ಬಿಜೆಪಿ ಪರ ಪ್ರಚಾರಕ್ಕೆ ಇಳಿಯಲಿದ್ದಾರೆ ಸಂಘ ಪರಿವಾರ ಕಾರ್ಯಕರ್ತರು
ಮಂಗಳೂರು, ಮಾರ್ಚ್ 13: ಮುಂಬರುವ ವಿಧಾನಸಭಾ ಚುನಾವಣೆ ಬಿಜೆಪಿಗೆ ಮಾಡು ಇಲ್ಲವೆ ಮಡಿ ಪರಿಸ್ಥಿತಿ ಸೃಷ್ಟಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮಣಿಸುವುದು ಅಷ್ಟು ಸುಲಭವಲ್ಲ ಎನ್ನುವುದು ಈಗಾಗಲೇ ಬಿಜೆಪಿ ನಾಯಕರುಗಳಿಗೆ ಸ್ಪಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಶತಾಯಗತಾಯ ಪ್ರಯತ್ನಿಸುತ್ತಿರುವ ಬಿಜೆಪಿಗೆ ಸಂಘ ಪರಿವಾರದ ಸಂಘಟನೆಗಳು ತಮ್ಮ ಶಕ್ತಿಯನ್ನು ಧಾರೆ ಎರೆಯಲು ನಿರ್ಧರಿಸಿವೆ.
ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಹಾಗೂ ಸಂಘ ಪರಿವಾರದ ಸಂಘಟನೆಗಳು ಹೆಣೆದಿದ್ದ ತಂತ್ರಗಾರಿಕೆಯನ್ನು ಈ ಬಾರಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲೂ ಪ್ರಯೋಗಿಸಲು ಮುಂದಾಗಿವೆ. ಮುಂಬರುವ ಚುನಾವಣೆಯ ಪ್ರಚಾರಕ್ಕೆ ಬಿಜೆಪಿ ಜೊತೆ ಸಂಘ ಪರಿವಾರದ 40 ಕ್ಕೂ ಹೆಚ್ಚು ಸಂಘಟನೆಗಳು ಕೈ ಜೋಡಿಸಲಿವೆ.
ರಾಜ್ಯದಲ್ಲಿ ಬಿಜೆಪಿ ಅಧಿಕಾರವಧಿಯಲ್ಲಿ ನಡೆದ ಮುಖಂಡರುಗಳ ಕಚ್ಚಾಟ, ಅವ್ಯವಹಾರಗಳ ಆರೋಪ ಸೇರದಂತೆ ಇನ್ನಿತರ ಗೊಂದಲಗಳಿಂದ ರೋಸಿ ಹೋಗಿದ್ದ ಸಂಘ ಪರಿವಾರದ ಸಂಘಟನೆಗಳು 2013 ರ ಚುನಾವಣೆ ಸಂಧರ್ಭದಲ್ಲಿ ತಟಸ್ಥ ನೀತಿ ಅನುಸರಿಸಿದ್ದವು. ಆದರೆ ಈ ಬಾರಿ ಪರಿಸ್ಥಿತಿ ಬದಲಾಗಿದೆ.

ಪ್ರಧಾನಿ ಮೋದಿ ಬೆನ್ನಿಗೆ ನಿಂತಿರುವ ಸಂಘ ಪರಿವಾರದ ಸಂಘಟನೆಗಳು ಉತ್ತರ ಭಾರತದಲ್ಲಿ ನಡೆದ ಬಹುತೇಕ ಎಲ್ಲಾ ಚುನಾವಣೆಗಳಲ್ಲಿ ಫೀಲ್ಡಿಗೆ ಇಳಿದಿದ್ದವು. ಅದೇ ಮಾದರಿಯನ್ನು ರಾಜ್ಯದಲ್ಲಿ ಅಳವಡಿಸಿಕೊಳ್ಳಲು ಸಂಘ ಪರಿವಾರ ಹಾಗೂ ಬಿಜೆಪಿ ಮುಂದಾಗಿದೆ. ಒಂದೆಡೆ ಸಂಘ ಪರಿವಾರ ಸಂಘಟನೆಗಳು ಜಮಾವಣೆಗೊಳ್ಳುತ್ತಿವೆ. ಇನ್ನೊಂದಡೆ ಆರೆಸ್ಸೆಸ್ ಕೂಡ ಈ ಬಾರಿ ಪೂರ್ಣ ಪ್ರಮಾಣದಲ್ಲಿ ಚುನಾವಣಾ ಪ್ರಚಾರಕ್ಕೆ ಇಳಿಯಲು ಸಿದ್ದವಾಗಿದೆ.
ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಂಘ ಪರಿವಾರದ 40 ಕ್ಕೂ ಹೆಚ್ಚು ಸಂಘಟನೆಗಳ ಕಾರ್ಯಕರ್ತರು ಬೃಹತ್ ಸಂಖ್ಯೆಯಲ್ಲಿ ಪ್ರಚಾರ ನಡೆಸಲಿದ್ದಾರೆ. ಇವುಗಳು ಮನೆ ಮನೆ ಭೇಟಿ ಸೇರಿದಂತೆ ಮನಃ ಪರಿವರ್ತನೆಯ ಕಾರ್ಯ ನಡೆಸಲಿವೆ.
-
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ?












Click it and Unblock the Notifications