ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

RSS ಶರತ್ ಹತ್ಯೆಯ ಪ್ರಮುಖ ಆರೋಪಿ ಬಂಧನ

|
Google Oneindia Kannada News

ಮಂಗಳೂರು, ಆಗಸ್ಟ್ 21: ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣದ ಮತ್ತೋರ್ವ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಜುಲೈ 04ರಂದು ಬಂಟ್ವಾಳದ ಬಿ.ಸಿ ರೋಡ್ ನಲ್ಲಿ ರಾತ್ರಿ ಬೈಕಿನಲ್ಲಿ ಬಂದ 3 ಮಂದಿ ದುಷ್ಕರ್ಮಿಗಳ ತಂಡ ಶರತ್ ಮಡಿವಾಳ್ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿ ಪರಾರಿಯಾಗಿತ್ತು. ಈ 3 ಮಂದಿ ಆರೋಪಿಗಳ ಪೈಕಿ ಸೋಮವಾರ ಮೈಸೂರಿನಲ್ಲಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

Sharath Madivala murder Maim accused arrested in Mysuru

ಬಂಧಿತ ಆರೋಪಿಯನ್ನು ಶರೀಫ್ ಎಂದು ಗುರುತಿಸಲಾಗಿದ್ದು, ಈತನನ್ನು ಮೈಸೂರಿನಲ್ಲಿ ಬಂಧಿಸಿ ಮಂಗಳೂರಿಗೆ ಕರೆತರಲಾಗಿದೆ.

ಶರತ್ ಮಡಿವಾಳ ಹತ್ಯೆ ಪ್ರಕರಣ, ಮತ್ತಿಬ್ಬರು ಆರೋಪಿಗಳ ಬಂಧನಶರತ್ ಮಡಿವಾಳ ಹತ್ಯೆ ಪ್ರಕರಣ, ಮತ್ತಿಬ್ಬರು ಆರೋಪಿಗಳ ಬಂಧನ

ಈ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಸಂಖ್ಯೆ ಈಗ ಎಂಟಕ್ಕೆ ಏರಿದೆ. ಇವರಲ್ಲಿ ಶರೀಫ್ ಪ್ರಮುಖ ಆರೋಪಿ ಎಂದು ಹೇಳಲಾಗುತ್ತಿದೆ.

ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬ ಈಗಾಗಲೇ ವಿದೇಶಕ್ಕೆ ಪರಾರಿಯಾಗಿದ್ದಾನೆ ಎಂದು ಸಂಶಯ ವ್ಯಕ್ತವಾಗಿವೆ.

ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದು ವಿದೇಶಕ್ಕೆ ಪರಾರಿಯಾಗಿರುವ ಆರೋಪಿಯ ಬಂಧನಕ್ಕೂ ಪೊಲೀಸರು ತಂತ್ರ ರೂಪಿಸುತ್ತಿದ್ದಾರೆ.

English summary
In connection with the murder of RSS activist Sharath Madivala the police have arrested one more Main accused In Mysuru on August 21th. The arrested is identified as Shariff. With this the number of arrest increase to 8.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X