ಶಿರಾಡಿ ಘಾಟ್ ಭಾನುವಾರ ಸಂಚಾರಕ್ಕೆ ಮುಕ್ತ, ಮೈಮರೆತರೆ ಪ್ರಪಾತಕ್ಕೆ ಖಚಿತ
ಮಂಗಳೂರು, ಜುಲೈ 14: ಮಂಗಳೂರು - ಬೆಂಗಳೂರು ಮಧ್ಯೆ ಸಂಚರಿಸುವ ವಾಹನ ಸವಾರರಿಗೊಂದು ಸಂತಸದ ಸುದ್ದಿ. ಆರು ತಿಂಗಳಿನಿಂದ ವಾಹನ ಸಂಚಾರ ಸಂಪೂರ್ಣ ನಿಷೇಧಗೊಂಡಿದ್ದ ಶಿರಾಢಿಘಾಟ್ ರಸ್ತೆ ಭಾನುವಾರದಿಂದ ಸಂಚಾರಕ್ಕೆ ಮುಕ್ತಗೊಳ್ಳಲಿದೆ.
ಶಿರಾಡಿ ಘಾಟ್ ರಸ್ತೆಯ ಎರಡನೇ ಹಂತದ ಕಾಂಕ್ರೀಟ್ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದ ಹಿನ್ನೆಲೆಯಲ್ಲಿ ಭಾನುವಾರದಿಂದ ಈ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತಿದೆ. ಆದರೆ ಈ ರಸ್ತೆಯಲ್ಲಿ ವಾಹನ ಸವಾರರು ಮೈ ಮರೆತೆರೆ ಪ್ರಪಾತಕ್ಕೆ ಉರುಳಿ ಬೀಳುವ ಅತಂಕ ಕೂಡ ಸೃಷ್ಟಿಯಾಗಿದೆ.
ಸುರಕ್ಷತೆ ಕಾಮಗಾರಿ ಮುಗಿಸದೆ ತರಾತುರಿಯಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿದ ಈ ರಸ್ತೆಯಲ್ಲಿ ವಾಹನಗಳ ಸಂಚಾರ ಎಷ್ಟು ಸುರಕ್ಷಿತ ಎನ್ನುವ ಗೊಂದಲ ಈಗ ಕಾಡತೊಡಗಿದೆ.

ಪ್ರತಿ ಮಳೆಗಾಲದ ಸಂದರ್ಭದಲ್ಲೂ ಪ್ರಯಾಣಿಕರಿಗೆ ಭಾರೀ ಸಮಸ್ಯೆ ಕೊಡುತ್ತಿದ್ದ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್ ರಸ್ತೆಗೆ ಕಾಂಕ್ರೀಟ್ ಕಾಮಗಾರಿ ಮಾಡುವ ಕೊನೆಯ ಹಂತಕ್ಕೆ ತಲುಪಿದೆ. ಶಿರಾಡಿಘಾಟ್ ನ 26 ಕಿಲೋಮೀಟರ್ ರಸ್ತೆಗೆ ಕಾಂಕ್ರೀಟ್ ಕಾಮಗಾರಿಗಾಗಿ ಕೇಂದ್ರ ಸರಕಾರ ಸುಮಾರು 183 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಯೋಜನೆಯನ್ನು ಹಮ್ಮಿಕೊಂಡಿತ್ತು.
ಮೊದಲ ಹಂತದಲ್ಲಿ ಕೆಂಪುಹೊಳೆಯಿಂದ ಮಾರನಹಳ್ಳಿವರೆಗಿನ 13 ಕಿಲೋಮೀಟರ್ ಉದ್ದದ ರಸ್ತೆ ಕಾಮಗಾರಿಯನ್ನು ಈಗಾಗಲೇ ಮುಗಿಸಲಾಗಿದ್ದು, ಅಡ್ಡಹೊಳೆಯಿಂದ ಕೆಂಪುಹೊಳೆವರೆಗಿನ 13 ಕಿಲೋಮೀಟರ್ ರಸ್ತೆ ಕಾಮಗಾರಿ ಇದೀಗ ಮುಗಿಯುವ ಹಂತದಲ್ಲಿದೆ.
ಕಾಮಗಾರಿ ಆರಂಭಗೊಂಡು 6 ತಿಂಗಳು ಕಳೆದಿದ್ದು, ಈ ರಸ್ತೆಯುದ್ದಕ್ಕೂ ವಾಹನ ಸಂಚಾರಕ್ಕೆ ಸಂಪೂರ್ಣ ನಿಷೇಧ ಹೇರಲಾಗಿತ್ತು. ಇದೀಗ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿರುವ ಹಿನ್ನೆಲೆಯಲ್ಲಿ ಜುಲೈ 15ರಿಂದಲೇ ವಾಹನ ಸಂಚಾರಕ್ಕೆ ಮುಕ್ತಗೊಳಲಿದೆ.

ಈ ಶಿರಾಡಿಘಾಟ್ ರಸ್ತೆಯು ಅಪಾಯಕಾರಿ ರಸ್ತೆಗಳಲ್ಲಿ ಒಂದು ಎಂದೇ ಪರಿಗಣಿಸಲಾಗುತ್ತದೆ. ಇಲ್ಲಿ ಸುರಕ್ಷತೆಗೆ ಹೆಚ್ಚಿನ ಒತ್ತನ್ನೂ ನೀಡಲಾಗಿದೆ. ರಸ್ತೆಯ ಎರಡೂ ಕಡೆ ಸಂಪೂರ್ಣ ಇಳಿಜಾರು ಪ್ರದೇಶವಾದ ಕಾರಣ ರಸ್ತೆಯ ಎರಡೂ ಭಾಗಕ್ಕೂ ತಡೆಗೋಡೆಗಳನ್ನು ನಿರ್ಮಿಸಲು ನಿರ್ಧರಿಸಲಾಗಿದೆ.
ಆದರೆ, ಈ ಹಂತದಲ್ಲಿ ರಸ್ತೆಯ ಹಲವಾರು ತಿರುವುಗಳಲ್ಲಿ ತಡೆಗೋಡೆಗಳು ಇನ್ನಷ್ಟೇ ನಿರ್ಮಾಣ ಆಗಬೇಕಿದೆ. ಇನ್ನು ಕೆಲವು ಕಡೆಗಳಲ್ಲಿ ಕಟ್ಟಿದ ತಡೆಗೋಡೆ ಕುಸಿದು ಬಿದ್ದಿದೆ.
ಅಲ್ಲದೆ ಮೂರು ಪದರದಲ್ಲಿ ಕಾಂಕ್ರೀಟ್ ಹಾಕಿರುವ ಕಾರಣ ರಸ್ತೆಯು ನೆಲದ ಮಟ್ಟದಿಂದ 1 ಅಡಿಯಷ್ಟು ಎತ್ತರದಲ್ಲಿದೆ. ಅದನ್ನು ಸಮತಟ್ಟಾಗಿಸಲು ಇಕ್ಕೆಲಗಳಲ್ಲೂ ಮಣ್ಣನ್ನು ತುಂಬುವ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಇದರಿಂದಾಗಿ ಕೆಲವು ಕಡೆ ವಾಹನ ಚಾಲಕರು ಕೊಂಚ ಆಯ ತಪ್ಪಿದರೂ ಪಾತಾಳಕ್ಕೆ ಉರುಳಿ ಬೀಳುವ ಅಪಾಯವಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications