ಉಳ್ಳಾಲದಲ್ಲಿ ಭಾರೀ ಕಡಲ್ಕೊರೆತ, ಜನರಿಗೆ ಆತಂಕ
ಮಂಗಳೂರು, ಜುಲೈ 01 : ಭಾರೀ ಮಳೆಯಿಂದಾಗಿ ಉಳ್ಳಾಲ ಹಾಗೂ ಉಚ್ಚಿಲದಲ್ಲಿ ಸಮುದ್ರ ಬಿರುಸುಗೊಂಡಿದ್ದು, ಕಡಲ್ಕೊರೆತದಿಂದಾಗಿ ಹಲವಾರು ಮನೆಗಳು ಅಪಾಯಕ್ಕೆ ಸಿಲುಕಿವೆ. 5 ವರ್ಷಗಳಿಂದ ಉಚ್ಚಿಲ ಸಮುದ್ರ ತೀರದಲ್ಲಿರುವ ಕಡಲ್ಕೊರೆತ ಈಗ ರೌದ್ರಾವತಾರ ತಾಳಿದ್ದು, ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.
ನ್ಯೂ ಉಚ್ಚಿಲದಿಂದ-ಉಚ್ಚಿಲ ಕೋಟೆವರೆಗಿನ ಸಮುದ್ರ ತೀರದ ಜನರು ಭಯಭೀತರಾಗಿದ್ದಾರೆ. ಉಳ್ಳಾಲದಲ್ಲಿ ಒಂದು ಮನೆ, ಉಚ್ಚಿಲದಲ್ಲಿ ಎರಡು ಮನೆಗಳು ತೀರಾ ಅಪಾಯದಲ್ಲಿವೆ. ಉಳಿದಂತೆ ಪರಿಸರದ ಸುಮಾರು 50 ಮನೆಗಳು ಕುಸಿತದ ಭೀತಿಯಲ್ಲಿವೆ. [ಕಡಲಕಿನಾರೆಯ ಕಥಾ ಪ್ರಸಂಗಗಳು]

ಉಳ್ಳಾಲದ ಕೋಟೆಪುರ ಬಳಿಯ ಅಬೂಬಕ್ಕರ್ ಅವರ ಮನೆ ಕುಸಿಯುವ ಭೀತಿಯಲ್ಲಿದ್ದು, ಮನೆಮಂದಿ ಸಂಬಂಧಿಕರ ಮನೆಗೆ ಸ್ಥಳಾಂತರಗೊಂಡಿದ್ದಾರೆ. ಉಚ್ಚಿಲದಲ್ಲಿ ಮನೆಯ ಅಂಗಳಕ್ಕೆ ಬಂದ ಸಮುದ್ರದ ಅಲೆಯಿಂದ ಮಹಿಳೆಯೊಬ್ಬರು ಬಿದ್ದು ಗಾಯಗೊಂಡಿದ್ದಾರೆ. [ಕರಾವಳಿಯಲ್ಲಿ ಮಳೆ ಆರ್ಭಟ : ಸಮುದ್ರ ಕೊರೆತದ ಭೀತಿ]
ಐದು ವರ್ಷಗಳಿಂದ ಕಡಲ್ಕೊರೆತ ಇದ್ದರೂ ಈವರೆಗೆ ಜನಪ್ರತಿನಿಧಿಗಳು ಪರಿಶೀಲಿಸಿ ಭರವಸೆ ನೀಡಿದ್ದಾರೆಯೇ ಹೊರತು ಸಮಸ್ಯೆ ಪರಿಹಾರವಾಗಿಲ್ಲ. ಪ್ರತಿ ವರ್ಷವೂ ಇಲ್ಲಿನ ಜನರು ಕಡಲ್ಕೊರೆತದಿಂದ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.
ಸಚಿವ ಯು.ಟಿ.ಖಾದರ್ ಭೇಟಿ : ಸಚಿವ ಯು.ಟಿ.ಖಾದರ್ ಅವರು ಗುರುವಾರ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದರು. ಕಡಲ್ಕೊರೆತಕ್ಕೆ ತುತ್ತಾದ ಪ್ರದೇಶಗಳಾದ ಕೋಟೆಪುರ, ಮೊಗವೀರ ಪಟ್ನಾ, ಸೋಮೇಶ್ವರ ಉಚ್ಚೀಲಾ, ಕಿಲಿರಿಯಾ ನಗರ , ಮುಕ್ಕಚ್ಚೇರಿ ಮೊದಲಾದ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದರು.
'ಉಚ್ಚೀಲದಲ್ಲೂ ಶಾಶ್ವತ ಕಾಮಗಾರಿ ನಡೆಸುವ ಸಲುವಾಗಿ ರಾಜ್ಯದಿಂದ ಕೇಂದ್ರಕ್ಕೆ ಪ್ರಸ್ತಾಪ ಸಲ್ಲಿಸಲಾಗಿದೆ. ಈ ಭಾಗದ ಸಂತ್ರಸ್ತರು ನಿವೇಶನಕ್ಕಾಗಿ ಸರಕಾರಕ್ಕೆ ಮನವಿ ಮಾಡಿದ್ದು, ಸಂತ್ರಸ್ತರ ಪಟ್ಟಿಯನ್ನು ಜಿಲ್ಲಾಧಿಕಾರಿಗೆ ನೀಡಿದರೆ ಕಂದಾಯ ಇಲಾಖೆ ಮೂಲಕ ಪರಿಶೀಲಿಸಿ ನಿವೇಶನ ಕಲ್ಪಿಸಲಾಗುವುದು' ಎಂದರು.
ಸಂತ್ರಸ್ತರ ಅಸಮಾಧಾನ : ಸಮುದ್ರ ಕಿನಾರೆಯಲ್ಲಿ ವಾಸವಿರುವ ಸಂತ್ರಸ್ತರು ಕಡಲ್ಕೊರೆತಕ್ಕೆ ಸಂಬಂಧಿಸಿ ನಡೆಯುತ್ತಿರುವ ಕಾಮಗಾರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಮಳೆಗಾಲದಲ್ಲಿ ಎಲ್ಲರೂ ಭರವಸೆ ನೀಡಿ ಹೋಗುತ್ತಾರೆ. ನಂತರ ಆ ಭಾಗಕ್ಕೆ ಯಾರೂ ಬರುವುದಿಲ್ಲ.
ಉಳ್ಳಾಲ, ಕೋಟೆಪುರ, ಮೊಗವೀರ ಪಟ್ನಾ ದಲ್ಲಿ ಎಡಿಬಿ ಯೋಜನೆಯಡಿ ನಡೆಯುತ್ತಿರುವ ಶಾಶ್ವತ ಕಡಲ್ಕೊರೆತ ತಡೆ ಕಾಮಗಾರಿ ಮುಗಿಯುವ ಲಕ್ಷಣಗಳು ಗೋಚರಿಸುತ್ತಿಲ್ಲ. ಸಮುದ್ರಕ್ಕೆ ಹಾಕಲಾದ ಕೋಟಿಗಟ್ಟಲೆ ಮೌಲ್ಯದ ಮರಳು ಚೀಲಗಳು ಸಮುದ್ರ ಪಾಲಾಗಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
-
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ?












Click it and Unblock the Notifications