ಮಂಗಳೂರಿನಲ್ಲಿ 6 ರಿಂದ 2 ಬಾಟಲ್ ಗಿಳಿದ ಮದ್ಯದ ಮಾರಾಟ!
ಮಂಗಳೂರು, ಏಪ್ರಿಲ್ 12 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದ್ಯ ವಹಿವಾಟಿಗೆ ಭಾರಿ ಹೊಡೆತ ಬಿದ್ದಿದ್ದು, ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ನಡೆಯುವ ದುಪ್ಪಟ್ಟು ವ್ಯವಹಾರ ಈಗ ಅರ್ಧದಷ್ಟು ಕುಸಿತಗೊಂಡಿರುವುದು ಕಂಡು ಬಂದಿದೆ.
ಸಾಮಾನ್ಯವಾಗಿ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಅತೀ ಹೆಚ್ಚು ಕಾರ್ಯಕ್ರಮಗಳು, ಮದುವೆಗಳು ನಡೆಯುತ್ತವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಎರಡು ತಿಂಗಳಲ್ಲಿ ಅತ್ಯಧಿಕ ಮದ್ಯ ಮಾರಾಟ ನಡೆಯುತ್ತದೆ. ಆದರೆ ಈಗಿನ ಪರಿಸ್ಥಿತಿ ಹಾಗಿಲ್ಲ. ಪ್ರಸ್ತುತ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲೆಯಲ್ಲಿ ಮದ್ಯ ಮಾರಾಟ ಕುಸಿದಿದೆ.
ಮದ್ಯದಂಗಡಿಗಳ ಮೇಲೆ ಹದ್ದಿನ ಕಣ್ಣು...
ರಾಜ್ಯ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಚುನಾವಣಾ ಆಯೋಗ ನೀತಿ ಸಂಹಿತೆಯನ್ನು ಕಟ್ಟು ನಿಟ್ಟಾಗಿ ಜಾರಿಗೆ ತಂದಿದೆ. ಈ ಹಿನ್ನೆಲೆಯಲ್ಲಿ ಅಕ್ರಮ ಮದ್ಯ ಮಾರಾಟ ಹಾಗೂ ಮತದಾರರಿಗೆ ಮದ್ಯವನ್ನು ಆಮಿಷವಾಗಿ ಬಳಸದಂತೆ ಮದ್ಯದಂಗಡಿಗಳ ಮೇಲೆ ಚುನಾವಣಾ ಆಯೋಗ ಹದ್ದಿನ ಕಣ್ಣಿರಿಸಿದೆ. ಇದು ಮದ್ಯ ಮಾರಾಟಗಾರರ ವ್ಯವಹಾರ ಕುಸಿಯುವಂತೆ ಮಾಡಿದೆ.

ಕೇವಲ 2 ಬಾಟಲ್ ಮಾತ್ರ!
ಕಾನೂನಿನ ಪ್ರಕಾರ ಸಾಮಾನ್ಯ ದಿನಗಳಲ್ಲಿ ಒಬ್ಬರಿಗೆ ಗರಿಷ್ಠ 6 ಬಾಟಲ್ ಮದ್ಯ ನೀಡಬಹುದಾಗಿದೆ. ಆದರೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಈ ಸಮಯದಲ್ಲಿ ಒಬ್ಬರಿಗೆ ಕೇವಲ 2 ಬಾಟಲ್ ಮದ್ಯ ಮಾತ್ರ ಮಾರಬಹುದಾಗಿದೆ. ಅಲ್ಲದೆ ಅಂಗಡಿ ಮಾಲೀಕರು ಪ್ರತಿನಿತ್ಯ ತಮಗಿರುವ ಬೇಡಿಕೆ ಹಾಗೂ ವ್ಯವಹಾರದ ಲೆಕ್ಕವನ್ನೂ ಚುನಾವಣಾ ಅಧಿಕಾರಿಗಳಿಗೆ ನೀಡಬೇಕಾಗಿದೆ. ಬೇಡಿಕೆ ಹೆಚ್ಚಿಸದಂತೆ ಚುನಾವಣಾ ಅಧಿಕಾರಿಗಳು ಮದ್ಯಮಾರಾಟಗಾರರಿಗೆ ಸೂಚಿಸಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ
ಕಳೆದ ವರ್ಷ ಮಾರ್ಚ್ ಗೆ ಹೋಲಿಸಿದರೆ ಈ ಬಾರಿ ಜಿಲ್ಲೆಯಲ್ಲಿ ಸುಮಾರು 8,544 ಕೇಸ್ ಬಾಕ್ಸಗಳು ಕಡಿಮೆ ಮಾರಾಟವಾಗಿವೆ. ಗ್ರಾಮೀಣ ಭಾಗದಲ್ಲಿ ಶೇ. 90 ರಷ್ಟು ಮದ್ಯ ಮಾರಾಟ ನಿಯಂತ್ರಣದಲ್ಲಿದ್ದು, ನಗರದ ಪ್ರದೇಶದಲ್ಲಿ ಅಧಿಕ ಪಾರ್ಸೆಲ್ ಕೊಡಲು ಮಾಲೀಕರಿಗೆ ಅವಕಾಶವಿಲ್ಲ. ಅಲ್ಲದೇ ಜಿಲ್ಲೆಯಲ್ಲಿ ಈ ಸಂದರ್ಭದಲ್ಲಿ ನಡೆಯುವ ಪಾರ್ಟಿ, ವಿವಿಧ ಬಗೆಯ ಸತ್ಕಾರ ಕೂಟಗಳ ಆಯೋಜನೆಗೆ ಪರವಾನಿಗೆ ನೀಡುತ್ತಿಲ್ಲ. ಅನುಮತಿ ನೀಡಿದರೂ ಮದ್ಯ ಬಾಟಲಿಗಳ ಸಂಖ್ಯೆಗೆ ಕಡಿವಾಣ ಬಿದ್ದಿದೆ.

ಬಂದ್ ಆಯ್ತು ಪಾನ ವ್ಯವಸ್ಥೆ
ಕಾನೂನು ಪ್ರಕಾರ ವೈನ್ ಶಾಪ್ ಗಳಲ್ಲಿ ಕೇವಲ ಮದ್ಯ ಮಾರಾಟ ಮಾಡಬಹುದು. ಅಲ್ಲಿ ಕುಳಿತು ಕುಡಿಯುವಂತಿಲ್ಲ. ಆದರೆ ಕೆಲವು ವೈನ್ ಶಾಪ್ ಗಳಲ್ಲಿ ಕುಡಿಯುವುದಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಿರುತ್ತಾರೆ. ಈಗ ಚುನಾವಣಾ ಆಯೋಗ ಇದರ ಮೇಲೂ ಕಣ್ಣಿಟ್ಟಿದ್ದು, ಕ್ರಮ ಕೈಗೊಳ್ಳಲಾಗುತ್ತಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications