ಶೋಭಾ ಸಂವಿಧಾನ ತಿಳಿದುಕೊಳ್ಳಲಿ - ಯುಟಿ ಖಾದರ್ ವಾಗ್ದಾಳಿ
ಮಂಗಳೂರು, ಜುಲೈ 21: "ಇತ್ತೀಚೆಗೆ ಕೇಂದ್ರ ಗೃಹ ಸಚಿವರಿಗೆ ನೀಡಿದ ಕೊಲೆಗಳ ಪಟ್ಟಿಯ ಬಗ್ಗೆ ಶೋಭಾ ಆತ್ಮಾವಲೋಕನ ಮಾಡಿಕೊಳ್ಳಲಿ. ಅವರು ಸಂವಿಧಾನ ತಿಳಿದುಕೊಳ್ಳಲಿ," ಎಂದು ಸಚಿವ ಯುಟಿ ಖಾದರ್ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆಯನ್ನು ಟೀಕಿಸಿದ್ದಾರೆ.
ದ.ಕ.ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಶರತ್ ಪ್ರಕರಣವಲ್ಲದೆ ಅಶ್ರಫ್ ಕಲಾಯಿ, ಹರೀಶ್ ಪೂಜಾರಿ, ವಿನಾಯಕ ಬಾಳಿಗಾ, ಪ್ರವೀಣ್ ಪೂಜಾರಿ ಹತ್ಯೆಯ ಬಗ್ಗೆ ಶೋಭಾ ಯಾಕೆ ಮಾತನಾಡುತ್ತಿಲ್ಲ?" ಎಂದು ಪ್ರಶ್ನಿಸಿದ್ದಾರೆ.

"ಸಂಸದೆ ಶೋಭಾ ಕರಂದ್ಲಾಜೆ ತನ್ನ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ಬೇಕಾಬಿಟ್ಟಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಬೆಂಗಳೂರಿನ ಶಿವಾಜಿನಗರದಲ್ಲಿ ನಡೆದ ಕೊಲೆಯಲ್ಲಿ ಭಯೋತ್ಪಾದಕರ ಪಾತ್ರ ಇದೆ ಎಂಬ ಮಾಹಿತಿ ಬಂದ ತಕ್ಷಣ ರಾಜ್ಯ ಸರಕಾರ ಯಾರದೇ ಬೇಡಿಕೆಗೆ ಕಾಯದೆ ಸ್ವಯಂ ಆಗಿ ಎನ್ಐಎ ತನಿಖೆಗೆ ಒಪ್ಪಿಸಿದೆ," ಎಂಬುದನ್ನು ಶೋಭಾ ಕರಂದ್ಲಾಜೆ ತಿಳಿದುಕೊಳ್ಳಬೇಕು ಎಂದು ಖಾದರ್ ಖಾರವಾಗಿ ಹೇಳಿದರು.
"ಐಎಎಸ್ ಅಧಿಕಾರಿ ಅನುರಾಗ್ ತಿವಾರಿಯ ಅಸಹಜ ಸಾವಿನ ಸಂದರ್ಭವೂ ಶೋಭಾ ಸಹಿತ ಬಿಜೆಪಿಗರು ಬೇಕಾಬಿಟ್ಟಿ ಆರೋಪ ಸುರಿಸಿದರು. ಆದರೆ, ವಿಧಾನಸಭೆಯಲ್ಲಿ ಬಿಜೆಪಿ ಶಾಸಕರೇ ಇದರ ಬಗ್ಗೆ ಸೊಲ್ಲೆತ್ತಲಿಲ್ಲ. ಹೀಗೆ ಅಸ್ತಿತ್ವ ಕಳಕೊಂಡಿರುವ ಶೋಭಾ ಶರತ್ ಹತ್ಯೆಯನ್ನು ಎನ್ಐಎಗೆ ಕೊಡಿ ಎನ್ನುತ್ತಾರೆ. ಎನ್ಐಎಗೆ ಯಾವುದನ್ನು ಕೊಡಬೇಕು ಮತ್ತು ಕೊಡಬಾರದು ಎಂಬ ಕನಿಷ್ಠ ಜ್ಞಾನ ಸಂಸದೆಯಾದ ಶೋಭಾರಿಗೆ ಇಲ್ಲವೇ?
ಅವರು ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ತಪ್ಪು ಮಾಹಿತಿ ರವಾನಿಸುತ್ತಿದ್ದಾರೆ," ಎಂದು ಸಚಿವ ಯು.ಟಿ.ಖಾದರ್ ಆರೋಪಿಸಿದರು.
-
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral












Click it and Unblock the Notifications