ಕಡಲ್ಕೊರೆತ : ಡೇಂಜರ್ ಝೋನ್ ನಲ್ಲಿ ಸೋಮೇಶ್ವರದ ಕಿನಾರೆ
ಮಂಗಳೂರು ಜುಲೈ 14 : ಕರ್ನಾಟಕದ ಕರಾವಳಿಯಲ್ಲಿ ಮುಂಗಾರು ತೀವ್ರವಾಗುತ್ತಿದ್ದಂತೆ ಸಮುದ್ರ ಕಿನಾರೆಯಲ್ಲಿ ಕಡಲ ಕೊರೆತದ ಭೀತಿ ಆವರಿಸತೊಡಗುತ್ತದೆ.
ಮಂಗಳೂರು ಸುತ್ತಮತ್ತ ಕಡಲ ತಡಿಯ ಪ್ರದೇಶಗಳಲ್ಲಿ ತಡೆಗೋಡೆ ನಿರ್ಮಾಣ ಹಾಗು ಬ್ರೇಕ್ ವಾಟರ್ ನಿಂದಾಗಿ ಕಳೆದ 2 ವರ್ಷಗಳಿಂದ ಕಡಲ ಕೊರೆತದ ಭೀತಿ ತಗ್ಗಿತ್ತು. ಆದರೆ ಈ ಬಾರಿ ಮಳೆಯ ಅಬ್ಬರ ಹೆಚ್ಚಿರುವ ಹಿನ್ನೆಲೆಯಲ್ಲಿ ಮಂಗಳೂರು ಹೊರವಲಯದಲ್ಲಿ ಮತ್ತೆ ಕಡಲ ಕೊರೆತ ಆರಂಭವಾಗಿದೆ.
ಮಂಗಳೂರು ಹೊರವಲಯದ ಸೋಮೇಶ್ವರ, ಉಚ್ಚಿಲ ಪ್ರದೇಶದಲ್ಲಿ ಕಡಲಕೊರೆತ ತೀವ್ರಗೊಂಡಿದೆ. ಈ ಹಿನ್ನಲೆಯಲ್ಲಿ ಸೋಮೇಶ್ವರ ಕಡಲ ಕಿನಾರೆಯನ್ನು ಜಿಲ್ಲಾಡಳಿತ ಡೇಂಜರ್ ಝೋನ್ ಎಂದು ಘೋಷಿಸಿದೆ.

ಉಳ್ಳಾಲದ ಕೈಕೊ, ಸುಭಾಷ್ ನಗರ ಸೇರಿದಂತೆ ಉಚ್ಚಿಲ ಪ್ರದೇಶದಲ್ಲಿ ಆಳೆತ್ತರದ ಕಲೆಗಳು ಏಳುತ್ತಿದ್ದು ಕಡಲು ರೌದ್ರಾವತಾರ ತಾಳಿದೆ. ಸಮುದ್ರ ತೀರದ ಹಲವಾರು ಮರಗಳನ್ನು ಸಮುದ್ರ ಈಗಾಗಲೆ ಆಪೋಷನ ತೆಗೆದುಕೊಂಡಿದೆ. ಕಲಡ ತೀರದಲ್ಲಿ ವಾಸಿಸುವ ನೂರಾರು ಕುಟುಂಬಗಳು ಆತಂಕದಲ್ಲಿ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಪ್ರದೇಶದಲ್ಲಿ ಮರಳು ಕರಗಿ ಸಮುದ್ರ ಪಾಲಾಗುತಿದ್ದು ಭೂ ಪ್ರದೇಶ ಸಮುದ್ರದ ಒಡಲು ಸೇರುತ್ತಿದೆ. ಉಲ್ಲಾಳದಲ್ಲಿ ಸುಮಾರು 10ಕ್ಕೂ ಹೆಚ್ಚು ಮನೆಗಳು ಅಪಾಯದ ಅಂಚಿನಲ್ಲಿವೆ. ಸಂಜೆ ಆಗುತ್ತಿದ್ದಂತೆ ಭಾರೀ ಅಲೆಗಳು ಏಳುವ ಸಾಧ್ಯತೆ ಇದೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಕಳೆದೊಂದು ವಾರದಿಂದ ಸೋಮೇಶ್ವರ - ಉಚ್ಚಿಲದಲ್ಲಿ ಭಾರೀ ಕಡಲ್ಕೊರೆತ ಆರಂಭವಾಗಿದ್ದು ಈ ಕುರಿತು ಜಿಲ್ಲಾಡಳಿತ ಸೇರಿದಂತೆ ಸ್ಥಳಿಯಾಡಳಿತಕ್ಕೆ ಮಾಹಿತಿ ನೀಡಿದ್ದರು ಈ ವರೆಗೆ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications