ಬಾಹುಬಲಿ ಮಸ್ತಕಾಭಿಷೇಕ:ಗಮನಸೆಳೆದ ಶಂಕರ್ ಮಹಾದೇವನ್ ದೇಶಭಕ್ತಿ ಗೀತೆ
ಮಂಗಳೂರು, ಫೆಬ್ರವರಿ 18: ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಸಿಆರ್ ಪಿಎಫ್ ಯೋಧರ ಮೇಲೆ ಉಗ್ರರು ನಡೆಸಿದ ದಾಳಿಗೆ ವಿಶ್ವದೆಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಉಗ್ರರ ದಾಳಿಯನ್ನು ಒಕ್ಕೊರಲಿನಿಂದ ಖಂಡಿಸಲಾಗುತ್ತಿದೆ. ಹುತಾತ್ಮರಾದ ಯೋಧರಿಗೆ ದೇಶದೆಲ್ಲೆಡೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತಿದೆ. ಪ್ರತಿಕಾರಕ್ಕಾಗಿ ಧ್ವನಿ ಗಟ್ಟಿಗೊಳ್ಳುತ್ತಿದೆ.
ಉಗ್ರರ ಪೈಶಾಚಿಕ ಕೃತ್ಯಕ್ಕೆ ಖ್ಯಾತ ಗಾಯಕ ಶಂಕರ್ ಮಹಾದೇವನ್ ಸಹ ಖಂಡನೆ ವ್ಯಕ್ತಪಡಿಸಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಶ್ಮೀರದಲ್ಲಿ ಸಿ.ಆರ್.ಪಿ.ಎಫ್ ಯೋಧರ ಮೇಲೆ ನಡೆದ ದಾಳಿಗೆ ಪ್ರತೀಕಾರ ನಡೆಯಬೇಕು ಎಂದರು.
ಧರ್ಮಸ್ಥಳದಲ್ಲಿ ಬಾಹುಬಲಿ ಮಸ್ತಕಾಭಿಷೇಕ ಕಾರ್ಯಕ್ರಮದ ಪ್ರಯುಕ್ತ ನಿನ್ನೆ ರಾತ್ರಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ ಅವರು, ಸಂಗೀತ ಕಚೇರಿ ಆರಂಭಕ್ಕೂ ಮೊದಲು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿದರು. ನೆರೆದಿದ್ದ ಸಂಗೀತ ಪ್ರೇಮಿಗಳಿಗೆ ಒಂದು ನಿಮಿಷಗಳ ಕಾಲ ಮೌನ ಪ್ರಾರ್ಥನೆ ನಡೆಸುವಂತೆ ಕೋರಿಕೊಂಡರು.

ಆನಂತರ ಸೈನಿಕರ ಮನೋಬಲವನ್ನು ಹೆಚ್ಚಿಸುವಂತಹ ಲಕ್ಷ್ ಚಿತ್ರದ 'ಹಾ ಯಹೀ ರಸ್ತಾ ಹೈ ತೇರಾ ತೂನೇ ಅಬ್ ಜಾನಾ ಹೈ ಎನ್ನುವ ಹಾಡು ಹಾಡಿದರು. ನೆರೆದಿದ್ದ ಸಂಗೀತ ಪ್ರಿಯರು ಹಾಡಿಗೆ ತಲೆತೂಗಿದರಲ್ಲದೆ, ಸೈನಿಕರು ಕೂಡಲೇ ತಮ್ಮ ಮೇಲಾದ ದಾಳಿಗೆ ಪ್ರತಿದಾಳಿ ನಡೆಸಬೇಕೆಂದು ಒತ್ತಾಯಿಸಿದರು.
ಖ್ಯಾತ ಚಿತ್ರಕಲಾವಿದ ವಿಲಾಸ್ ನಾಯಕ್ ಕೂಡ ಸೈನಿಕರ ಹಾಡಿಗೆ ಚಿತ್ರ ಬಿಡಿಸುವ ಮೂಲಕ ಯೋಧರ ಬಗ್ಗೆ ತಮ್ಮ ಗೌರವವನ್ನು ಸೂಚಿಸಿದರು. ಹಿಂದಿ ಚಿತ್ರಗೀತೆಗಳ ಜೊತೆಗೆ ಕನ್ನಡದ ಪ್ರಸಿದ್ಧ ಹಾಡುಗಳು ಸಾವಿರಾರು ಸಂಗೀತಪ್ರಿಯರನ್ನು ಮೋಡಿ ಮಾಡಿತು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications