ದ. ಕನ್ನಡದಲ್ಲಿ ಕಾಂಗ್ರೆಸ್ ಗೆಲುವಿಗೆ ಅಭ್ಯರ್ಥಿಗಳನ್ನು ಹಿಂಪಡೆಯಲಿದೆ ಎಸ್ಡಿಪಿಐ
ಮಂಗಳೂರು, ಏಪ್ರಿಲ್ 25: ರಾಜಕೀಯದಲ್ಲಿ ಯಾರೂ ಮಿತ್ರರಲ್ಲ, ಯಾರೂ ಶತ್ರುಗಳೂ ಅಲ್ಲ. ಕಾಲಕ್ಕೆ ತಕ್ಕಂತೆ ಬದಲಾಗುವುದೇ ರಾಜಕೀಯ. ಇಲ್ಲಿ ಅಧಿಕಾರಕ್ಕೆ ಎಲ್ಲವೂ ಸಾಧ್ಯ ಎನ್ನುವ ಮಾತಿದೆ. ಈ ಹಿಂದೆ ಬದ್ಧ ವೈರಿಗಳಂತೆ ಬಡಿದಾಡಿ, ಬೈದಾಡಿ ನಂತರ ಚುನಾವಣೆ ಸಂದರ್ಭದಲ್ಲಿ ಮಿತ್ರರಾದ ಹಲವಾರು ನಿದರ್ಶನಗಳು ನಮ್ಮ ಮುಂದಿವೆ. ಇಂತಹುದೇ ಪ್ರಸಂಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಚುನಾವಣೆ ಸಮೀಪಿಸುತ್ತಿದ್ದಂತೆ ಕರಾವಳಿಯಲ್ಲಿ ಕಾಂಗ್ರೆಸ್-ಎಸ್ಡಿಪಿಐ ಜೊತೆಗೆ ಮೈತ್ರಿ ಮಾಡಿಕೊಂಡಿದೆ. ಕಳೆದ ಕೆಲವು ವರ್ಷಗಳಿಂದ ಎಸ್ಡಿಪಿಐ ಮತ್ತು ಅದರ ಮಾತೃ ಸಂಘಟನೆ ಪಿಎಫ್ಐನ್ನು ಕೋಮುವಾದಿ ಸಂಘಟನೆ ಎಂದು ಟೀಕಿಸುತ್ತಾ ಬಂದಿದ್ದ ಕಾಂಗ್ರೆಸ್ ಈಗ ಚುನಾವಣೆ ಸಂದರ್ಭದಲ್ಲಿ ಅದೇ ಪಕ್ಷದೊಂದಿಗೆ ಕೈ ಜೋಡಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಟ್ವಾಳ, ಮಂಗಳೂರು ಉತ್ತರ ಮತ್ತು ಸುಳ್ಯ ವಿಧಾನಸಭಾ ಕ್ಷೇತ್ರಗಳಲ್ಲಿ ಮುಸ್ಲಿಂ ಮತಗಳು ನಿರ್ಣಾಯಕವಾಗಿದ್ದು ಮತ ವಿಭಜನೆಯಾಗದಂತೆ ತಡೆಯಲು ಕಾಂಗ್ರೆಸ್ ಮುಂದಾಗಿದೆ. ಇದಕ್ಕಾಗಿ ಮುಸ್ಲಿಂ ಮತಗಳನ್ನು ನೆಚ್ಚಿಕೊಂಡಿರುವ ಎಸ್ಡಿಪಿಐ ಪಕ್ಷದ ಅಭ್ಯರ್ಥಿಗಳು ಈ ಬಾರಿ ಚುನಾವಣಾ ಕಣಕ್ಕಿಳಿಸದಂತೆ ಕಾಂಗ್ರೆಸ್ ತಂತ್ರ ಹೂಡಿದೆ.

ಸಚಿವ ರಮಾನಾಥ ರೈ ಪ್ರತಿನಿಧಿಸುವ ಬಂಟ್ವಾಳ ಕ್ಷೇತ್ರದಲ್ಲಿ ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಜ್ ಫರಂಗಿಪೇಟೆ ನಾಮಪತ್ರ ಸಲ್ಲಿಸಿದ್ದರು. ಆದರೆ, ಈಗ ಎಸ್ಡಿಪಿಐ ಜೊತೆ ಒಳ ಒಪ್ಪಂದ ಮಾಡಿಕೊಂಡಿರುವ ಕಾಂಗ್ರೆಸ್ ಮುಖಂಡರು ರಿಯಾಜ್ ನಾಮಪತ್ರ ಹಿಂದೆಗೆಸಲು ಮುಂದಾಗಿದ್ದಾರೆ. ಈ ವಿಚಾರವನ್ನು ಎಸ್ಡಿಪಿಐ ನಾಯಕರು ಒಪ್ಪಿಕೊಂಡಿದ್ದು ಬಿಜೆಪಿ ಅಭ್ಯರ್ಥಿಗಳು ಜಯಗಳಿಸದಂತೆ ತಡೆಯಲು ಈ ನಿರ್ಧಾರ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ.
ಪಿಎಫ್ಐ ಹಾಗೂ ಎಸ್ಡಿಪಿಐ ಪಕ್ಷವನ್ನು ಕೋಮುವಾದಿ ಪಕ್ಷ , ಸಂಘಟನೆ ಎಂದು ಕಟುವಾಗಿ ಟೀಕಿಸಿದ್ದ ರಮಾನಾಥ್ ರೈ ಈಗ ಚುನಾವಣೆ ಸಂದರ್ಭದಲ್ಲಿ ಬಂಟ್ವಾಳ ಕ್ಷೇತ್ರದಲ್ಲಿ ತಮ್ಮ ಗೆಲುವಿಗೆ ಎಸ್ಡಿಪಿಐ ಮುಖಂಡರೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಕರಾವಳಿಯ ವಿಧಾನಸಭಾ ಕ್ಷೇತ್ರಗಳಲ್ಲಿ ಈ ಬಾರಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೆಕ್ ಟು ನೆಕ್ ಫೈಟ್ ಇದೆ. ಈ ಸಂದರ್ಭದಲ್ಲಿ ಗೆಲುವಿಗಾಗಿ ಎಸ್ಡಿಪಿಐ ಊರುಗೋಲು ಹಿಡಿದಿರುವ ಕಾಂಗ್ರೆಸ್ ನಿರ್ಧಾರಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ವ್ಯಕ್ತವಾಗಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications