ಉಳ್ಳಾಲದಲ್ಲಿ ಹೆಚ್ಚಿದ ಉಬ್ಬರ, ಕಡಲ್ಕೊರೆತ ಭೀತಿ; ಆತಂಕದಲ್ಲಿ ಜನ
ಉಳ್ಳಾಲ, ಜೂನ್ 2: ಮುಂಗಾರು ಸಮೀಪಿಸುತ್ತಿದ್ದಂತೆ ಮಂಗಳೂರು ಹಾಗೂ ಉಡುಪಿಯ ಸಮುದ್ರ ತೀರ ಪ್ರದೇಶಗಳಲ್ಲಿ ಉಬ್ಬರ ಹೆಚ್ಚಾಗಿದೆ. ಉಳ್ಳಾಲದ ಕಿಲೇರಿಯ ನಗರ, ಸೋಮೇಶ್ವರ, ಉಚ್ಚಿಲ ಭಾಗದಲ್ಲಿ ಮನೆ ಹಾಗೂ ಮಸೀದಿಗಳಿಗೆ ಬುಧವಾರ ಮಧ್ಯಾಹ್ನದಿಂದ ಅಲೆಗಳು ಅಪ್ಪಳಿಸಲು ಆರಂಭವಾಗಿದ್ದು, ಜನ ಭೀತಿ ಎದುರಿಸುತ್ತಿದ್ದಾರೆ.
ಕಿಲೇರಿಯ ನಗರದಲ್ಲಿರುವ 10ಕ್ಕೂ ಅಧಿಕ ಮನೆಗಳು, ಮಸೀದಿಗಳಿಗೆ ಅಲೆಗಳು ಅಪ್ಪಳಿಸಲು ಆರಂಭವಾಗಿದೆ. ಮಳೆ ಆರಂಭವಾಗುತ್ತಿದಂತೆ ಸಮುದ್ರದ ಅಲೆಗಳ ರಭಸ ಮತ್ತಷ್ಟು ಹೆಚ್ಚಾಗುವುದರಿಂದ ಸ್ಥಳೀಯರ ಆತಂಕಕ್ಕೀಡಾಗಿದ್ದಾರೆ.

ಬ್ರೇಕ್ ವಾಟರ್ ನಿಂದ ತೊಂದರೆ
ಕೋಟೆಪುರ, ಮೊಗವೀರ ಪಟ್ನ ಭಾಗದಲ್ಲಿ ಶಾಶ್ವತ ಬ್ರೇಕ್ ವಾಟರ್ ಕಾಮಗಾರಿ ನಡೆಯುತ್ತಿರುವ ಹಿನ್ನಲೆಯಲ್ಲಿ ಸಮುದ್ರದ ಅಲೆಗಳು ಕಿಲೇರಿಯನಗರ, ಸುಭಾಷ್ ನಗರ, ಉಚ್ಚಿಲ, ಸೋಮೇಶ್ವರ ಭಾಗದಲ್ಲಿ ಅಪ್ಪಳಿಸಲು ಆರಂಭವಾಗಿದೆ. ಏಕಕಾಲದಲ್ಲಿ ಉಳ್ಳಾಲದಿಂದ ತಲಪಾಡಿ ಭಾಗದವರೆಗೂ ಸುರಕ್ಷಾ ಕ್ರಮ ಕೈಗೊಂಡು ಕಾಮಗಾರಿ ಆರಂಭಿಸಿದ್ದರೆ ಇಂತಹ ತೊಂದರೆ ಮರುಕಳಿಸುತ್ತಿರಲಿಲ್ಲ ಅನ್ನುವುದು ಸ್ಥಳೀಯರ ಆರೋಪ.

"ಕಳೆದ ವರ್ಷವೂ ಪರಿಹಾರದ ಭರವಸೆ ಮಾಧ್ಯಮಗಳಲ್ಲಿ ಮಾತ್ರ ಕಂಡಿದ್ದೇವೆ. ಆದರೆ ಫಲಾನುಭಾವಿಗಳಿಗೆ ಮಾತ್ರ ಇನ್ನೂ ತಲುಪಿಲ್ಲ. ಸಚಿವರು, ಸಂಬಂಧಿಸಿದ ಅಧಿಕಾರಿಗಳು ಕೊಡಲೇ ಸ್ಥಳಕ್ಕೆ ಭೇಟಿ ನೀಡಿ ಶಾಶ್ವತ ಕ್ರಮ ಕೈಗೊಳ್ಳಬೇಕಿದೆ," ಎಂದು ಸ್ಥಳೀಯರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications