ಕಡಲ್ಕೊರೆತಕ್ಕೆ ಸಮಸ್ಯೆ ಬಗ್ಗೆ ಬರೆದಿದ್ದ ಪತ್ರಕ್ಕೆ ಪ್ರಧಾನಿ ಕಚೇರಿಯಿಂದ ಸ್ಪಂದನೆ
ಮಂಗಳೂರು, ಜುಲೈ 19: ಮಳೆಗಾಲ ಬಂತೆಂದರೆ ಕರಾವಳಿಗೆ ಕಾಡುವ ದೊಡ್ಡ ಸಮಸ್ಯೆಯೆಂದರೆ ಕಡಲ್ಕೊರೆತ . ಒಂದೂವರೆ ದಶಕಗಳಿಂದೀಚೆಗೆ ಇದು ವಿಪರೀತವಾಗಿ ಕಾಡುತ್ತಿದ್ದು, ಕಡಲತಡಿಯ ಜನಜೀವನವನ್ನು ಹೈರಾಣಾಗಿಸಿದೆ.
ಈ ಸಮಸ್ಯೆಯ ಬಗ್ಗೆ ಉಚ್ಚಿಲದ ಯುವಕರೊಬ್ಬರು ಪ್ರಧಾನಿ ಕಾರ್ಯಾಲಯಕ್ಕೆ ಪತ್ರ ಬರೆದಿದ್ದು, ಅದಕ್ಕೆ ಸ್ಪಂದಿಸಿದ ಪಿಎಂ ಕಚೇರಿ ಸೂಕ್ತವಾಗಿ ಸ್ಪಂದಿಸುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದೆ.
ಸೋಮೇಶ್ವರ ಉಚ್ಚಿಲ ಕೋಟೆ ನಿವಾಸಿ ರೂಪೇಶ್ ಎನ್. ಅವರು ಎಕೌಂಟಂಟ್ ಉದ್ಯೋಗ ಮಾಡಿಕೊಂಡಿದ್ದು, ಜುಲೈ 4ರಂದು ಪ್ರಧಾನಿ ಕಾರ್ಯಾಲಯಕ್ಕೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ, "ಹಲವು ವರ್ಷಗಳಿಂದ ಕಡಲ್ಕೊರೆತ ಕರಾವಳಿ ಜನರನ್ನು ಕಾಡುತ್ತಿದೆ. 5 ವರ್ಷಗಳಿಂದ ಈ ಕಡಲ್ಕೊರೆತ ಉಚ್ಚಿಲ ಸುತ್ತಮುತ್ತಲ ಪ್ರದೇಶದಲ್ಲಿ ವಿಪರೀತವಾಗಿದ್ದು, ಸಮುದ್ರ ತೀರದ ಜಾಗಗಳು ಕಡಲಿಗೆ ಅಪೋಶನವಾಗುತ್ತಿದೆ. ಕೊರೆತವನ್ನು ತಡೆಗಟ್ಟುವ ನೆಪದಲ್ಲಿ ಕೋಟ್ಯಂತರ ರೂ. ಹಣವನ್ನು ವ್ಯಯಿಸಿ ತಡೆಗೋಡೆ ನಿರ್ಮಿಸಲಾಗುತ್ತಿದೆ. ಆದರೆ ಇದು ಪೂರ್ಣವಾಗಿಲ್ಲ. ಬೇಗ ನಮಗೆ ಈ ಸಮಸ್ಯೆಯಿಂದ ಮುಕ್ತಿ ಕೊಡಿಸಿ," ಎಂದು ಆಗ್ರಹಿಸಿದ್ದರು.
ಇದಕ್ಕೆ ಕೂಡಲೇ ಸ್ಪಂದಿಸಿದ ಪ್ರಧಾನಿ ಕಾರ್ಯಾಲಯ ಜುಲೈ 16 ರಂದು ರಾಜ್ಯ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದು ಸಮಸ್ಯೆಗೆ ಸೂಕ್ತ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದೆ. ಈ ಪ್ರತಿಯನ್ನು ರೋಪೇಶ್ ಅವರಿಗೂ ಕಳುಹಿಸಲಾಗಿದ್ದು, ಜುಲೈ 18ರಂದು ಪತ್ರದ ಪ್ರತಿ ರೂಪೇಶ್ ಕೈ ತಲುಪಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications