ಜ.20ರಿಂದ ಶಿರಾಡಿ ಘಾಟ್ ಬಂದ್, ಪರ್ಯಾಯ ಮಾರ್ಗಗಳು
ಮಂಗಳೂರು, ಜನವರಿ 17 : ಬೆಂಗಳೂರು-ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್ ರಸ್ತೆಯಲ್ಲಿ ಜ.20ರಿಂದ ವಾಹನ ಸಂಚಾರ ಸ್ಥಗಿತಗೊಳ್ಳಲಿದೆ. ಪರ್ಯಾಯ ಮಾರ್ಗಗಳನ್ನು ಜಿಲ್ಲಾಡಳಿತ ಸಿದ್ಧಗೊಳಿಸಿದೆ.
ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕೆಂಪುಹೊಳೆ ಗೆಸ್ಟ್ ಹೌಸ್ನಿಂದ ಅಡ್ಡಹೊಳೆವರೆಗಿನ ರಸ್ತೆಯನ್ನು ಕಾಂಕ್ರೀಟ್ ರಸ್ತೆಯಾಗಿ ಅಭಿವೃದ್ಧಿ ಮಾಡಲಾಗುತ್ತಿದೆ. ಇದಕ್ಕಾಗಿ ವಾಹನ ಸಂಚಾರವನ್ನು ಬಂದ್ ಮಾಡಲಾಗುತ್ತದೆ.
ಶಿರಾಡಿ ಘಾಟ್ ರಸ್ತೆಯನ್ನು ಸಂಪೂರ್ಣವಾಗಿ ಕಾಂಕ್ರಿಟ್ ರಸ್ತೆಯಾಗಿ ಅಭಿವೃದ್ಧಿ ಮಾಡಲು ಎರಡು ಹಂತದಲ್ಲಿ ಸರ್ಕಾರ ಕಾಮಗಾರಿ ಕೈಗೊಂಡಿದೆ. ಮೊದಲ ಹಂತದ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ.

ಈಗ ಎರಡನೇ ಹಂತದಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೆಂಪುಹೊಳೆ ಸೇತುವೆಯಿಂದ ದಕ್ಷಿಣಕನ್ನಡ ಜಿಲ್ಲೆಯ ಅಡ್ಡಹೊಳೆ ಸೇತುವೆ ತನಕ 12.37 ಕಿ.ಮೀ.ರಸ್ತೆಯನ್ನು ಕಾಂಕ್ರಿಟ್ ರಸ್ತೆಯಾಗಿ ಅಭಿವೃದ್ಧಿ ಮಾಡುವ ಕಾಮಗಾರಿ ನಡೆಯಲಿದೆ.
ಪರ್ಯಾಯ ಮಾರ್ಗಗಳು
* ಲಘು ವಾಹನ : ಹಾಸನ-ಬೇಲೂರು, ಮೂಡಿಗೆರೆ-ಚಾರ್ಮಾಡಿ ಘಾಟ್-ಬೆಳ್ತಂಗಡಿ-ಉಜಿರೆ-ಬಿ.ಸಿ.ರೋಡ್-ಮಂಗಳೂರು, ಹಾಸನ-ಸಕಲೇಶಪುರ-ಆನೆಮಹಲ್, ಹಾನ್ಬಾಳ್-ಜೆನ್ನಾಪುರ, ಮೂಡಿಗೆರೆ-ಚಾರ್ಮಾಡಿ ಘಾಟ್-ಬೆಳ್ತಂಗಡಿ-ಉಜಿರೆ, ಹಾಸನ-ಮೂಡಿಗೆರೆ-ಕೊಟ್ಟಿಗೆಹಾರ-ಕಳಸ-ಕುದುರೆಮುಖ-ಮಾಲಘಾಟ್, ಪುತ್ತೂರು-ಮಡಿಕೇರಿ-ಹುಣಸೂರು, ಶಿವಮೊಗ್ಗ-ಆಯನೂರು-ಹೊಸನಗರ-ಮಾಸ್ತಿಕಟ್ಟೆ-ಹೊಸಂಗಡಿ-ಸಿದ್ದಾಪುರ-ಕುಂದಾಪುರ ಮಾರ್ಗದಲ್ಲಿ ಸಂಚರಿಸಬಹುದು.
* ಭಾರಿ ವಾಹನಗಳು : ಮಂಗಳೂರು-ಬಿ.ಸಿ.ರೋಡ್-ಮಾಣಿ, ಪುತ್ತೂರು-ಮಡಿಕೇರಿ-ಹುಣಸೂರು, ಕೆ.ಆರ್.ನಗರ-ಹೊಳೆನರಸೀಪುರ-ಹಾಸನ, ಮೈಸೂರು-ಮಂಡ್ಯ-ರಾಮನಗರ-ಬೆಂಗಳೂರು, ಬೆಂಗಳೂರು-ಶಿವಮೊಗ್ಗ-ಾಆಯನೂರು-ಹೊಸನಗರ, ಬೆಂಗಳೂರು-ನೆಲಮಂಗಲ-ಶಿವಮೊಗ್ಗ-ಸಾಗರ-ಹೊನ್ನಾವರ-ಮುರುಡೇಶ್ವರ-ಕುಂದಾಪುರ-ಉಡುಪಿ-ಮಂಗಳೂರು ಮಾರ್ಗದಲ್ಲಿ ಸಂಚಾರ ನಡೆಸಬಹುದಾಗಿದೆ.
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications