ಹೊಸ ವರ್ಷಾಚರಣೆ ತಕರಾರಿಗೆ ಜತೆಯಲ್ಲಿದ್ದವನದೇ ಕೊಲೆ
ಮಂಗಳೂರು, ಜನವರಿ 1: ಹೊಸ ವರ್ಷದ ಆರಂಭದಲ್ಲೇ ಮಂಗಳೂರಲ್ಲಿ ನೆತ್ತರು ಹರಿದಿದೆ. ಹೊಸ ವರುಷವನ್ನು ಸ್ವಾಗತಿಸುವ ವಿಚಾರದಲ್ಲಿ ಯುವಕರಿಬ್ಬರ ಮಧ್ಯೆ ನಡೆದ ಮಾತಿನ ಚಕಮಕಿ ಕೊಲೆಯಲ್ಲಿ ಪರ್ಯವಸಾನವಾದ ಘಟನೆ ಕುತ್ತಾರ್ ಜಂಕ್ಷನ್ ನಲ್ಲಿ ನಡೆದಿದೆ. ಕುತ್ತಾರ್ ನಲ್ಲಿರುವ ಸಲೂನ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ ಬಳ್ಳಾರಿ ಮೂಲದ ರುದ್ರವಣಿ ಸಂತೋಷ್ (26) ಕೊಲೆಯಾದ ಯುವಕ.
ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಸಮೀಪ ಇರುವ ಕುತ್ತಾರ್ ನಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದೆ. ಅದೇ ಸಲೂನ್ ನಲ್ಲಿ ಕೆಲಸ ಮಾಡುತ್ತಿದ್ದ ಈತನ ಸ್ನೇಹಿತ ಶಿಕಾರಿಪುರದ ಪ್ರದೀಪ್ ಜೊತೆ ಹೊಸ ವರ್ಷಾಚರಣೆ ವಿಷಯದಲ್ಲಿ ಮಾತಿನ ಚಕಮಕಿ ನಡೆದಿದೆ.[ಕೆಆರ್ ಪೇಟೆ ತಾಲೂಕಿನಲ್ಲಿ ಜೆಡಿಎಸ್ ಕಾರ್ಯಕರ್ತನ ಕೊಲೆ]

ಈ ವೇಳೆ ಕುಡಿದ ಅಮಲಿನಲ್ಲಿದ್ದ ಪ್ರದೀಪ್, ಸಂತೋಷ್ ಗೆ ಚೂರಿಯಿಂದ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಸಂತೋಷ್ ನನ್ನು ಆಸ್ಪತ್ರೆಗೆ ಸೇರಿಸುವ ಪ್ರಯತ್ನ ಮಾಡಿದರೂ ಸಫಲವಾಗಿಲ್ಲ. ಕೊಲೆ ಮಾಡಿದ ಆರೋಪಿ ಪ್ರದೀಪ್, ಉಳ್ಳಾಲ ಪೊಲೀಸರಿಗೆ ಶರಣಾಗಿದ್ದಾನೆ.[ಪುಣೆ ಟೆಕಿ ಕೊಲೆ ಪ್ರಕರಣ, ಬೆಂಗಳೂರಿನ ಬುದ್ಧಿವಂತ ಕ್ರಿಮಿನಲ್ ಬಲೆಗೆ]
ಮೂಲ್ಕಿಯಲ್ಲಿ ಯುವಕ ನಾಪತ್ತೆ :
ಕಿನ್ನಿಗೋಳಿಯ ಕಿಲೆಂಜೂರು ಕಂಬಳಿ ಮನೆ ನಿವಾಸಿ ಉಮೇಶ್ ಶೆಟ್ಟಿ (29) ಎಂಬ ಯುವಕ ನಾಪತ್ತೆಯಾಗಿದ್ದಾನೆ. ಪಣಂಬೂರಿನ ಟ್ರಾನ್ಸ್ ಪೋರ್ಟ್ ನಲ್ಲಿ ಕೆಲಸ ಮಾಡುತ್ತಿದ್ದ ಉಮೇಶ್, ಪ್ರತಿ ದಿನ ಪಣಂಬೂರಿಗೆ ಬಸ್ ನಲ್ಲಿ ಹೋಗಿ ಬರುತ್ತಿದ್ದ. ಈತ ಪಕ್ಷಿಕೆರೆಯಲ್ಲಿ ಬಸ್ ನಿಂದ ಇಳಿದು ಅಪರಿಚಿತ ವಾಹನದಲ್ಲಿ ತೆರಳಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಕುರಿತು ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications