ಮಂಗಳೂರಿನಲ್ಲಿ ನೀರೆಯರಿಗಾಗಿ ಸೀರೆಯಲ್ಲೇ ಓಡುವ ಸ್ಪರ್ಧೆ!
ಮಂಗಳೂರು, ಜುಲೈ 27: ಇತ್ತೀಚಿನ ದಿನಗಳಲ್ಲಿ ದೇಶದಲ್ಲೆಲ್ಲಾ ಫಿಟ್ ನೆಸ್ ನದ್ದೇ ಹವಾ. ಎಲ್ಲರೂ ಫಿಟ್ ನೆಸ್ ಕಾನ್ಶಿಯಸ್ ಆಗಿ ಬಿಟ್ಟಿದ್ದಾರೆ. ಪ್ರಧಾನಿ ಮೋದಿ ಆದಿಯಾಗಿ ಸಚಿವರು, ಕ್ರೀಡಾಪಟುಗಳು, ಚಿತ್ರ ತಾರೆಯರು ಫಿಟ್ ನೆಸ್ ಚಾಲೆಂಜ್ ಹಾಕುತ್ತಾ ಸಾಮಾಜಿಕ ಜಾಲತಾಣಗಳಲ್ಲಿ ಮಿಂಚುತ್ತಿದ್ದಾರೆ.
ಆದರೆ ಸಾಮಾನ್ಯವಾಗಿ ಸೀರೆಯುಟ್ಟು ಮನೆಗೆಲಸದಲ್ಲೇ ತಲ್ಲೀನರಾಗಿರುವ ಮಹಿಳೆಯರಲ್ಲಿ ಫಿಟ್ ನೆಸ್ ಬಗ್ಗೆ ಜಾಗೃತಿ ಮೂಡುವುದಾದರೂ ಯಾವಾಗ? ಈ ಹಿನ್ನೆಲೆಯಲ್ಲಿ ಆಗಸ್ಟ್ 12 ರಂದು ಮಂಗಳೂರಿನಲ್ಲಿ ಸೀರೆಯುಟ್ಟ ನಾರಿಯರಿಗಾಗಿ ಓಟ - ನಡಿಗೆ ಹಮ್ಮಿಕೊಳ್ಳಲಾಗಿದೆ. ಮಂಗಳೂರು ಮಹಿಳಾ ರನ್ ತಂಡ ನಗರದಲ್ಲಿ ಮೊದಲ ಬಾರಿಗೆ ಈ ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದೆ. ಸೀರೆಯ ನಾರಿಯರಿಗೆ ಜಾಗಿಂಗ್ , ವಾಕಿಂಗ್ ಸ್ಥೈರ್ಯ ತುಂಬಲು ಓಟ ಹಮ್ಮಿಕೊಳ್ಳಲಾಗಿದೆ.
ಈಗ ಮಹಿಳೆಯರು ಕೂಡ ಪುರುಷರ ರೀತಿ ದೈಹಿಕ ಫಿಟ್ ನೆಸ್ ಕಾಪಾಡಿಕೊಳ್ಳಲು ಜಾಂಗಿಂಗ್, ವಾಕಿಂಗ್ ಮಾಡುತ್ತಿದ್ದಾರೆ. ಆದರೆ ಜಾಂಗಿಂಗ್ ಮತ್ತು ವಾಂಕಿಂಗ್ ತೆರಳುವ ಮಹಿಳೆಯರು ಆಧುನಿಕ ಟ್ರ್ಯಾಕ್ ಸೂಟ್, ಟಿ ಶರ್ಟ್ ಧರಿಸಿ ತೆರಳುತ್ತಾರೆ.

ಆದರೆ ಸೀರೆಯನ್ನು ಧರಿಸುವ ಮಹಿಳೆಯರು ಮಾತ್ರ ಇದೆಲ್ಲದರಿಂದ ವಿಮಖರಾಗಿದ್ದು, ಆಧುನಿಕ ದಿರಿಸು ಇಲ್ಲದಿದ್ದರೆ ಜಾಗಿಂಗ್ ತೆರಳಿದರೆ ಯಾರಾದರೂ ಕೀಳಾಗಿ ಭಾವಿಸಬಹುದು ಎನ್ನುವ ಮುಜುಗರವೂ ಮಹಿಳೆಯರಲ್ಲಿ ಇರುತ್ತದೆ. ಹೀಗಾಗಿ ಆನೇಕ ಮಹಿಳೆಯರು ಇಂತಹ ಓಟ ಅಥವಾ ನಡಿಗೆಯತ್ತ ಆಸಕ್ತಿ ತೋರುವುದಿಲ್ಲ.
ಇಂತಹ ಮಹಿಳೆಯರಿಗಾಗಿಯೇ ಮಂಗಳೂರು ಮಹಿಳಾ ರನ್ ತಂಡ ಒಂದು ವಿಭಿನ್ನ ಪ್ರಯತ್ನಕ್ಕೆ ಕೈ ಹಾಕಿದ್ದು, ಮಂಗಳೂರಿನಲ್ಲಿ ಆಗಸ್ಟ್ 12 ರಂದು ಸೀರೆ ತೊಟ್ಟ ಮಹಿಳೆಯರ ಓಟ ಅಥವಾ ನಡಿಗೆ ಆಯೋಜಿಸಲಾಗಿದೆ.
ನಗರದ ಮಹತ್ಮಾಗಾಂಧಿ ಉದ್ಯಾನವನದ ಸಮೀಪದ ಮಣ್ಣಗುಡ್ಡೆ ರಸ್ತೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಮಂಗಳೂರು ಮಹಿಳೆಯರ ಸೀರೆ ನಡೆ ಮತ್ತು ಸೀರೆ ಓಟಗಳಿಗೆ 2 ಕಿಲೋ ಮೀಟರ್ ದೂರ ನಿಗದಿ ಮಾಡಲಾಗಿದೆ. ಸೀರೆ ನಡೆ ಮತ್ತು
ಓಟದಲ್ಲಿ ಪಾಲ್ಗೊಂಡು ಉತ್ತಮ ಪ್ರತಿಭೆ ತೋರಿಸಿದವರಿಗೆ ಆಕರ್ಷಕ ಬಹುಮಾನ ನೀಡಲು ತೀರ್ಮಾನಿಸಲಾಗಿದೆ. ಪಾಲ್ಗೊಂಡ ಎಲ್ಲಾ ಸ್ಪರ್ಧಾಳುಗಳಿಗೆ ಪದಕ ಹಾಗು ಪ್ರಮಾಣ ಪತ್ರ ನೀಡಲು ಆಯೋಜಕರು ತೀರ್ಮಾನಿಸಿದ್ದಾರೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications