ಜನೋಪಯೋಗಿ ಪ್ರಾಡೆಕ್ಟ್ , ಎಸ್ಡಿಎಂ ವಿದ್ಯಾರ್ಥಿಗಳ ಸಾಧನೆ
ವಿದ್ಯಾರ್ಥಿಗಳು ಸಮಾಜಮುಖಿಯಾಗಬೇಕು. ಅವರ ಯೋಜನೆ-ಯೋಚನೆಗಳು ಜನಸಾಮಾನ್ಯರ ಬದುಕಿನ ಮಟ್ಟವನ್ನು ಉನ್ನತೀಕರಿಸಬೇಕು, ತಂತ್ರಜ್ಞಾನದ ಪ್ರಯೋಜನೆ ಎಲ್ಲರಿಗೂ ದೊರಕುವಂತೆ ಆಗಬೇಕು ಎಂಬ ಧ್ಯೇಯದೊಂದಿಗೆ ಕಾರ್ಯ ನಿರ್ವಹಿಸುತ್ತಿದೆ ಎಸ್ಡಿಎಂ ಪಾಲಿಟೆಕ್ನಿಕ್
ಉಜಿರೆ, ಏಪ್ರಿಲ್ 23: ವಿದ್ಯಾರ್ಥಿಗಳು ಸಮಾಜಮುಖಿಯಾಗಬೇಕು. ಅವರ ಯೋಜನೆ-ಯೋಚನೆಗಳು ಜನಸಾಮಾನ್ಯರ ಬದುಕಿನ ಮಟ್ಟವನ್ನು ಉನ್ನತೀಕರಿಸಬೇಕು, ತಂತ್ರಜ್ಞಾನದ ಪ್ರಯೋಜನೆ ಎಲ್ಲರಿಗೂ ದೊರಕುವಂತೆ ಆಗಬೇಕು ಎಂಬ ಧ್ಯೇಯದೊಂದಿಗೆ ಕಾರ್ಯ ನಿರ್ವಹಿಸುತ್ತಿದೆ ಉಜಿರೆ ಎಸ್.ಡಿ.ಎಂ ಪಾಲಿಟೆಕ್ನಿಕ್ ಕಾಲೇಜು. ಈ ಕಾಲೇಜಿನ ವಿದ್ಯಾರ್ಥಿಗಳು ತಯಾರಿಸಿದ ಜನೋಪಯೋಗಿ ಉತ್ಪನ್ನಗಳ ಪರಿಚಯ ಇಲ್ಲಿದೆ.
ವಿವಿಧ ತಾಂತ್ರಿಕ ಮತ್ತು ಕೌಶಲ್ಯಾಧಾರಿತ ಕೋರ್ಸ್ಗಳನ್ನು ಹೊಂದಿರುವ ಈ ಸಂಸ್ಥೆ ಆರಂಭದಿಂದಲೂ ಜನಮುಖಿಯಾಗಿಯೇ ಕಾರ್ಯೋನ್ಮುಖವಾಗಿದೆ. ಈಗ ಈ ಸಂಸ್ಥೆಯ ವಿದ್ಯಾರ್ಥಿಗಳು ಸಂಸ್ಥೆಯ ಮೂಲಧ್ಯೇಯವನ್ನು ಸಾಕಾರಗೊಳಿಸುವಂತಹ ಆವಿಷ್ಕಾರಗಳನ್ನು ಮಾಡಿ ಜನರ ಬಳಕೆಗೆ ಲಭ್ಯವಾಗಿಸುವ ನಿಟ್ಟಿನಲ್ಲಿ ಮುಂದಡಿಯಿಟ್ಟಿದ್ದಾರೆ.
2016-17 ರ ಸಾಲಿನಲ್ಲಿ ಎಸ್.ಡಿ.ಎಂ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳು ಒಂದಷ್ಟು ಜನೋಪಯೋಗಿ ಯಂತ್ರಗಳನ್ನು ಆವಿಷ್ಕರಿಸಿದ್ದಾರೆ. ತಮ್ಮ ತಾಂತ್ರಿಕ ಕೌಶಲ್ಯದ ಮೂಲಕ ದಕ್ಷಿಣ ಕನ್ನಡ ಭಾಗದ ಅಡಿಕೆ, ತೆಂಗು ಹಾಗೂ ರಬ್ಬರ್ ಕೃಷಿಗೆ ಪೂರಕವಾದ ಯಂತ್ರಗಳನ್ನು ಸಿದ್ಧಪಡಿಸಿದ್ದು ಇವು ಕೃಷಿ ಕಾರ್ಮಿಕರ ಕೊರತೆಯಿಂದ ಬಳಲುತ್ತಿರುವ ಈ ಭಾಗದ ಕೃಷಿಕರಿಗೆ ವರದಾನವಾಗುವ ಭರವಸೆ ಮೂಡಿಸಿವೆ.

ಅಡಿಕೆ ಗೊನೆಯನ್ನು ಕತ್ತರಿಸಿ ಕೊಯ್ಲು
ಡ್ರೋನ್ ಮೂಲಕ ಅಡಿಕೆ ಗೊನೆಯನ್ನು ಕತ್ತರಿಸಿ ಕೊಯ್ಲು ಮಾಡುವ ಹಾಗೂ ಮರಗಳಿಗೆ ಮದ್ದು ಸಿಂಪಡಿಸುವ ಯಂತ್ರ, ಅಡಿಕೆ ಗೊನೆಯಿಂದ ಕಾಯಿಗಳನ್ನು ಬೇರ್ಪಡಿಸುವ ಯಂತ್ರ, ಅಟೋಮ್ಯಾಟಿಕ್ ತೆಂಗಿನಕಾಯಿ ಸಿಪ್ಪೆ ಸುಲಿಯುವ ಹಾಗೂ ಕಾಯಿ ಒಡೆಯುವ ಯಂತ್ರ, ಎಳನೀರು ಕೊಚ್ಚುವ ಯಂತ್ರ, ತೋಟದ ಬದಿಗೆ ನೆಟ್ಟ ಗಿಡಗಳನ್ನು ಸುಂದರವಾಗಿ ಕತ್ತರಿಸುವ ಹೆಡ್ಜ್ ಕಟ್ಟರ್, ರಬ್ಬರ್ ಲ್ಯಾಟೆಕ್ಸ್ ಮಿಶ್ರಣ ಯಂತ್ರ ಹೀಗೆ ಕೃಷಿ ಉಪಯೋಗಿ ಯಂತ್ರಗಳನ್ನು ತಯಾರಿಸಿ ಕಾರ್ಮಿಕರ ಕೊರತೆ ನೀಗಿಸುವ ಪ್ರಯತ್ನ ಮಾಡಿದ್ದಾರೆ.

ಜನಮುಖಿಯಾಗಿಯೇ ಕಾರ್ಯೋನ್ಮುಖವಾಗಿದೆ
ಇಲ್ಲಿನ ವಿದ್ಯಾರ್ಥಿಗಳು.ಇದರ ಜೊತೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯರ ಅಗತ್ಯತೆ ಹಾಗೂ ತಾಂತ್ರಿಕವಾಗಿ ಅವುಗಳನ್ನು ಸರಿಗಟ್ಟುವ ಸಾಧ್ಯತೆಗಳನ್ನು ಅಧ್ಯಯನ ಮಾಡಿ ಮತ್ತೊಂದಿಷ್ಟು ಯಂತ್ರಗಳನ್ನು ತಯಾರಿಸಿ ಸೈ ಎನಿಸಿಕೊಂಡಿದ್ದಾರೆ. ಇಲ್ಲಿನ ದೇವಳದ ಅನ್ನ ಛತ್ರಗಳಲ್ಲಿ, ಸಭೆ-ಸಮಾರಂಭಗಳಲ್ಲಿ ಅನ್ನಸಂತರ್ಪಣೆ ಸಮಯದಲ್ಲಿ ಬಾಳೆ ಎಲೆಯನ್ನು ಬಳಸುವುದು ಸಾಮಾನ್ಯ. ಆದರೆ ಈ ಎಲೆಗಳನ್ನು ತೆಗೆದು ಮತ್ತೊಂದಿಷ್ಟು ಜನರಿಗೆ ಊಟಕ್ಕೆ ಅಣಿಮಾಡುವ ಕೆಲಸ ಬಹಳ ಶ್ರಮವನ್ನು ಬೇಡುತ್ತದೆ. ಅದರಲ್ಲೂ ಜನಜಂಗುಳಿ ಜಾಸ್ತಿ ಇದ್ದ ವೇಳೆ ಸ್ವಚ್ಛತೆಗೆ ಸಾಕಷ್ಟು ಶ್ರಮ ಪಡಬೇಕಾಗುತ್ತದೆ.

ಬಾಳೆಎಲೆ ಎತ್ತುವ ಯಂತ್ರ
ಇದನ್ನು ನಿವಾರಿಸುವ ನಿಟ್ಟಿನಲ್ಲಿ ಇಲ್ಲಿನ ವಿದ್ಯಾರ್ಥಿಗಳು ಬಾಳೆಎಲೆ ಎತ್ತುವ ಹಾಗೂ ಆ ಆವರಣವನ್ನು ಶುಚಿಗೊಳಿಸುವ ಯಂತ್ರವನ್ನು ನಿರ್ಮಿಸಿದ್ದಾರೆ. ಈ ಯಂತ್ರ ಸಾವಿರಾರು ಜನ ಉಂಡರೂ ಕ್ಷಣಮಾತ್ರದಲ್ಲಿ ಎಲೆ ಎತ್ತಿ, ಊಟದ ಪಂಕ್ತಿಯನ್ನು ಶುಚಿಗೊಳಿಸುವ ಸಾಮರ್ಥ್ಯ ಹೊಂದಿದೆ.
ಇದರೊಂದಿಗೆ ಗಾರೆ ಕೆಲಸಕ್ಕೆ ಸಹಾಯವಾಗುವಂತೆ ಗಾರೆ ಮಾಡುವ ಯಂತ್ರವನ್ನೂ ಆವಿಷ್ಕರಿಸಿದ್ದಾರೆ. ಜೊತೆಗೆ ರಿಕ್ತ ಪವರ್ ವ್ಯಾಕ್ಯುಮ್ ಕ್ಲೀನರ್ ತಯಾರಿಸಿ ರಸ್ತೆ ಬದಿಯಲ್ಲಿ ಶೇಖರಗೊಳ್ಳುವ ಕಸವನ್ನೂ ಸ್ವಚ್ಛಗೊಳಿಸಿ ಸ್ವಚ್ಛ ಭಾರತ್ ಗೆ ಸಾಥ್ ನೀಡಿದ್ದಾರೆ.

ಮೊದಲಾದ ಆವಿಷ್ಕಾರ
ಮೊಬೈಲ್ ಮೂಲಕ ನಿಯಂತ್ರಿಸಲು ಸಾಧ್ಯವಾಗುವ ಜಲ ಶುದ್ಧಿಕರಣ ಘಟಕದ ಮಾದರಿಯನ್ನೂ ತಯಾರಿಸಿದ್ದಾರೆ. ಮನೆ ಬಾಗಿಲಿಗೆ ಹೊಟೇಲ್ ನಿಂದ ಪಾರ್ಸೆಲ್ ತಲುಪಿಸುವ ಆನ್ಲೈನ್ ರೆಸ್ಟ್ರೋ ವ್ಯವಸ್ಥೆ, ದೊಡ್ಡ ಪ್ರಮಾಣದಲ್ಲಿ ಚಪಾತಿ ತಯಾರಿಸುವ ಯಂತ್ರ ಮೊದಲಾದ ಆವಿಷ್ಕಾರಗಳೂ ಇಲ್ಲಿ ನಡೆದಿವೆ.
ವಿದ್ಯಾರ್ಥಿಗಳ ತಾಂತ್ರಿಕ ಕೌಶಲ್ಯ ಅಭಿವೃದ್ಧಿ ಎಂಬ ಸಂಸ್ಥೆಯ ಧ್ಯೇಯೋದ್ಧೇಶದೊಂದಿಗೆ ತಳುಕು ಹಾಕಿಕೊಂಡಿರುವ ಈ ಯಶಸ್ಸು ಹೆಮ್ಮೆಯ ವಿಚಾರವಾಗಿದೆ. ಈ ತಾಂತ್ರಿಕ ಆವಿಷ್ಕಾರಗಳು ಸಮಾಜಮುಖಿಯಾಗಿದ್ದು ಜನರ ಅಗತ್ಯಗಳನ್ನು ಪೂರೈಸುವಂತೆ ನಿರ್ಮಾಣವಾಗಿವೆ.

ರಾಜ್ಯಮಟ್ಟದ ಪ್ರದರ್ಶನಗಳಲ್ಲಿ ಬಹುಮಾನ
ಹಲವು ರಾಜ್ಯಮಟ್ಟದ ಪ್ರದರ್ಶನಗಳಲ್ಲಿ ಪಾಲ್ಗೊಂಡು ಬಹುಮಾನಗಳನ್ನೂ ಪಡೆದುಕೊಂಡಿವೆ.ಈ ಎಲ್ಲಾ ಯಂತ್ರಗಳನ್ನು ಕೇವಲ ಪ್ರದರ್ಶನಕ್ಕಾಗಿ ಮಾತ್ರ ಸೀಮಿತಗೊಳಿಸದೆ ವಿದ್ಯಾರ್ಥಿಗಳ ಕೌಶಲ್ಯಾಭಿವೃದ್ಧಿ, ವ್ಯಕ್ತಿತ್ವ ವಿಕಸನ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ. ಬಿ. ಯಶೋವರ್ಮ ಅವರು ಸಹಕಾರ ಒದಗಿಸಿದ್ದಾರೆ. ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಈ ಆವಿಷ್ಕಾರಗಳು ಜನೋಪಯೋಗಿಯಾಗುವ ನಿಟ್ಟಿನಲ್ಲಿ ಶ್ರಮಿಸಿದ್ದಾರೆ.
ಬಾಳೆಎಲೆ ಎತ್ತುವ ಯಂತ್ರ ವಿಡಿಯೋ
ಬಾಳೆಎಲೆ ಎತ್ತುವ ಹಾಗೂ ಆ ಆವರಣವನ್ನು ಶುಚಿಗೊಳಿಸುವ ಯಂತ್ರವನ್ನು ನಿರ್ಮಿಸಿದ್ದಾರೆ. ಈ ಯಂತ್ರ ಸಾವಿರಾರು ಜನ ಉಂಡರೂ ಕ್ಷಣಮಾತ್ರದಲ್ಲಿ ಎಲೆ ಎತ್ತಿ, ಊಟದ ಪಂಕ್ತಿಯನ್ನು ಶುಚಿಗೊಳಿಸುವ ಸಾಮರ್ಥ್ಯ ಹೊಂದಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications