Kukke Subrahmanya: ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನಕ್ಕೆ ತೆರಳುವ ಪಾದಯಾತ್ರಿಗಳ ಗಮನಕ್ಕೆ
ಮಂಗಳೂರು, ಮಾರ್ಚ್ 07: ನಾಡಿನೆಲ್ಲಡೆ ಶಿವರಾತ್ರಿ ಸಂಭ್ರಮ ಮನೆ ಮಾಡಿದ್ದು, ರಾಜ್ಯದ ಪ್ರಮುಖ ಶಿವನ ದೇವಾಲಯಗಳಲ್ಲಿ ವಿಶೇಷ ಪೂಜೆ ಹಾಗೂ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಸಾಮಾನ್ಯವಾಗಿ ಶಿವರಾತ್ರಿಯ ಸಮಯದಲ್ಲಿ ದಕ್ಷಿಣ ಕನ್ನಡ ಪ್ರಮುಖ ದೇವಾಲಯಗಳಾದ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಭಕ್ತಾಧಿಗಳು ಪಾದಯಾತ್ರೆ ಬರುತ್ತಾರೆ.
ಎಂದಿನಂತೆ ಈ ವರ್ಷವೂ ಕೂಡ ನೂರಾರು ಭಕ್ತರು ಧರ್ಮಸ್ಥಳ ಹಾಗೂ ಸುಬ್ರಮಣ್ಯದತ್ತ ಹೆಜ್ಜೆ ಹಾಕುತ್ತಿದ್ದು, ಮಹಾ ಶಿವರಾತ್ರಿಯ ದಿನ ದೇವಾಲಯಗಳನ್ನು ತಲುಪಲಿದ್ದಾರೆ. ಈಗಾಗಲೇ ಕೆಲವು ತಂಡಗಳ ಚಾರ್ಮಾಡಿ ಸೇರಿದಂತೆ ದೇವಾಲಯದ ಸಮೀಪದ ಪ್ರದೇಶಗಳಲ್ಲಿದ್ದಾರೆ. ರಾಜ್ಯದ ವಿವಿಧ ಭಾಗಗಳಿಂದ ಪಾದಯಾತ್ರೆ ಹೊರಟಿರುವ ಭಕ್ತಾಧಿಗಳಿಗೆ ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನ ಆಡಳಿತ ಮಂಡಳಿ ಕೆಲವು ಸೂಚನೆಯನ್ನು ನೀಡಿದೆ.

ಶಿವರಾತ್ರಿ ಪ್ರಯುಕ್ತ ಪಾದಯಾತ್ರೆ ಬರುವ ಭಕ್ತರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಕೂಡ ಅತ್ಯಧಿಕ ಸಂಖ್ಯೆಯಲ್ಲಿ ಭೇಟಿ ಕೊಡುತ್ತಿದ್ದಾರೆ. ದಯವಿಟ್ಟು ಪಾದಯಾತ್ರೆಯಲ್ಲಿ ಬರುವ ಭಕ್ತರಲ್ಲಿ ವಿನಂತಿ, ನೀವು ನಡೆದು ಬರುತ್ತಿರುವ ದಾರಿ ಕಾಡುದಾರಿ ಅದು ಸಾವಿರಾರು ಪ್ರಾಣಿಗಳ ಆವಾಸ ಸ್ಥಾನ.
ದಯವಿಟ್ಟು ತಾವುಗಳು ಪ್ಲಾಸ್ಟಿಕ್, ಬಟ್ಟೆ, ಪೇಪರ್, ಬಿಸಾಡಬೇಡಿ ಮತ್ತು ತಮ್ಮ ಉಳಿದ ಆಹಾರವನ್ನು ಆ ಮುಗ್ಧ ಪ್ರಾಣಿಗಳಿಗೆ ಬಿಸಾಡಬೇಡಿ. ಒಮ್ಮೆ ನೀವು ಆಹಾರ ಕೊಟ್ಟರೆ ಆ ಮುದ್ದು ಪ್ರಾಣಿಗಳು ಸುಲಭದಲ್ಲಿ ಸಿಗುವ ಆಹಾರಕೊಸ್ಕರ ರಸ್ತೆಯನ್ನೇ ಅವಲಂಬಿಸುತ್ತವೆ. ಮತ್ತೆ ಮುಂದೊಂದು ದಿನ ಅಪಘಾತಕ್ಕೊಳಗಾಗುತ್ತವೆ. ದಯವಿಟ್ಟು ಎಚ್ಚರವಿರಲಿ ಎಂದು ಮನವಿ ಮಾಡಿದ್ದಾರೆ.
ಇನ್ನು ಪಾದಯಾತ್ರೆ ತೆರಳುತ್ತಿರುವ ಭಕ್ತರು ಈ ವಿಚಾರವನ್ನು ಮುಖ್ಯವಾಗಿ ಗಮನಿಸಬೇಕಾಗಿದೆ. ಪಾದಯಾತ್ರೆಗಳು ಸ್ವಚ್ಛತೆ ಕಾಪಾಡಬೇಕು ಎನ್ನುವ ದೃಷ್ಟಿಯಲ್ಲಿ ಸ್ಥಳೀಯರು ದಾರಿಯುದ್ದಕ್ಕೂ ಅಲ್ಲಲ್ಲಿ ಕಸ ಹಾಕಲು ಗೋಣಿ ಚೀಲಗಳನ್ನು ವ್ಯವಸ್ಥೆ ಮಾಡಿದ್ದಾರೆ. ಹೀಗಾಗಿ ಭಕ್ತಾಧಿಗಳು ಕಂಡ ಕಂಡಲ್ಲಿ ಕಸ ಎಸೆಯದೇ ಕಸದ ಬುಟ್ಟಿಗೆ ಹಾಕುವಂತೆ ಸೂಚನೆ ನೀಡಲಾಗಿದೆ.
ಪಾದಯಾತ್ರೆ ಬರುತ್ತಿರುವ ಭಕ್ತಾಧಿಗಳಿಗಾಗಿ ರಸ್ತೆಯ ಬದಿಗಳಲ್ಲಿ ಜ್ಯೂಸ್, ನೀರು, ಕಲ್ಲಂಗಡಿ ಉಪಹಾರ ವ್ಯವಸ್ಥೆ ಮಾಡಲಾಗಿದೆ. ಅರಣ್ಯ ಇಲಾಖೆ ವತಿಯಿಂದ ಮೂಲಕ ಕುಡಿಯುವ ನೀರು, ತಂಗಲು ತಾತ್ಕಾಲಿಕ ಶೆಡ್ ವ್ಯವಸ್ಥೆ ಕೂಡ ಮಾಡಲಾಗಿದೆ. ಉಚಿತ ಆರೋಗ್ಯ ಸೇವೆಯ ಕೌಂಟರ್ಗಳನ್ನು ಸಹ ತೆರೆಯಲಾಗಿದ್ದು, ಆ್ಯಂಬುಲೆನ್ಸ್ಗಳ ವ್ಯವಸ್ಥೆ ಕೂಡ ಮಾಡಲಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications