ಕರಾವಳಿಯಲ್ಲಿ ತಗ್ಗಿದ ಕಡಲ್ಕೊರೆತ: ಸುರಕ್ಷಿತ ಸ್ಥಳಕ್ಕೆ 20 ಕುಟುಂಬ ಸ್ಥಳಾಂತರ
ಮಂಗಳೂರು, ಜುಲೈ 19: ಕರಾವಳಿಯಲ್ಲಿ ಮಳೆರಾಯನ ಅಬ್ಬರ ಕೊಂಚ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಸಮುದ್ರ ರಾಜನ ಆರ್ಭಟ ತಗ್ಗಿದೆ. ಕಳೆದ 5 ದಿನಗಳಿಂದ ಕರಾವಳಿಯ ಉದ್ದಕ್ಕೂ ಕಡಲಿನ ಅಲೆಗಳ ಹೊಡೆತ ಜೋರಾಗಿತ್ತು. ಈ ಪರಿಣಾಮ ಕರಾವಳಿಯಲ್ಲಿ ವ್ಯಾಪಕವಾಗಿ ಕಡಲ್ಕೊರೆತ ಆರಂಭವಾಗಿತ್ತು.
ಆದರೆ ಕಳೆದ ರಾತ್ರಿಯಿಂದ ಮಂಗಳೂರು ಹೊರವಲಯದ ಉಳ್ಳಾಲ ಹಾಗೂ ಸೋಮೇಶ್ವರ, ಉಚ್ಚಿಲ ಪ್ರದೇಶದಲ್ಲಿ ಕಡಲ್ಕೊರೆತದ ಪ್ರಮಾಣ ಕಡಿಮೆಯಾಗಿದೆ. ಕಡಲ ಅಲೆಗಳ ಅಬ್ಬರ ಕೊಂಚ ತಗ್ಗಿದೆ. ಈ ಹಿನ್ನಲೆಯಲ್ಲಿ ಉಳ್ಳಾಲ ಪ್ರದೇಶದ ಕೈಕೊ, ಕಿಲೇರಿಯಾ ನಗರ , ಮಕ್ಕಚೇರಿ ಯಲ್ಲಿ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಈ ಪ್ರದೇಶದಲ್ಲಿ ಅಪಾಯದಲ್ಲಿದ್ದ 41 ಮನೆಗಳನ್ನು ಉಳ್ಳಾಲ ನಗರಸಭೆ ಗುರುತಿಸಿದ್ದು, 20 ಕುಟುಂಬಗಳನ್ನು ಈಗಾಗಲೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಇನ್ನುಳಿದವರು ರಾತ್ರಿ ವೇಳೆ ಸಂಬಂಧಿಕರ ಮನೆಗಳಿಗೆ ತೆರಳಿದ್ದರು. ಸೋಮೇಶ್ವರ ಉಚ್ಚಿಲದಲ್ಲಿ ಬಟ್ಟಪ್ಪಾಡಿಯಲ್ಲಿ ಹಾಕಲಾಗಿದ್ದ ತಾತ್ಕಾಲಿಕ ತಡೆಗೋಡೆಯ ಬೃಹತ್ ಗಾತ್ರದ ಕಲ್ಲುಗಳು ಸಮುದ್ರಪಾಲಾಗುತ್ತಿವೆ.

ಈ ಪ್ರದೇಶದಲ್ಲಿ 10 ಕ್ಕೂ ಹೆಚ್ಚು ಮನೆಗಳು ಅಪಾಯದಲ್ಲಿದ್ದು, ಮತ್ತೇ ಕಡಲ್ಕೊರೆತ ಹೆಚ್ಚಾದರೆ ಈ ಮನೆಗಳು ಕಡಲ ಒಡಲು ಸೇರುವ ಆತಂಕವಿದೆ. ಈ ಕುರಿತು ಈಗಾಗಲೇ ಉಳ್ಳಾಲ ನಗರ ಸಭೆಯ ಅಧಿಕಾರಿಗಳ ಗಮನಕ್ಕೆ ತಂದರು ಇತ್ತ ಹಮನಹರಿಸುತ್ತಿಲ್ಲ ಎಂದು ಬಟ್ಟಪ್ಪಾಡಿ ನಿವಾಸಿಗಳು ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಕಡಲ್ಕೊರೆತಕ್ಕೆ ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ನಿನ್ನೆ 8 ಮನೆಗಳು ಧ್ವಂಸಗೊಂಡಿದ್ದವು . ಕಡಲ ಭೋರ್ಗರೆತ ಹೆಚ್ಚಾಗಿದ್ದ ಕಾರಣ ಸ್ಥಳೀಯ ನಿವಾಸಿಗಳಲ್ಲಿ ಯಾವಾಗ ಏನಾಗುತ್ತೋ ಅನ್ನೋ ಜೀವ ಭಯ ಮನೆ ಮಾಡಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications