ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜ.12ರಿಂದ ಮಂಗ್ಳೂರಲ್ಲೂ 'ವಿವೇಕ್ ಬ್ಯಾಂಡ್' ಅಭಿಯಾನ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಜನವರಿ. 11 : 'ಸಮರ್ಥ ಭಾರತ' ವತಿಯಿಂದ ಯುವ ಅಭಿಯಾನ 'ವಿವೇಕ್ ಬ್ಯಾಂಡ್' ಜನವರಿ 12ರಿಂದ ಜ.26ರ ವರೆಗೆ ಎರಡು ವಾರಗಳ ಕಾಲ ರಾಜ್ಯಾದ್ಯಂತ ನಡೆಯಲಿದ್ದು ಇದರಲ್ಲಿ 12ಲಕ್ಷ ಮಂದಿ ಭಾಗವಹಿಸಲಿದ್ದಾರೆ ಎಂದು ವಿಕಾಸ್ ಕಾಲೇಜಿನ ಸಲಹೆಗಾರ ಹಾಗೂ ಸಮರ್ಥ ಭಾರತ ಅಭಿಯಾನದ ಪ್ರಮುಖರಾದ ಡಾ. ಅನಂತ ಪ್ರಭು ತಿಳಿಸಿದರು.

ಈ ಬಗ್ಗೆ ಮಾಹಿತಿ ನೀಡಿದ ಅವರು, ಸ್ವಾಮಿ ವಿವೇಕಾನಂದ 154ನೇ ಜಯಂತಿ ಮತ್ತು ರಾಷ್ಟ್ರೀಯ ಯುವ ದಿನಾಚರಣೆ ಪ್ರಯುಕ್ತ ಜ.12ರಂದು ಅಭಿಯಾನಕ್ಕೆ ಚಾಲನೆ ದೊರೆಯಲಿದೆ.

Samartha Bharata Unveils Vivek Band 2017 Campaign from January 12 to 26

ಕಾಲೇಜು ವಿದ್ಯಾರ್ಥಿಗಳು, ಯುವ ಉದ್ಯೋಗಿಗಳ ಸಹಿತ ಯುವ ಸಮೂಹದಲ್ಲಿ ಸಾಮಾಜಿಕ ಸೇವಾ ಪ್ರಜ್ಞೆಯನ್ನು ಬೆಳೆಸುವುದರೊಂದಿಗೆ ತಮ್ಮ ವೈಯಕ್ತಿಕ ಜೀವನದಲ್ಲಿ ಉತ್ತಮ ಗುಣ ಸ್ವಭಾವಗಳನ್ನು ಮೈಗೂಡಿಸಿಕೊಳ್ಳಲು ಪ್ರೇರಿಸುವ ಮತ್ತು ಇತರರಿಗೂ ಪ್ರೇರಣೆಯಾಗುವ ದೃಷ್ಟಿಯಿಂದ ಈ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಸ್ವಾಮಿ ವಿವೇಕಾನಂದರ ಜೀವನ ಸಂದೇಶವಾದ 'ಉತ್ತಮನಾಗು - ಉಪಕಾರಿಯಾಗು' ಎನ್ನುವುದನ್ನು ಸಾರುವ 'ವಿವೇಕ್ ಬ್ಯಾಂಡ್ ನ್ನು ಯುವಕ - ಯುವತಿಯರು ತಮ್ಮ ಬಲಗೈಯಲ್ಲಿ ಕಟ್ಟಿಕೊಳ್ಳುವುದರೊಂದಿಗೆ ವಿವೇಕಾನಂದರ ಸಂದೇಶ ಪಾಲನೆ ಮಾಡುವ ಸಂಕಲ್ಪ ಮಾಡುವರು.

ಈಗಾಗಲೇ ಶಿಕ್ಷಣ ಸಂಸ್ಥೆಗಳು, ಇತರ ಸಂಘ ಸಂಸ್ಥೆಗಳು, ಪ್ರಖ್ಯಾತ ಗಣ್ಯರು ಅಭಿಯಾನಕ್ಕೆ ಧ್ವನಿಗೂಡಿಸಿದ್ದಾರೆ ಎಂದು ತಿಳಿಸಿದರು.

English summary
The Samartha Bharatha Trust, Mangaluru will be launching a Vivek Band -2017 campaign in Mangaluru on January 12th to spread the message of 'Be Good-Do Good' on the occasion of the 154 birth anniversary of Swami Vivekananda. Campaign will be held in all over the state from January 12th to 26.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X