ಬಾಡಿಗೆ ಕಾರು ಪಡೆದು ಕಳ್ಳತನ ಮಾಡುತ್ತಿದ್ದ 6 ಮಂದಿ ಸೆರೆ!
ಮಂಗಳೂರು, ಅ.22 : ಮನೆ ಮತ್ತು ಅಂಗಡಿಗಳಲ್ಲಿ ಕಳ್ಳತನ ಮಾಡುತ್ತಿದ್ದ ಆರು ಮಂದಿ ಕುಖ್ಯಾತ ಕಳ್ಳರನ್ನು ಸಂಪ್ಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಜಾನುವಾರು ಕಳ್ಳತನ ಮಾಡಿದ ಪ್ರಕರಣದಲ್ಲಿಯೂ ಭಾಗಿಯಾಗಿರುವುದು ವಿಚಾರಣೆ ವೇಳೆ ಬಹಿರಂಗವಾಗಿದೆ.
ಪುತ್ತೂರು ಉಪವಿಭಾಗ ವ್ಯಾಪ್ತಿಯ ಎಂಟು ಮನೆ ಕಳವು, ಮೂರು ಕಡೆಗಳಲ್ಲಿ ಅಡಿಕೆ ಕಳವು ಹಾಗೂ ಐದು ಕಡೆಗಳಲ್ಲಿ ಜಾನುವಾರು ಕಳವು ಮಾಡಿದ ಪ್ರಕರಣದಲ್ಲಿ ಈ ಎಲ್ಲಾ ಆರೂ ಆರೋಪಿಗಳು ಭಾಗಿಯಾಗಿದ್ದಾರೆ ಎಂದು ವಿಚಾರಣೆ ವೇಳೆ ಅವರು ಒಪ್ಪಿಕೊಂಡಿದ್ದಾರೆ.

ಪುತ್ತೂರು ನಿವಾಸಿ ಮಹಮ್ಮದ್ ಅಶ್ರಫ್, ಹಮ್ಮದ್ ಸಾದಿಕ್, ಫೈಸಲ್, ಮಹಮ್ಮದ್ ತೌಫಿಕ್, ಸಮೀರ್ ಮತ್ತು ರಫೀಕ್ ಬಂಧಿತ ಆರೋಪಿಗಳು. ಆಗಸ್ಟ್ 9ರಂದು ರಾತ್ರಿ ಸಂಪ್ಯ ಎಎಸ್ಐ ಅಬ್ದುಲ್ ಖಾದರ್ ನೇತೃತ್ವದ ಪೊಲೀಸರು ಗಸ್ತು ತಿರುಗುತ್ತಿದ್ದಾಗ ಕಲ್ಲಪ್ಪ ಬಳಿ ಆಟೋ ರಿಕ್ಷಾದಲ್ಲಿ ಕುಳಿತಿದ್ದ ಆರು ಮಂದಿ, ದರೋಡೆ ಮಾಡಲು ಹೊಂಚು ಹಾಕುತ್ತಿದ್ದರು.
ಆರೋಪಿಗಳು ಬಾಡಿಗೆಗೆ ಕಾರು ಪಡೆದು ಕಳವು ಕೃತ್ಯಗಳಲ್ಲಿ ತೊಡಗುತ್ತಿದ್ದರು ಎಂದು ತಿಳಿದುಬಂದಿದೆ. ಹಲವು ಖಾಸಗಿ ವಾಹನದ ಮಾಲೀಕರು ಕಾರನ್ನು ಬಾಡಿಗೆ ನೀಡುವ ಪರಿಪಾಠ ಬೆಳೆಸಿಕೊಂಡಿದ್ದು. ಅದನ್ನು ತಕ್ಷಣ ನಿಲ್ಲಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಬಂಧಿತ ಆರೋಪಿಗಳಿಂದ ಆರೋಪಿಗಳಿಂದ ಟಿವಿ, ಡಿಜಿಟಲ್ ಕ್ಯಾಮೆರಾ, ಲ್ಯಾಪ್ ಟಾಪ್, ಮೋಟರ್ ಸೈಕಲ್, ಇನ್ನೋವಾ ಕಾರು ಹಾಗೂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಆಸೀಮ್ ಎಂಬವರಿಗೆ ಸೇರಿದ ಪಾಸ್ ಪೋರ್ಟ್ ಅನ್ನು ಕಳುವು ಮಾಡಿರುವುದು ವಿಚಾರಣೆ ವೇಳೆ ಬಯಲಾಗಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications