಹುದಾಗಿದೆ. ಅಲ್ಲದೆ ಅಂಗಡಿ ಮಾಲೀಕರು ಪ್ರತಿನಿತ್ಯ ತಮಗಿರುವ ಬೇಡಿಕೆ ಹಾಗೂ ವ್ಯವಹಾರದ ಲೆಕ್ಕವನ್ನೂ ಚುನಾವಣಾ ಅಧಿಕಾರಿಗಳಿಗೆ ನೀಡಬೇಕಾಗಿದೆ. ಬೇಡಿಕೆ ಹೆಚ್ಚಿಸದಂತೆ ಚುನಾವಣಾ ಅಧಿಕಾರಿಗಳು ಮದ್ಯಮಾರಾಟಗಾರರಿಗೆ ಸೂಚಿಸಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ
ಕಳೆದ ವರ್ಷ ಮಾರ್ಚ್ ಗೆ ಹೋಲಿಸಿದರೆ ಈ ಬಾರಿ ಜಿಲ್ಲೆಯಲ್ಲಿ ಸುಮಾರು 8,544 ಕೇಸ್ ಬಾಕ್ಸಗಳು ಕಡಿಮೆ ಮಾರಾಟವಾಗಿವೆ. ಗ್ರಾಮೀಣ ಭಾಗದಲ್ಲಿ ಶೇ. 90 ರಷ್ಟು ಮದ್ಯ ಮಾರಾಟ ನಿಯಂತ್ರಣದಲ್ಲಿದ್ದು, ನಗರದ ಪ್ರದೇಶದಲ್ಲಿ ಅಧಿಕ ಪಾರ್ಸೆಲ್ ಕೊಡಲು ಮಾಲೀಕರಿಗೆ ಅವಕಾಶವಿಲ್ಲ. ಅಲ್ಲದೇ ಜಿಲ್ಲೆಯಲ್ಲಿ ಈ ಸಂದರ್ಭದಲ್ಲಿ ನಡೆಯುವ ಪಾರ್ಟಿ, ವಿವಿಧ ಬಗೆಯ ಸತ್ಕಾರ ಕೂಟಗಳ ಆಯೋಜನೆಗೆ ಪರವಾನಿಗೆ ನೀಡುತ್ತಿಲ್ಲ. ಅನುಮತಿ ನೀಡಿದರೂ ಮದ್ಯ ಬಾಟಲಿಗಳ ಸಂಖ್ಯೆಗೆ ಕಡಿವಾಣ ಬಿದ್ದಿದೆ.

ಬಂದ್ ಆಯ್ತು ಪಾನ ವ್ಯವಸ್ಥೆ
ಕಾನೂನು ಪ್ರಕಾರ ವೈನ್ ಶಾಪ್ ಗಳಲ್ಲಿ ಕೇವಲ ಮದ್ಯ ಮಾರಾಟ ಮಾಡಬಹುದು. ಅಲ್ಲಿ ಕುಳಿತು ಕುಡಿಯುವಂತಿಲ್ಲ. ಆದರೆ ಕೆಲವು ವೈನ್ ಶಾಪ್ ಗಳಲ್ಲಿ ಕುಡಿಯುವುದಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಿರುತ್ತಾರೆ. ಈಗ ಚುನಾವಣಾ ಆಯೋಗ ಇದರ ಮೇಲೂ ಕಣ್ಣಿಟ್ಟಿದ್ದು, ಕ್ರಮ ಕೈಗೊಳ್ಳಲಾಗುತ್ತಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications