ಶಿರಾಡಿ ಘಾಟ್ ಬಳಿ ಭೂಕುಸಿತ; ಮಂಗಳೂರು-ಬೆಂಗಳೂರು ಹೆದ್ದಾರಿ ಬಂದ್; ಬದಲಿ ಮಾರ್ಗ ಇಲ್ಲಿದೆ
ಮಂಗಳೂರು, ಜುಲೈ 22: ಮಂಗಳೂರು- ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-75ರ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ದೋಣಿಗಲ್ ಎಂಬಲ್ಲಿ ಭೂಕುಸಿತವಾಗಿದೆ. ಇದರಿಂದ ಶಿರಾಡಿ ಘಾಟ್ ಮುಖಾಂತರ ಸಂಚರಿಸುವ ಎಲ್ಲಾ ವಾಹನಗಳಿಗೆ ಶಿರಾಡಿ ಆರಂಭದ ಗುಂಡ್ಯ ಪ್ರದೇಶದಲ್ಲಿ ತಡೆಹಿಡಿಯಲಾಗಿದೆ.
Recommended Video
ಶಿರಾಡಿ ಘಾಟ್ನ ನಾಲ್ಕು ಕಡೆಗಳಲ್ಲಿ ಗುಡ್ಡ ಕುಸಿತವಾಗಿದ್ದರಿಂದ, ಇನ್ನೂ ನಾಲ್ಕು ದಿನಗಳ ಕಾಲ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ರಸ್ತೆ ಮುಚ್ಚಲಿದೆ. ದೋಣಿಗಲ್ನಲ್ಲಿ ಭಾರೀ ಪ್ರಮಾಣದಲ್ಲಿ ಹೆದ್ದಾರಿ ಕುಸಿತವಾಗಿದ್ದು, ಬೆಂಗಳೂರು ಸಂಪರ್ಕಿಸುವ ಜನರು ಬದಲಿ ಮಾರ್ಗವನ್ನು ಸೂಚಿಸುವಂತೆ ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಹಾಸನ ಪೊಲೀಸ್ ಇಲಾಖೆ ಜನರಿಗೆ ಸೂಚಿಸಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುವ ವಾಹನಗಳು ಚಾರ್ಮಾಡಿ ಘಾಟ್ ಮುಖಾಂತರ ಸಂಚಾರ ಮಾಡುವುದಕ್ಕೆ ಸೂಚಿಸಲಾಗಿದೆ. ಮಂಗಳೂರು ಭಾಗದಿಂದ ಬೆಂಗಳೂರು ಭಾಗಕ್ಕೆ ಹೋಗುವವರು ಚಾರ್ಮಾಡಿ, ಕೊಟ್ಟಿಗೆಹಾರ, ಮೂಡಿಗೆರೆ, ಹಾನ್ಬಾಲ್, ಬೇಲೂರು, ಹಾಸನ, ಬೆಂಗಳೂರು ಮಾರ್ಗವಾಗಿ ಸಂಚಾರ ಮಾಡುವುದಕ್ಕೆ ಪೊಲೀಸ್ ಇಲಾಖೆ ನಿರ್ದೇಶನ ನೀಡಿದೆ.

ಅಲ್ಲದೇ ಘನ ವಾಹನಗಳು ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿ ಮೂಲಕವೂ ಬೆಂಗಳೂರಿಗೆ ಸಂಪರ್ಕಿಸಲು ಸೂಚಿಸಿದೆ. ಹೆದ್ದಾರಿ ಕುಸಿತದ ಮಾಹಿತಿ ಇಲ್ಲದೇ ಹಲವು ವಾಹನಗಳ ಶಿರಾಡಿ ರಸ್ತೆಯಲ್ಲಿ ಸಂಚರಿಸಿದ್ದು, ಕೆಲವು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications