Get Updates
Get notified of breaking news, exclusive insights, and must-see stories!

ನೆಟ್ಟಾರು ಕೊಲೆ ಆರೋಪಿಗೆ ಎಸ್‌ಡಿಪಿಐನಿಂದ ಟಿಕೆಟ್‌ ಘೋಷಣೆ: ನೆಟ್ಟಾರು ಪೋಷಕರು ಹೇಳಿದ್ದೇನು?

ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಎಸ್‌ಡಿಪಿಐ ಅಭ್ಯರ್ಥಿಯಾಗಿ ಪ್ರವೀಣ್ ನೆಟ್ಟಾರು ಕೊಲೆ ಆರೋಪಿಯನ್ನು ಘೋಷಿಸಲಾಗಿದ್ದು, ಈ ಬಗ್ಗೆ ಪ್ರವೀಣ್‌ ನೆತ್ತಾರು ಪೋಷಕರು ಏನು ಹೇಳಿದ್ದಾರೆ ಅನ್ನುವ ವಿವರ ಇಲ್ಲಿದೆ ನೋಡಿ.

ಮಂಗಳೂರು, ಫೆಬ್ರವರಿ, 13: ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಎಸ್‌ಡಿಪಿಐ ಅಭ್ಯರ್ಥಿಯಾಗಿ ಪ್ರವೀಣ್ ನೆಟ್ಟಾರು ಕೊಲೆ ಆರೋಪಿಯನ್ನು ಕಣಕ್ಕಿಳಿಸುವ ಚಿಂತನೆ ಭಾರಿ ವಿವಾದವನ್ನು ಸೃಷ್ಟಿಸಿದೆ. ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ, ನೆಟ್ಟಾರು ಕೊಲೆ ಆರೋಪಿ ಶಾಫಿ ಬೆಳ್ಳಾರೆಗೆ ಟಿಕೆಟ್ ನೀಡುವುದಾಗಿ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಕೊಡ್ಲಿಪೇಟೆ ಘೋಷಣೆ ಮಾಡಿದ್ದಾರೆ. ಜೈಲಿನಿಂದಲೇ ಚುನಾವಣೆಗೆ ಸ್ಪರ್ಧಿಸಲು ಬೆಳ್ಳಾರೆ ತೀರ್ಮಾನಿಸಿದ್ದು, ಇದು ಚುನಾವಣಾ ಕದನದಲ್ಲಿ ಹೊಸ ಸಂಚಲನ ಮೂಡಿಸಿದೆ.

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಆರೋಪಿ, ಸದ್ಯ ಎನ್‌ಐಎ ವಶದಲ್ಲಿರುವ ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾಫಿ ಬೆಳ್ಳಾರೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ನೀಡುವುದಾಗಿ ಘೋಷಣೆ ಮಾಡಲಾಗಿದೆ. ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಕೊಡ್ಲಿಪೇಟೆ ಶಾಫಿ ಬೆಳ್ಳಾರೆಗೆ ಟಿಕೆಟ್‌ ಘೋಷಣೆ ಮಾಡಿದ್ದಾರೆ. ಫೆಬ್ರವರಿ 10ರಂದು ಪುತ್ತೂರಿನಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಭಾಷಣ ಮಾಡಿದ್ದ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಮಜೀದ್, ಶಾಫಿ ಬೆಳ್ಳಾರೆ ನಮ್ಮ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ. ಅವರನ್ನು ಗೆಲ್ಲಿಸಬೇಕೆಂದು ಘೋಷಣೆ ಮಾಡಿದ್ದರು. ಎಸ್‌ಡಿಪಿಐನಿಂದ ಒಂದನೇ ಹಂತದ ಅಭ್ಯರ್ಥಿಗಳ ಘೋಷಣೆ ಈಗಾಗಲೇ ಮಾಡಿದ್ದು, ಎರಡನೇ ಹಂತದ ಅಭ್ಯರ್ಥಿ ಪಟ್ಟಿಯಲ್ಲಿ ಶಾಫಿ ಬೆಳ್ಳಾರೆ ಹೆಸರು ಘೋಷಣೆ ಮಾಡುವುದಾಗಿ ಅಬ್ದುಲ್ ಮಜೀದ್ ಹೇಳಿದ್ದಾರೆ.

 ನೆಟ್ಟಾರು ಕೊಲೆ ಆರೋಪಿಗೆ ಟಿಕೆಟ್‌

ನೆಟ್ಟಾರು ಕೊಲೆ ಆರೋಪಿಗೆ ಟಿಕೆಟ್‌

ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಶಾಫಿ ಬೆಳ್ಳಾರೆಗೆ ಟಿಕೆಟ್ ವಿಚಾರ ಬೆಳಕಿಗೆ ಬರುತ್ತಿದ್ದಂತೆಯೇ, ಪ್ರವೀಣ್ ನೆಟ್ಟಾರ್ ಪೋಷಕರು ಈ ಘೋಷಣೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. "ಶಾಫಿ ಬೆಳ್ಳಾರೆಗೆ ಯಾವುದೇ ಕಾರಣಕ್ಕೂ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು. ಅನ್ಯಾಯವಾಗಿ ನಮ್ಮ ಮಗನನ್ನು ಕೊಂದ ಪಾಪಿ ಅವನು‌‌. ಅಧಿಕಾರವಿಲ್ಲದೇ ಆತ ನಮ್ಮ ಮಗನನ್ನು ಕೊಂದಿದ್ದಾನೆ.

 ಶಾಫಿ ವಿರುದ್ಧ ನೆಟ್ಟಾರು ಪೋಷಕರ ಆಕ್ರೋಶ

ಶಾಫಿ ವಿರುದ್ಧ ನೆಟ್ಟಾರು ಪೋಷಕರ ಆಕ್ರೋಶ

ನಾಳೆ ಅಧಿಕಾರ ಪಡೆದ ಬಳಿಕ ಎಲ್ಲರನ್ನೂ ಕೊಲ್ಲುತ್ತಾನೆ. ನಮಗೆ ಮನೆಯಿಂದ ಹೊರಗೆ ಹೋಗಲಾರದಂತಹ ಸ್ಥಿತಿ ನಿರ್ಮಿಸಬಹುದು. ನಮಗೆ ಇದ್ದ ಒಬ್ಬನೇ ಮಗನನ್ನು ಮುಗಿಸಿದ್ದಾನೆ‌. ನಮಗೆ ಇಬ್ಬರಿಗೂ ಆರೋಗ್ಯ ಚೆನ್ನಾಗಿಲ್ಲ. ನಮ್ಮನ್ನು ಈ ಸ್ಥಿತಿಗೆ ತಂದ ಆರೋಪಿಗೆ ಚುನಾವಣೆಯಲ್ಲಿ ಸ್ಪರ್ಥಿಸಲು ಅವಕಾಶ ನೀಡಲೇಬಾರದು," ಎಂದು ಪ್ರವೀಣ್ ನೆತ್ತಾರು ಪೋಷಕರು ಆಕ್ರೋಶ ವ್ಯಕ್ತಪಡಿಸಿದರು.

 ಉಗ್ರ ಹೋರಾಟದ ಎಚ್ಚರಿಕೆ

ಉಗ್ರ ಹೋರಾಟದ ಎಚ್ಚರಿಕೆ

ಶಾಫಿ ಬೆಳ್ಳಾರೆ ಅಭ್ಯರ್ಥಿ ಘೋಷಣೆಗೆ ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮೊತಾಲಿಕ್ ಕೂಡಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ಕೊಲೆಗಡುಕರನ್ನು ಅಭ್ಯರ್ಥಿಯನ್ನಾಗಿ ಮಾಡಲು ಧೈರ್ಯ ತೋರಿದ ಎಸ್‌ಡಿಪಿಐಗೆ ಧಿಕ್ಕಾರ ಹೇಳುತ್ತೇನೆ. ಇವರ ಅಭ್ಯರ್ಥಿ ಶಾಫಿ ಬೆಳ್ಳಾರೆ ಓರ್ವ ಕೊಲೆಗಡುಕ, ಸಂಚುಕೋರನಾಗಿದ್ದಾನೆ. ಇವರ ಉದ್ದೇಶವೇ ಹಿಂದೂಗಳನ್ನು ಕೊಲೆ ಮಾಡುವುದಾಗಿದೆ. ರಾಜಕೀಯ ಶಕ್ತಿಯನ್ನು ಬಳಸಿ ಕೊಲೆ ಮಾಡುವ ಉದ್ದೇಶ ಇವರದ್ದಾಗಿದೆ. ಚುನಾವಣಾ ಆಯೋಗ ಇದನ್ನು ಗಂಭೀರವಾಗಿ ಪರಿಗಣಿಸಿ ಅವಕಾಶ ನೀಡಬಾರದು. ಅವಕಾಶ ನೀಡಿದರೆ ಶ್ರೀರಾಮ ಸೇನೆ ಉಗ್ರ ಹೋರಾಟ ಮಾಡಲಿದೆ ಎಂದು ಪ್ರಮೋದ್ ಮೊತಾಲಿಕ್ ಎಚ್ಚರಿಸಿದರು.

 ಎಸ್‌ಡಿಪಿಐ ನಡೆಗೆ ತೀವ್ರ ವಿರೋಧ

ಎಸ್‌ಡಿಪಿಐ ನಡೆಗೆ ತೀವ್ರ ವಿರೋಧ

ಒಟ್ಟಿನಲ್ಲಿ ಎಸ್‌ಡಿಪಿಐ ವಿವಾದಾತ್ಮಕ ನಡೆಗೆ ಕರಾವಳಿಯಲ್ಲಿ ತೀವ್ರ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಬಿಜೆಪಿ ಸೇರಿದಂತೆ ಹಿಂದೂ ಸಂಘಟನೆಗಳು ಎಸ್‌ಡಿಪಿಐ ನಡೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಈ ವಿಚಾರ ಮುಂದೆ ಯಾವ ಸ್ವರೂಪ ಪಡೆಯಲಿದೆ ಎಂಬುವುದನ್ನು ಕಾದುನೋಡಬೇಕಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+