ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಭದ್ರತಾ ವೈಫಲ್ಯ: ಕಂಡೂ ಕಾಣದಂತೆ ಕಣ್ಣುಮುಚ್ಚಿ ಕುಳಿತ್ರಾ ಅಧಿಕಾರಿಗಳು?
ಮಂಗಳೂರು, ಜನವರಿ 09: ಮಂಗಳೂರು ನಗರದ ಸೆಂಟ್ರಲ್ ರೈಲು ನಿಲ್ದಾಣವು ಸಂಪೂರ್ಣ ಭದ್ರತಾ ವೈಫಲ್ಯದಿಂದ ಮುಳುಗಿದೆ. ರೈಲು ನಿಲ್ದಾಣಕ್ಕೆ ಪ್ರವೇಶ ದ್ವಾರದ ಮೆಟಲ್ ಡಿಟೆಕ್ಟರೇ ಕೆಲಸ ಮಾಡದೆ ಕೆಟ್ಟು ನಿಂತಿದೆ. ಪ್ರಯಾಣಿಕರ ಬ್ಯಾಗ್ ಪರಿಶೀಲನೆ ಮಾಡುವುದೇ ಇಲ್ಲ. ಪ್ರಯಾಣಿಕರು ಪರ್ಯಾಯ ಮಾರ್ಗದ ಮೂಲಕ ಫ್ಲ್ಯಾಟ್ ಫಾರಂಗೆ ಹೊಕ್ಕರೂ ಹೇಳುವವರಿಲ್ಲ, ಕೇಳುವವರಿಲ್ಲ ಎಂಬಂತಾಗಿದೆ.
ರೈಲು ನಿಲ್ದಾಣವೆಂಬುದು ಬಸ್ ತಂಗುದಾಣದಂತೆ ಯಾರು ಬೇಕಾದರೂ ಬೇಕಾಬಿಟ್ಟಿ ಬರುವಂತಿಲ್ಲ. ರೈಲು ಟಿಕೆಟ್ ಇಲ್ಲದೆ ಫ್ಲ್ಯಾಟ್ ಫಾರ್ಮ್ ಟಿಕೆಟ್ ಇಲ್ಲದೆ ಫ್ಲ್ಯಾಟ್ ಫಾರ್ಮ್ ಒಳಗೆ ಬರುವಂತಿಲ್ಲ, ಕೂರುವಂತಿಲ್ಲ. ಆದರೂ ಮಂಗಳೂರು ನಗರದ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಆರಾಮವಾಗಿ ಎಲ್ಲರೂ ರೈಲ್ವೆ ನಿಲ್ದಾಣದೊಳಗೆ ಹೋಗಿ ಬರುತ್ತಿದ್ದಾರೆ.

ಒಳ ಬರುವ ವೇಳೆ ಮೆಟಲ್ ಡಿಟೆಕ್ಟರ್ ಮೂಲಕ ಪರಿಶೀಲನೆ ನಡೆಸಿ, ಬ್ಯಾಗ್ ಚೆಕಿಂಗ್ ಮಾಡಬೇಕಾಗುತ್ತದೆ. ಆದರೆ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಇದು ಯಾವುದು ಇಲ್ಲದಂತಾಗಿದೆ. ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸುರಕ್ಷಿತ ದೃಷ್ಟಿಯಿಂದ ಭದ್ರತೆ ಎಂಬುದೇ ಇಲ್ಲವಾಗಿದೆ.
ನಿಯಮಗಳ ಪ್ರಕಾರ ರೈಲ್ವೆ ಹಳಿಯ ಮೇಲೆ ಓಡಾಡುವಂತಿಲ್ಲ. ಆದರೆ ಮಂಗಳೂರು ರೈಲು ನಿಲ್ದಾಣದಲ್ಲಿ ರೈಲ್ವೆ ಟ್ರ್ಯಾಕ್ನಲ್ಲಿಯೇ ಇಳಿದು ಕೆಲವರು ಅತ್ತಿಂದಿತ್ತ ಓಡಾಟ ನಡೆಸುತ್ತಿದ್ದಾರೆ. ಇದು ರೈಲ್ವೆ ಪೊಲೀಸರ ಗಮನಕ್ಕೆ ಬಂದರೂ ಯಾವ ಕ್ರಮವೂ ಆಗುತ್ತಿಲ್ಲ. ರೈಲು ನಿಲ್ದಾಣದಲ್ಲಿ ದಿನನಿತ್ಯ ಸಾವಿರಾರು ಮಂದಿ ಪ್ರಯಾಣಿಕರು ಬರುತ್ತಾರೆ. ಇಂತಹ ಸ್ಥಳದಲ್ಲಿ ಪ್ರಯಾಣಿಕರ ಸುರಕ್ಷತೆ ಅಗತ್ಯ. ಆದರೆ ರೈಲ್ವೆ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿಗೆ ಸಾರ್ವಜನಿಕರಿಂದ ಆಕ್ರೋಶ ಕೇಳಿ ಬರುತ್ತಿದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ: ಆರೋಪಿ ಅರೆಸ್ಟ್
ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುದದ್ವಾರದಲ್ಲಿ ಬಚ್ಚಿಟ್ಟು ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಅಕ್ರಮವಾಗಿ ಸಾಗಿಸಲಾಗುತ್ತಿದ್ದ 98.68 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಆರೋಪಿ ದುಬೈನಿಂದ ಚಿನ್ನವನ್ನು ಪೇಸ್ಟ್ ರೂಪಕ್ಕೆ ಪರಿವರ್ತಿಸಿ ಚಿನ್ನದ ಪೇಸ್ಟ್ನ್ನು ಕ್ಯಾಪ್ಸೂಲ್ಗಳಲ್ಲಿ ತುಂಬಿಸಿಟ್ಟು ಗುದದ್ವಾರದಲ್ಲಿ ಅಡಗಿಸಿ ಸಾಗಾಟ ಮಾಡಲು ಯತ್ನಿಸಿದ್ದಾನೆ. ದುಬೈನಿಂದ ಬಂದ ಪ್ರಯಾಣಿಕನ ವರ್ತನೆಯ ಮೇಲೆ ಅನುಮಾನಗೊಂಡಿದ್ದ ಕಸ್ಟಮ್ಸ್ ಅಧಿಕಾರಿಗಳು ಪ್ರಯಣಿಕನನ್ನು ವಶಕ್ಕೆ ಪಡೆದು ಶೋಧ ನಡೆಸಿದಾಗ ಅಕ್ರಮ ಚಿನ್ನ ಸಾಗಾಟ ಬಯಲಾಗಿದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications