ವಿದೇಶದಿಂದ ಮಂಗಳೂರು ಬಂದರಿಗೆ ಬಂದ ಎರಡನೇ ಐಷಾರಾಮಿ ಹಡಗು
ಮಂಗಳೂರು, ಡಿ.02 : ವಾರದ ಅಂತರದಲ್ಲಿ ಪಣಂಬೂರು ನವ ಮಂಗಳೂರು ಬಂದರು ತೀರಕ್ಕೆ ಮತ್ತೊಂದು ಐಷಾರಾಮಿ ಹಡಗು ಆಗಮಿಸಿದೆ. ಸೆವೆನ್ ಸೀಸ್ ಎಕ್ಸ್ ಪ್ಲೋರರ್ ಎಂಬ ಈ ಹಡಗು ಮಾರ್ಷಲ್ ಐಲ್ಯಾಂಡ್ ನಿಂದ ಆಗಮಿಸಿದೆ.
ಕೋವಿಡ್ ಸಂಕಷ್ಟದ ಬಳಿಕ ಅಂದರೆ ಸರಿ ಸುಮಾರು ಎರಡು ವರ್ಷದ ಬಳಿಕ ನವ ಮಂಗಳೂರು ಬಂದರಿಗೆ ಆಗಮಿಸಿರುವ ಎರಡನೇ ಐಷಾರಾಮಿ ಪ್ರಯಾಣಿಕ ಹಡಗು ಇದಾಗಿದೆ. 686 ಮಂದಿ ಪ್ರಯಾಣಿಕರು ಹಾಗೂ 552 ಸಿಬ್ಬಂದಿಯನ್ನು ಹೊತ್ತು ತಂದಿರುವ ಸೆವೆನ್ ಸೀಸ್ ಎಕ್ಸ್ ಪ್ಲೋರರ್ ಹಡಗು 223.74 ಮೀ. ಉದ್ದ ಹಾಗೂ 48 ಮೀ. ಅಗಲವಿದೆ.
ಬೆಳಗ್ಗೆ 7 ಗಂಟೆಗೆ ಈ ಹಡಗು ನವ ಮಂಗಳೂರು ಬಂದರಿಗೆ ಆಗಮಿಸಿತ್ತು. ಈ ಹಡಗು ಮಾಲೆ (ಮಾಲ್ಡೀವ್ಸ್)ಗೆ ಹೋಗುವ ಮಾರ್ಗದಲ್ಲಿ ಕತಾರ್ ಬಂದರಿನಿಂದ ಭಾರತಕ್ಕೆ ಬಂದು ಮರ್ಮಾಗೋವಾಕ್ಕೆ ಆಗಮಿಸಿತ್ತು. ಅಲ್ಲಿಂದ ನವ ಮಂಗಳೂರು ಬಂದರಿಗೆ ಬಂದಿದೆ.

ಈ ಹಡಗಿನ ಸಿಬ್ಬಂದಿ ಹಾಗೂ ಪ್ರಯಾಣಿಕರಿಗೆ ನವ ಮಂಗಳೂರು ಬಂದರು ಅಧಿಕಾರಿಗಳು ಭವ್ಯವಾಗಿ ಸ್ವಾಗತ ಕೋರಿದ್ದಾರೆ. ಪ್ರಯಾಣಿಕರ ಸೌಲಭ್ಯಕ್ಕೆ ಸಕಲ ಸಿದ್ಧತೆ ಮಾಡಲಾಗಿತ್ತು. ಹಡಗಿನಿಂದ ಇಳಿದ ಪ್ರಯಾಣಿಕರಿಗೆ ಮಂಗಳೂರು ನಗರದ ಕುದ್ರೋಳಿ ಶ್ರೀಕ್ಷೇತ್ರ, ಕದ್ರಿ ದೇವಾಲಯ, ಸಂತ ಅಲೋಶಿಯಸ್ ಚಾಪೆಲ್, ಸ್ಥಳೀಯ ಮಾರುಕಟ್ಟೆ, ಗೋಡಂಬಿ ಕಾರ್ಖಾನೆ, ಗೋಮಟೇಶ್ವರ ಪ್ರತಿಮೆ, ಮೂಡಬಿದ್ರಿಯ ಸಾವಿರಕಂಬದ ಬಸದಿಯ ವೀಕ್ಷಣೆಗೆ ಬಸ್, ಕಾರು, ಪ್ರೀಪೇಯ್ ಟ್ಯಾಕ್ಸಿಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಈ ಹಡಗು ಸಂಜೆ 6 ಗಂಟೆಗೆ ಮಾಲ್ಡೀವ್ಸ್ ನ ಮಾಲೆ ಬಂದರಿನತ್ತ ಪ್ರಯಾಣ ಬೆಳೆಸಿದೆ.
ಇದಕ್ಕೂ ಮೊದಲು ನವೆಂಬರ್28 ರಂದು ಕೋವಿಡ್ ನಂತರ ಸುಮಾರು ಎರಡು ವರ್ಷಗಳ ಬಳಿಕ ಮೊದಲ ಬಾರಿಗೆ ನವ ಮಂಗಳೂರು ಬಂದರಿನ ತೀರಕ್ಕೆ ಯೂರೋಪ್ನ ಮಾಲ್ಟಾದಿಂದ ಐಷಾರಾಮಿ ಪ್ರಯಾಣಿಕ 'ಯುರೋಪ 2' ಕ್ರೂಸ್ ಆಗಮಿಸಿತ್ತು.
271 ಪ್ರಯಾಣಿಕರು ಹಾಗೂ 373 ಮಂದಿ ಸಿಬ್ಬಂದಿಯನ್ನು ಹೊತ್ತು ತಂದ ಎಂಎಸ್ 'ಯುರೋಪ 2' ನವ ಮಂಗಳೂರು ಬಂದರಿಗೆ ಆಗಮಿಸಿತ್ತು. 224.38 ಮೀಟರ್ ಉದ್ದ ಹಾಗೂ 29.99 ಮೀಟರ್ ಅಗಲದ ಈ ಪ್ರಯಾಣಿಕ ಹಡಗು ಗೋವಾದಿಂದ ಮಂಗಳೂರಿಗೆ ಬಂದಿತ್ತು.

ನವ ಮಂಗಳೂರು ಬಂದರು ಅಧಿಕಾರಿಗಳು ಪ್ರಯಾಣಿಕರ ಸೌಲಭ್ಯಕ್ಕೆ ಸಕಲ ಸಿದ್ಧತೆಗಳನ್ನು ಕಲ್ಪಿಸಿದ್ದರು. ಹಡಗಿನಿಂದ ಇಳಿದ ಪ್ರಯಾಣಿಕರಿಗೆ ಮಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಭೇಟಿ ನೀಡಲು ಬಸ್ಸು, ಕಾರುಗಳು, ಪ್ರೀಪೇಯ್ ಟಾಕ್ಸಿಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಪ್ರಯಾಣಿಕರು ಸಂತ ಅಲೋಶಿಯಸ್ ಕಾಲೇಜು, ಕುದ್ರೋಳಿ ದೇವಸ್ಥಾನ, ಮಾರುಕಟ್ಟೆ, ಗೇರುಬೀಜ ಕಾರ್ಖಾನೆ, ಫಿಝಾ ಮಾಲ್ ಸೇರಿದಂತೆ ವಿವಿಧ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡಿದ್ದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications