ವಾರಾಂತ್ಯ ಕುಕ್ಕೆ ಸುಬ್ರಹ್ಮಣ್ಯ ಪ್ರವಾಸ ಹೋಗುವ ಭಕ್ತರ ಗಮನಕ್ಕೆ
ಮಂಗಳೂರು, ಡಿಸೆಂಬರ್ 06; ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕೇಂದ್ರ ಕುಕ್ಕೆ ಸುಬ್ರಮಣ್ಯ. ಪ್ರತಿನಿತ್ಯ ನೂರಾರು ಭಕ್ತರು ದೇವಾಲಯಕ್ಕೆ ಭೇಟಿ ನೀಡುತ್ತಾರೆ. ವಾರಾಂತ್ಯ, ಸರ್ಕಾರಿ ರಜೆ ದಿನಗಳಲ್ಲಿ ದೇವಾಲಯಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಾರೆ.
ಈ ವಾರಾಂತ್ಯದಲ್ಲಿ ಕುಕ್ಕೆ ಸುಬ್ರಮಣ್ಯ ಪ್ರವಾಸ ಕೈಗೊಳ್ಳುವ ಭಕ್ತರಿಗೆ ಮಹತ್ವದ ಮಾಹಿತಿಯೊಂದಿದೆ. ದೇವಾಲಯಲ್ಲಿ ದರ್ಶನ ಮತ್ತು ವಿವಿಧ ಸೇವೆಗಳು ಅರ್ಧ ದಿನದ ಕಾಲ ಲಭ್ಯವಿರುವುದಿಲ್ಲ ಎಂದು ದೇವಾಲಯದ ಆಡಳಿತ ಮಂಡಳಿ ಹೇಳಿದೆ.

ಪತ್ರಿಕಾ ಪ್ರಕಟಣೆ; ಮಹಾತೋಭಾರ ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನ, ಸುಬ್ರಮಣ್ಯ, ಕಡಬ ತಾಲೂಕು ದಕ್ಷಿಣ ಕನ್ನಡ ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ವಾರಾಂತ್ಯದಲ್ಲಿ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡುವ ಭಕ್ತರು ಈ ಮಾಹಿತಿ ತಿಳಿದಿರುವುದು ಉತ್ತಮ.
ಶ್ರೀ ದೇವಳದಲ್ಲಿ 2023-24ನೇ ಸಾಲಿನ ವಾರ್ಷಿಕ ಜಾತ್ರಾ ಮಹೋತ್ಸವ ಸಂಬಂಧ ದಿನಾಂಕ 09/12/2023ರ ಶನಿವಾರ "ಮೂಲಮೃತಿಕಾ" ಪ್ರಸಾದ ತೆಗೆಯುವ ಕಾರ್ಯಕ್ರಮ ಇರುತ್ತದೆ. ಆದ್ದರಿಂದ ಭಕ್ತಾದಿಗಳಿಗೆ ಬೆಳಗ್ಗಿನಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಶ್ರೀ ದೇವರ ದರ್ಶನ ಹಾಗೂ ಸೇವೆ ನೆರವೇರಿಸಲು ಅವಕಾಶವಿರುವುದಿಲ್ಲ. ಭಕ್ತಾದಿಗಳು ಸಹಕರಿಸಬೇಕು ಎಂದು ಮನವಿ ಮಾಡಲಾಗಿದೆ.
ಕುಕ್ಕೆ ಸುಬ್ರಮಣ್ಯದಲ್ಲಿ "ಮೂಲಮೃತಿಕಾ" ಪ್ರಸಾದಕ್ಕೆ ಹೆಚ್ಚಿನ ಮಹತ್ವವಿದೆ. ಮೂಲಸ್ಥಾನವಾದ ಕುಕ್ಕೆ ಸುಬ್ರಮಣ್ಯ ದೇವಳದ ಗರ್ಭಗುಡಿಯಿಂದ ತೆಗೆಯುವ ಕ್ಷೇತ್ರದ ಅತ್ಯಂತ ಪವಿತ್ರ ಪ್ರಸಾದ. ಯಾವುದೇ ದೇವಾಲಯದಲ್ಲಿ ಸಹ ಈ ಮಾದರಿ ಪ್ರಸಾದ ಸಿಗುವುದಿಲ್ಲ. ವರ್ಷಕ್ಕೆ ಒಂದು ಬಾರಿ ಮಾತ್ರ ಈ ಪ್ರಸಾದ ತೆಗೆಯಲಾಗುತ್ತದೆ.
ಕ್ಷೇತ್ರದ ಮೂಲಸ್ಥಾನವಾದ ಗರ್ಭಗುಡಿಯಿಂದ ಈ ಮೂಲಮೃತಿಕಾ ಪ್ರಸಾದವನ್ನು ತೆಗೆದು ಭಕ್ತರಿಗೆ ನೀಡಲಾಗುತ್ತದೆ. ಈ ಪ್ರಸಾದವು ರೋಗ ನಿರೋಧಕ ಶಕ್ತಿ ಹೊಂದಿದೆ ಎಂಬುದು ಭಕ್ತರ ನಂಬಿಕೆಯಾಗಿದೆ. ಚರ್ಮರೋಗಗಳ ಪರಿಹಾರಕ್ಕೆ ಇದು ಉತ್ತಮ ಔಷಧಿ.
ಸಾವಿರಾರು ಭಕ್ತರು ಮೂಲಮೃತಿಕಾ ಪ್ರಸಾದವನ್ನು ತೆಗೆದುಕೊಂಡು ಹೋಗಲು ಕುಕ್ಕೆ ಸುಬ್ರಮಣ್ಯ ಕ್ಷೇತ್ರಕ್ಕೆ ಆಗಮಿಸುತ್ತಾರೆ. ಶುಭ ಕಾರ್ಯಗಳ ಸಂದರ್ಭದಲ್ಲಿ, ರೋಗಗಳ ನಿವಾರಣೆಗೆ ಸಹ ಈ ಪ್ರಸಾದವನ್ನು ಬಳಕೆ ಮಾಡುತ್ತಾರೆ.
ನಾಗಾರಾಧನೆಯ ಪುಣ್ಯ ಕ್ಷೇತ್ರವಾದ ಕುಕ್ಕೆ ಸುಬ್ರಮಣ್ಯಕ್ಕೆ ಆಶ್ಲೇಷ ಬಲಿ ಸೇರಿದಂತೆ ವಿವಿಧ ಸೇವೆಗಳನ್ನು ಮಾಡಿಸಲು, ದೇವರ ದರ್ಶನ ಪಡೆಯಲು ಪ್ರತಿನಿತ್ಯ ನೂರಾರು ಜನರು ಆಗಮಿಸುತ್ತಾರೆ. ವಾರಾಂತ್ಯದಲ್ಲಿ ಆಗಮುವು ಭಕ್ತರ ಸಂಖ್ಯೆ ಹೆಚ್ಚಾಗಿರುತ್ತದೆ.
ಕರ್ನಾಟಕದ ಸರ್ಕಾರದ 'ಶಕ್ತಿ' ಯೋಜನೆ ಜಾರಿಯಾದ ಬಳಿಕ ಕುಕ್ಕೆ ದೇವಾಲಯಕ್ಕೆ ಆಗಮಿಸುವ ಮಹಿಳಾ ಭಕ್ತರ ಸಂಖ್ಯೆಯೂ ಹೆಚ್ಚಾಗಿದೆ. ವಾರಾಂತ್ಯದಲ್ಲಿ ಹೆಚ್ಚಿನ ಭಕ್ತರು ಆಗಮಿಸುವುದರಿಂದ ಅರ್ಧ ದಿನಗಳ ಕಾಲ ದೇವಾಲಯದಲ್ಲಿ ಸೇವೆಗಳು ಲಭ್ಯವಿರುವುದಿಲ್ಲ ಎಂದು ದೇವಾಲಯದ ಆಡಳಿತ ಮಂಡಳಿ ಮಾಹಿತಿ ನೀಡಿದೆ.
ಕರ್ನಾಟಕದ ಮುಜರಾಯಿ ಇಲಾಖೆ ವ್ಯಾಪ್ತಿಗೆ ಸೇರುವ ದೇವಾಲಯದಲ್ಲಿ ಅತ್ಯಂತ ಶ್ರೀಮಂತ ದೇಗುಲ ಕುಕ್ಕೆ ಸುಬ್ರಮಣ್ಯ. ಕರ್ನಾಟಕ ಸರ್ಕಾರ ದೇವಾಲಯದ ಆಡಳಿತ ನೋಡಿಕೊಳ್ಳಲು ಕುಕ್ಕೆ ಸುಬ್ರಮಣ್ಯ ಅಭಿವೃದ್ಧದಿ ಪ್ರಾಧಿಕಾರ ರಚನೆ ಮಾಡಲಿದೆ ಎಂಬ ಸುದ್ದಿಗಳಿ ಕೆಲವು ವರ್ಷಗಳ ಹಿಂದೆ ಕೇಳಿ ಬಂದಿತ್ತು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications