ವಿಶೇಷ ಲೇಖನ; ಕುಗ್ರಾಮದ ಶಾಲೆಯಲ್ಲಿ ಪ್ರತಿದಿನ ಮೊಳಗುತ್ತದೆ ರೇಡಿಯೋ
ಮಂಗಳೂರು, ಜನವರಿ 27; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಐದಕ್ಕಿಂತ ಹೆಚ್ಚು ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡರೆ ಆ ಶಾಲೆಗಳನ್ನು ವಾರಗಳ ಕಾಲ ಮುಚ್ಚಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಆದೇಶ ನೀಡಿದೆ.
ಮಕ್ಕಳಲ್ಲಿ ಕೊರೊನಾದ ಬಗ್ಗೆ ಭಯ ಆತಂಕ ಇರುವಾಗಲೇ, ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಗ್ರಾಮದ ಶಾಲೆಯೊಂದು ಮಾತ್ರ ಕೊರೊನಾ ಭಯದಲ್ಲಿದ್ದ ವಿದ್ಯಾರ್ಥಿಗಳಿಗೆ ನವಚೈತನ್ಯ ತುಂಬುತ್ತಿದೆ. ಮಕ್ಕಳಿಗೆ ವಿವಿಧ ಚಟುವಟಿಕೆಗಳನ್ನು ನೀಡಿ, ಮಕ್ಕಳ ಮನಸ್ಸನ್ನು ಸದಾ ಕ್ರೀಯಾಶೀಲವನ್ನಾಗಿಸಿದೆ.
ಗ್ರಾಮೀಣ ಭಾಗದ ಶಾಲೆಯಲ್ಲಿ ಪ್ರತಿದಿನ ರೇಡಿಯೋ ಮೊಳಗುತ್ತಿದ್ದು,ಶಾಲೆಯ ಚಿಕ್ಕ ಮಕ್ಕಳೇ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ. ಇಂತಹ ವಿನೂತನ ಪ್ರಯೋಗವನ್ನು ಮಾಡಿ ಯಶಸ್ವಿಯಾಗಿರುವುದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆದ್ರಬೆಟ್ಟುವಿನ ಮಾರಿಯಾಂಬಿಕಾ ಆಂಗ್ಲ ಮಾಧ್ಯಮ ಶಾಲೆ.
ಪ್ರಾಥಮಿಕ ಶಾಲೆಯಿಂದ ಫ್ರೌಢ ತರಗತಿಯವರೆಗೆ ಇರುವ ಈ ಶಾಲೆಯ ವಿನೂತನ ಪರಿಕಲ್ಪನೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಲಾಕ್ ಡೌನ್, ಆ ಬಳಿಕ ಆನ್ ಲೈನ್ ಕ್ಲಾಸ್ ಅಂತಾ ಮನೆಯೊಳಗೆ ಬಂಧಿಯಾಗಿದ್ದ ಮಕ್ಕಳ ಜಿಡ್ಡು ಹೋಗಿದ್ದ ಮನಸ್ಸನ್ನು ಕ್ರಿಯಾಶೀಲವನ್ನಾಗಿ ಈ ಕಾರ್ಯಕ್ರಮ ಮಾಡಿದೆ.

ಮುಖ್ಯೋಪಾಧ್ಯಾಯರ ಪರಿಕಲ್ಪನೆ
ಶಾಲೆಯ ಮುಖ್ಯೋಪಾಧ್ಯಾಯಿನಿ ಲೀನಾ ಅವರ ಪರಿಕಲ್ಪನೆಯಂತೇ ಮಾರಿಯಾಂಬಿಕಾ ಶಾಲೆಯಲ್ಲಿ ಪ್ರತಿದಿನ 15 ನಿಮಿಷ ರೇಡಿಯೋ ಮೊಳಗುತ್ತದೆ. 15 ನಿಮಿಷಗಳ ಕಾರ್ಯಕ್ರಮದಲ್ಲಿ ನಿರೂಪಣೆ, ಹಾಡು, ಭಾಷಣ, ಸಮೂಹ ಗಾಯನ, ಸುದ್ದಿ ವಾಚನ ಸೇರಿದಂತೆ ವಿವಿಧ ಭಾಷೆಯಲ್ಲಿ ಮಕ್ಕಳು ಕಾರ್ಯಕ್ರಮ ಮಾಡಿಕೊಡುತ್ತಾರೆ. ಮಕ್ಕಳಲ್ಲಿ ಸಭಾಕಂಪನವನ್ನು ಹೋಗಲಾಡಿಸಿದ ಶಾಲೆಯ ವಿನೂತನ ಕಾರ್ಯಕ್ರಮ ಮಕ್ಕಳ ಹೆತ್ತವರಿಗೂ ಖುಷಿ ತಂದಿದ್ದು, ಶಾಲೆಯ ಈ ಕಾರ್ಯಕ್ರಮ ರಾಜ್ಯಕ್ಕೆ ಮಾದರಿಯಾಗಿದೆ.

ಮೂರು ಭಾಷೆಯಲ್ಲಿ ಕಾರ್ಯಕ್ರಮ
ಪ್ರತಿದಿನ ಮಧ್ಯಾಹ್ನ 1 ಗಂಟೆಗೆ ಈ ರೇಡಿಯೋ ಕಾರ್ಯಕ್ರಮ ಆರಂಭವಾಗುತ್ತದೆ. 15 ನಿಮಿಷಗಳ ಕಾಲ ಮಕ್ಕಳಿಗೆ ವಿವಿಧ ಚಟುವಟಿಕೆ ನೀಡಲಾಗುತ್ತದೆ. ನಿರೂಪಣೆ, ಭಾಷಣ, ಗಾಯನ, ಸಮೂಹ ಗಾಯನಕ್ಕೆ ವೇದಿಕೆ ಇದಾಗಿದ್ದು, ಎಳೆಯ ಮಕ್ಕಳು ಹಿಂದಿ, ಇಂಗ್ಲಿಷ್, ಕನ್ನಡ ಭಾಷೆಯಲ್ಲಿ ಕಾರ್ಯಕ್ರಮ ಮಾಡಿಕೊಟ್ಟು, ಪ್ರತಿಭೆಯ ಅನಾವರಣ ಮಾಡುತ್ತಾರೆ. 1 ರಿಂದ 10 ತರಗತಿ ತನಕ ಇರುವ ಎಲ್ಲಾ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಯಾವುದಾದರೂ ಒಂದು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿದೆ.
ಈ ಬಗ್ಗೆ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯಿನಿ ಲೀನಾ, "ಈ ಕಾರ್ಯಕ್ರಮ ಕಳೆದ ನಾಲ್ಕು ವರ್ಷಗಳಿಂದ ನಡೆಯುತ್ತಿದೆ. ಈ ಶಾಲೆಗೆ ಅತೀ ಹೆಚ್ಚು ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಆಗಮಿಸುತ್ತಾರೆ. ಈ ಕಾರ್ಯಕ್ರಮದಿಂದ ಮಕ್ಕಳಲ್ಲಿದ್ದ ಸಭಾ ಕಂಪನ ದೂರವಾಗಿದೆ" ಎಂದು ಹೇಳುತ್ತಾರೆ.

ಮಕ್ಕಳನ್ನು ಚಟುವಟಿಕೆಯಲ್ಲಿ ತೊಡಗಿಸಿದೆ
"ಈ 15 ನಿಮಿಷದ ಕಾರ್ಯಕ್ರಮ ದಲ್ಲಿ ಮಕ್ಕಳು ಜೋಕ್ಸ್, ಹಾಡು, ಮಿಮಿಕ್ರಿ, ಪ್ರಚಲಿತ ವಿದ್ಯಮಾನಗಳ ಬಗ್ಗೆ ಭಾಷಣ, ಕ್ವಿಜ್ ಕಾರ್ಯಕ್ರಮ, ಸ್ಕಿಟ್ ಮಾಡಿಕೊಡುತ್ತಾರೆ. ಈ ಕಾರ್ಯಕ್ರಮದಿಂದ ಮಕ್ಕಳಲ್ಲಿ ಸಾತ್ವಿಕ ಗುಣ ವೃದ್ಧಿಯಾಗುತ್ತದೆ. ಈ ಕಾರ್ಯಕ್ರಮ ಮಕ್ಕಳು ನಡೆಸುವ ವೇಳೆ, ಇತರ ಮಕ್ಕಳು ತರಗತಿಯಲ್ಲಿ ಕೂತು ಕಾರ್ಯಕ್ರಮವನ್ನು ಆಲಿಸುತ್ತಾರೆ. ವಿದ್ಯಾರ್ಥಿಗಳು ಲಾಕ್ ಡೌನ್ ಸಂದರ್ಭದಲ್ಲಿ ಬಹಳ ಸಂಕುಚಿತರಾಗಿದ್ದರು. ಆದರೆ ಈ ಕಾರ್ಯಕ್ರಮ ಮಕ್ಕಳನ್ನು ಮತ್ತೆ ಚಟುವಟಿಕೆಯಿಂದ ಇರುವಂತೆ ಮಾಡಿದೆ ಎನ್ನುತ್ತಾರೆ" ಲೀನಾ.

500 ವಿದ್ಯಾರ್ಥಿಗಳಿದ್ದಾರೆ
ಬೆಳ್ತಂಗಡಿ ತಾಲೂಕಿನಿಂದ ಸುಮಾರು16 ಕಿ. ಮೀ. ದೂರದಲ್ಲಿ ಈ ಶಾಲೆಯಿದ್ದು, ಹತ್ತನೇ ತರಗತಿವರೆಗೆ ಸುಮಾರು 500 ಮಂದಿ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಈ ಕಾರ್ಯಕ್ರಮದ ಬಗ್ಗೆ ಮಾತನಾಡಿದ ವಿದ್ಯಾರ್ಥಿನಿ ಅನ್ವಿತಾ, "ಈ ಶಾಲೆ ನಮ್ಮಲ್ಲಿ ತುಂಬಾ ಬದಲಾವಣೆ ತಂದಿದೆ. ವಿದ್ಯಾರ್ಥಿಗಳಲ್ಲಿದ್ದ ಸಭಾ ಕಂಪನ ದೂರವಾಗಿದೆ. ಭಾಷೆಗಳ ಮೇಲೂ ಹಿಡಿತವಾಗಿದೆ. ಏನೇ ಕಾರ್ಯಕ್ರಮ ಹೇಳಿದರೂ ಧೈರ್ಯದಿಂದ ಮುಂದೆ ಬಂದು ನಿಭಾಯಿಸುವ ಸಾಮರ್ಥ್ಯ ಬಂದಿದೆ" ಎಂದು ಹೇಳಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್












Click it and Unblock the Notifications