ನನ್ನನ್ನು ಕೊಂದರೂ ಪರವಾಗಿಲ್ಲ, ರಾಮಮಂದಿರ ಹೇಳಿಕೆಗೆ ಬದ್ಧ: ಪೂಜಾರಿ
ಮಂಗಳೂರು, ಡಿಸೆಂಬರ್ 9: ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಬಿ. ಜನಾರ್ದನ ಪೂಜಾರಿ ಅವರಿಗೆ ಜೀವ ಬೆದರಿಕೆ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಖುದ್ದು ಅವರೇ ಪ್ರತಿಕ್ರಿಯಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ತೃಪ್ತಿ ಸಿಗುವುದಿದ್ದರೆ ಎನ್ ಕೌಂಟರ್ ಮಾಡಿ ಸಾಯಿಸಲಿ ಎಂದು ಹೇಳಿದರು.
ನನಗೆ ಬೆದರಿಕೆ ಹಾಕಿದಾತನಿಗೆ ತೃಪ್ತಿ ಸಿಗುವುದಿದ್ದರೆ ನನ್ನನ್ನ ಕೊಲ್ಲಲಿ. ರಾಮಮಂದಿರ ನಿರ್ಮಾಣ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ. ರಾಮ, ಮಹಮ್ಮದ್ ಪೈಗಂಬರ್, ಏಸು ದೇವರೆಂದು ನಂಬುವವ ನಾನು ಎಂದು ಅವರು ಸ್ಪಷ್ಟಪಡಿಸಿದರು. ದೇವರನ್ನು ನಂಬಿ ಎಂದು ಆಯಾಯ ಧರ್ಮದವರಿಗೆ ಹೇಳಿದ್ದು ತಪ್ಪಾ ಎಂದು ಪ್ರಶ್ನಿಸಿದ ಅವರು, ಬೆದರಿಕೆ ಆಡಿಯೋ ಸಂದೇಶ ನೀಡಿದ್ದ ವ್ಯಕ್ತಿಗೆ ತೃಪ್ತಿ ಸಿಗುವುದಿದ್ದರೆ ನನ್ನನ್ನು ಕೊಲ್ಲಲಿ ಎಂದು ಅವರು ತಿಳಿಸಿದರು.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಪರ ಹೇಳಿಕೆ ನೀಡಿದ್ದ ಪೂಜಾರಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತ ಎಂದು ಪರಿಚಯಿಸಿದ್ದ ವ್ಯಕ್ತಿ, ಜನಾರ್ದನ ಪೂಜಾರಿ ಅವರನ್ನು ಎನ್ ಕೌಂಟರ್ ನಲ್ಲಿ ಕೊಲ್ಲಬೇಕು ಎಂದು ಆಡಿಯೋ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ. ಈ ಬಗ್ಗೆ ಭಾರಿ ಅಕ್ರೋಶ ವ್ಯಕ್ತವಾಗಿತ್ತು.

ಪೂಜಾರಿ ಅವರು ರಾಮಮಂದಿರ ನಿರ್ಮಾಣ ಕುರಿತಂತೆ ನೀಡಿದ ಹೇಳಿಕೆಯನ್ನು ದಕ್ಷಿಣ ಕನ್ನಡ ಮುಸ್ಲಿಂ ಸಂಘಟನೆಗಳ ಒಕ್ಕೂಟ ಖಂಡಿಸಿ, ವಿರೋಧ ವ್ಯಕ್ತಪಟಿಸಿತ್ತು. ಈ ಮಧ್ಯೆ ವ್ಯಕ್ತಿಯೊಬ್ಬ ಜನಾರ್ದನ ಪೂಜಾರಿ ಅವರನ್ನು ಎನ್ ಕೌಂಟರ್ ಮಾಡಬೇಕು, ಗಡೀಪಾರು ಮಾಡಬೇಕು, ಕಾಂಗ್ರೆಸ್ ಪಕ್ಷದಿಂದ ಈ ಕೂಡಲೇ ವಜಾ ಮಾಡಬೇಕು ಎಂದು ಆಡಿಯೋ ಸಂದೇಶ ಕಳುಹಿಸಿದ್ದ.
ಜನಾರ್ದನ ಪೂಜಾರಿ ಅವರಿಗೆ ಎನ್ ಕೌಂಟರ್ ನಲ್ಲಿ ಕೊಲ್ಲ ಬೇಕು ಎಂದಿದ್ದ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಕಾಂಗ್ರೆಸ್ ಹಿರಿಯ ಮುಖಂಡರು ಪೊಲೀಸ್ ಅಧಿಕಾರಿಗಳನ್ನು ಇತ್ತೀಚೆಗೆ ಒತ್ತಾಯಿಸಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications