ಮಂಗಳೂರು: ಅಶ್ರಫ್ ಕೊಲೆ ಪ್ರಕರಣದ ತನಿಖೆ ಚುರುಕು
ಮಂಗಳೂರು, ಜೂನ್ 22: ಅಶ್ರಫ್ ಕೊಲೆ ಪ್ರಕರಣದ ದುಷ್ಕರ್ಮಿಗಳ ಶೋಧಕ್ಕೆ 4 ತಂಡಗಳನ್ನು ರಚಿಸಲಾಗಿದೆ. ಕೊಲೆ ಕೃತ್ಯದಲ್ಲಿ ಭಾಗಿಯಾದವರನ್ನು ಪತ್ತೆ ಹಚ್ಚಿ ಶೀಘ್ರವಾಗಿ ಬಂಧಿಸಲಾಗುವುದು ಎಂದು ಎಡಿಜಿಪಿ ಅಲೋಕ್ ಮೋಹನ್ ತಿಳಿಸಿದ್ದಾರೆ. ಮುಹಮ್ಮದ್ ಅಶ್ರಫ್ ಕಲಾಯಿ ಅವರ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದರು .
ಬಂಟ್ವಾಳ ತಾಲೂಕಿನಲ್ಲಿ ನಿರಂತರವಾಗಿ ಅಹಿತಕರ ಘಟನೆಗಳು ನಡೆಯುತ್ತಿದ್ದು, ಇದರ ಬಗ್ಗೆ ನಿಗಾ ವಹಿಸುವುದಾಗಿ ಅವರು ಈ ಸಂದರ್ಭ ಹೇಳಿದರು.

ಕಲ್ಲಡ್ಕ, ಮಣಿ, ಬಿ ಸಿ ರೋಡ್, ಕೈಕಂಬ, ಪರಂಗಿಪೇಟೆ ಮತ್ತು ಬಂಟ್ವಾಳ ಪರಿಸರದಲ್ಲಿ ಪರಿಸ್ಥಿತಿ ಹತೋಟಿಗೆ ತರುವ ನಿಟ್ಟಿನಲ್ಲಿ ವ್ಯಾಪಕ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ.
ಜೂ. 27ರ ವರೆಗೆ ಜಿಲ್ಲೆಯಲ್ಲಿ ಹಾಗೂ ಮಂಗಳೂರು ನಗರದಲ್ಲಿ 144 ಸೆಕ್ಷನ್ ಜಾರಿಯಲ್ಲಿರುವುದಾಗಿ ಅವರು ಈ ಸಂದರ್ಭ ಮಾಹಿತಿ ನೀಡಿದರು.
ಇನ್ನು ದೇವಸ್ಥಾನ-ಮಂದಿರಗಳ ಮೇಲೆ ದಾಳಿ, ಮತೀಯ ಉಗ್ರವಾದ, ಲವ್ ಜಿಹಾದ್, ಅಕ್ರಮ ಗೋಸಾಗಾಣಿಕೆ ವಿರೋಧಿಸಿ ಹಿಂದೂ ಹಿತರಕ್ಷಣಾ ಸಮಿತಿಯ ವತಿಯಿಂದ ಜೂ.24ರಂದು ಬೆಳಗ್ಗೆ 10ಕ್ಕೆ ಬಿ.ಸಿ.ರೋಡಿನಲ್ಲಿ ಇರುವ ಪ್ರತಿಭಟನೆಗೆ ಪೊಲೀಸ್ ಇಲಾಖೆಯಿಂದ ಯಾವುದೇ ಅನುಮತಿ ಇಲ್ಲವೆಂದು ಸ್ಪಷ್ಟನೆ ನೀಡಿದ್ದಾರೆ.
ಬಿ ಸಿ ರೋಡ್ ಹಾಗೂ ಕಲ್ಲಡ್ಕ ಸಹಜ ಸ್ಥಿತಿಗೆ: ಬುಧವಾರ ನಡೆದ ಎಸ್ ಡಿಪಿಐ ಕಾರ್ಯಕರ್ತ ಕಲಾಯಿ ಅಶ್ರಫ್ ಹತ್ಯೆಯ ನಂತರ ಉದ್ವಿಗ್ನಗೊಂಡಿದ್ದ ಬಂಟ್ವಾಳ ತಾಲೂಕಿನ ಕಲ್ಲಡ್ಕ, ಬಿ.ಸಿ. ರೋಡ್ ಸೇರಿದಂತೆ ಇತರ ಪ್ರದೇಶಗಳು ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ.
ರಸ್ತೆಗಳಲ್ಲಿ ವಾಹನ ಸಂಚಾರವಿದ್ದು, ಅಂಗಡಿಗಳು ಎಂದಿನಂತೆ ವಹಿವಾಟು ನಡೆಸುತ್ತಿದೆ. ಕೋಮು ಸೂಕ್ಷ್ಮ ಪ್ರದೇಶವಾದ ಕಲ್ಲಡ್ಕ ಕೂಡ ಸಹಜಸ್ಥಿತಿಗೆ ಮರಳುತ್ತಿದ್ದು, ಜನರ ಓಡಾಟ, ವ್ಯಾಪಾರಗಳು ಎಂದಿನಂತೆ ನಡೆಯುತ್ತಿವೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications